AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ

ನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ
ಬ್ರಹ್ಮೋಸ್ ಕ್ಷಿಪಣಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 23, 2022 | 7:32 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನು (BrahMos missile) ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾ ಮಾಡಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. 2022 ಮಾರ್ಚ್ 09ರಂದು ಬ್ರಹ್ಮೋಸ್ ಕ್ಷಿಪಣಿಯನ್ನು ಆಕಸ್ಮಿಕವಾಗಿ ಉಡಾಯಿಸಲಾಗಿದೆ. ಘಟನೆಯ ಜವಾಬ್ದಾರಿಯನ್ನು ನಿಗದಿಪಡಿಸುವುದು ಸೇರಿದಂತೆ ಪ್ರಕರಣದ ಸತ್ಯಗಳನ್ನು ಹೊರತರಲು ಸ್ಥಾಪಿಸಲಾದ ನ್ಯಾಯಾಲಯವು (Court of Inquiry-Col), ಮೂವರು ಅಧಿಕಾರಿಗಳು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOP) ನಿಂದ ಮಾಡಿದ ವಿಚಲನವು ಕ್ಷಿಪಣಿಯ ಆಕಸ್ಮಿಕ ಉಡಾವಣೆಗೆ ಕಾರಣವಾಯಿತು ಎಂದು ಕಂಡುಹಿಡಿದಿರುವುದಾಗಿ ವಾಯುಪಡೆ ಹೇಳಿಕೆ ತಿಳಿಸಿದೆ. ಈ ಘಟನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಮಾರ್ಚ್‌ನಲ್ಲಿ ಪಾಕಿಸ್ತಾನದ ಪ್ರದೇಶಕ್ಕೆ ಭಾರತದ ಕಡೆಯಿಂದ ಆಕಸ್ಮಿಕವಾಗಿ ಕ್ಷಿಪಣಿಯನ್ನು ಹಾರಿತ್ತು. ಇದನ್ನು ರಕ್ಷಣಾ ಸಚಿವಾಲಯವು “ತೀವ್ರ ವಿಷಾದನೀಯ” ಎಂದು ಹೇಳಿದ್ದು “ತಾಂತ್ರಿಕ ದೋಷ” ಕಾರಣ ಎಂದಿತ್ತು.

ಪಾಕಿಸ್ತಾನದ ಪ್ರಕಾರ, ಕ್ಷಿಪಣಿಯು ತನ್ನ ವಾಯುಪ್ರದೇಶದೊಳಗೆ 100 ಕಿ.ಮೀ.ಗೂ ಹೆಚ್ಚು ದೂರ, 40,000 ಅಡಿ ಎತ್ತರದಲ್ಲಿ ಹಾರಿದ್ದು, ಬೀಳುವ ಮುನ್ನ ಶಬ್ದದ ಮೂರು ಪಟ್ಟು ವೇಗದಲ್ಲಿ ಹಾರಿತು. ಕ್ಷಿಪಣಿಯಲ್ಲಿ ಯಾವುದೇ ಸಿಡಿತಲೆ ಇರಲಿಲ್ಲ, ಆದ್ದರಿಂದ ಅದು ಸ್ಫೋಟಿಸಲಿಲ್ಲ.

ತನ್ನ ವಾಯುಪ್ರದೇಶದ ಅಪ್ರಚೋದಿತ ಉಲ್ಲಂಘನೆ ಎಂದು ಕರೆದಿರುವುದನ್ನು ಪ್ರತಿಭಟಿಸಲು ಇಸ್ಲಾಮಾಬಾದ್‌ನಲ್ಲಿ ಭಾರತದ ಅಧಿಕಾರಿಗಳನ್ನು ಕರೆಸಲಾಗಿದೆ ಎಂದು ದೇಶದ ವಿದೇಶಾಂಗ ಕಚೇರಿ ತಿಳಿಸಿತ್ತು . ಈ ಘಟನೆಯ ಬಗ್ಗೆ ತನಿಖೆಗೆ ಪಾಕಿಸ್ತಾನವು ಕರೆ ನೀಡಿದ್ದು , ಇದು ಪ್ರಯಾಣಿಕರ ವಿಮಾನ ಮತ್ತು ನಾಗರಿಕರ ಜೀವಕ್ಕೆ ಅಪಾಯವನ್ನುಂಟುಮಾಡುಬಲ್ಲುದಾಗಿತ್ತು ಎಂದು ಹೇಳಿಕೆ ನೀಡಿತ್ತು.

ಇಂತಹ ನಿರ್ಲಕ್ಷ್ಯದ ಅಹಿತಕರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಿ ಮತ್ತು ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಮರುಕಳಿಸುವುದನ್ನು ತಪ್ಪಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನವು ಭಾರತಕ್ಕೆ ಎಚ್ಚರಿಕೆ ನೀಡಿತ್ತು.

Published On - 7:31 pm, Tue, 23 August 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು