AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ

ನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಪಾಕಿಸ್ತಾನಕ್ಕೆ ಆಕಸ್ಮಿಕ ಕ್ಷಿಪಣಿ ಉಡಾವಣೆ ಪ್ರಕರಣ: ವಾಯುಪಡೆಯ ಮೂವರು ಅಧಿಕಾರಿಗಳು ವಜಾ
ಬ್ರಹ್ಮೋಸ್ ಕ್ಷಿಪಣಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 23, 2022 | 7:32 PM

Share

ದೆಹಲಿ: ಈ ವರ್ಷದ ಆರಂಭದಲ್ಲಿ ಬ್ರಹ್ಮೋಸ್ ಕ್ಷಿಪಣಿಯನ್ನು (BrahMos missile) ಪಾಕಿಸ್ತಾನದ ಮೇಲೆ ಆಕಸ್ಮಿಕವಾಗಿ ಉಡಾಯಿಸಿದ ಭಾರತೀಯ ವಾಯುಪಡೆಯ ಮೂವರು ಅಧಿಕಾರಿಗಳನ್ನು ವಜಾ ಮಾಡಲಾಗಿದೆ ಎಂದು ಸರ್ಕಾರ ಮಂಗಳವಾರ ತಿಳಿಸಿದೆ. 2022 ಮಾರ್ಚ್ 09ರಂದು ಬ್ರಹ್ಮೋಸ್ ಕ್ಷಿಪಣಿಯನ್ನು ಆಕಸ್ಮಿಕವಾಗಿ ಉಡಾಯಿಸಲಾಗಿದೆ. ಘಟನೆಯ ಜವಾಬ್ದಾರಿಯನ್ನು ನಿಗದಿಪಡಿಸುವುದು ಸೇರಿದಂತೆ ಪ್ರಕರಣದ ಸತ್ಯಗಳನ್ನು ಹೊರತರಲು ಸ್ಥಾಪಿಸಲಾದ ನ್ಯಾಯಾಲಯವು (Court of Inquiry-Col), ಮೂವರು ಅಧಿಕಾರಿಗಳು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (SOP) ನಿಂದ ಮಾಡಿದ ವಿಚಲನವು ಕ್ಷಿಪಣಿಯ ಆಕಸ್ಮಿಕ ಉಡಾವಣೆಗೆ ಕಾರಣವಾಯಿತು ಎಂದು ಕಂಡುಹಿಡಿದಿರುವುದಾಗಿ ವಾಯುಪಡೆ ಹೇಳಿಕೆ ತಿಳಿಸಿದೆ. ಈ ಘಟನೆಗೆ ಮೂವರು ಅಧಿಕಾರಿಗಳನ್ನು ಪ್ರಾಥಮಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗಿದೆ. ಅವರ ಸೇವೆಗಳನ್ನು ಕೇಂದ್ರ ಸರ್ಕಾರ ತಕ್ಷಣವೇ ಜಾರಿಗೆ ಬರುವಂತೆ ಕೊನೆಗೊಳಿಸಿದೆ. 23 ಆಗಸ್ಟ್ 22 ರಂದು ಅಧಿಕಾರಿಗಳನ್ನು ವಜಾಗೊಳಿಸುವ ಆದೇಶವನ್ನು ನೀಡಲಾಗಿದೆ.

ಮಾರ್ಚ್‌ನಲ್ಲಿ ಪಾಕಿಸ್ತಾನದ ಪ್ರದೇಶಕ್ಕೆ ಭಾರತದ ಕಡೆಯಿಂದ ಆಕಸ್ಮಿಕವಾಗಿ ಕ್ಷಿಪಣಿಯನ್ನು ಹಾರಿತ್ತು. ಇದನ್ನು ರಕ್ಷಣಾ ಸಚಿವಾಲಯವು “ತೀವ್ರ ವಿಷಾದನೀಯ” ಎಂದು ಹೇಳಿದ್ದು “ತಾಂತ್ರಿಕ ದೋಷ” ಕಾರಣ ಎಂದಿತ್ತು.

ಪಾಕಿಸ್ತಾನದ ಪ್ರಕಾರ, ಕ್ಷಿಪಣಿಯು ತನ್ನ ವಾಯುಪ್ರದೇಶದೊಳಗೆ 100 ಕಿ.ಮೀ.ಗೂ ಹೆಚ್ಚು ದೂರ, 40,000 ಅಡಿ ಎತ್ತರದಲ್ಲಿ ಹಾರಿದ್ದು, ಬೀಳುವ ಮುನ್ನ ಶಬ್ದದ ಮೂರು ಪಟ್ಟು ವೇಗದಲ್ಲಿ ಹಾರಿತು. ಕ್ಷಿಪಣಿಯಲ್ಲಿ ಯಾವುದೇ ಸಿಡಿತಲೆ ಇರಲಿಲ್ಲ, ಆದ್ದರಿಂದ ಅದು ಸ್ಫೋಟಿಸಲಿಲ್ಲ.

ತನ್ನ ವಾಯುಪ್ರದೇಶದ ಅಪ್ರಚೋದಿತ ಉಲ್ಲಂಘನೆ ಎಂದು ಕರೆದಿರುವುದನ್ನು ಪ್ರತಿಭಟಿಸಲು ಇಸ್ಲಾಮಾಬಾದ್‌ನಲ್ಲಿ ಭಾರತದ ಅಧಿಕಾರಿಗಳನ್ನು ಕರೆಸಲಾಗಿದೆ ಎಂದು ದೇಶದ ವಿದೇಶಾಂಗ ಕಚೇರಿ ತಿಳಿಸಿತ್ತು . ಈ ಘಟನೆಯ ಬಗ್ಗೆ ತನಿಖೆಗೆ ಪಾಕಿಸ್ತಾನವು ಕರೆ ನೀಡಿದ್ದು , ಇದು ಪ್ರಯಾಣಿಕರ ವಿಮಾನ ಮತ್ತು ನಾಗರಿಕರ ಜೀವಕ್ಕೆ ಅಪಾಯವನ್ನುಂಟುಮಾಡುಬಲ್ಲುದಾಗಿತ್ತು ಎಂದು ಹೇಳಿಕೆ ನೀಡಿತ್ತು.

ಇಂತಹ ನಿರ್ಲಕ್ಷ್ಯದ ಅಹಿತಕರ ಪರಿಣಾಮಗಳ ಬಗ್ಗೆ ಎಚ್ಚರದಿಂದಿರಿ ಮತ್ತು ಭವಿಷ್ಯದಲ್ಲಿ ಇಂತಹ ಉಲ್ಲಂಘನೆಗಳು ಮರುಕಳಿಸುವುದನ್ನು ತಪ್ಪಿಸಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪಾಕಿಸ್ತಾನವು ಭಾರತಕ್ಕೆ ಎಚ್ಚರಿಕೆ ನೀಡಿತ್ತು.

Published On - 7:31 pm, Tue, 23 August 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ