Acid Attack: ಮದುವೆ ಮಂಟಪದಲ್ಲಿ ಘೋರ: ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ಎರಚಿದ ದುಷ್ಕರ್ಮಿಗಳು!

Chhattisgarh Crime: ಮದುವೆ ಸಮಾರಂಭದಲ್ಲಿ ಕರೆಂಟ್ ಹೋದಾಗ ಅಸಿಡ್​ ದಾಳಿ ಮಾಡಿದ್ದು ಯಾರು, ಜೊತೆಗೆ ಯಾಕಾಗಿ ಆಸಿಡ್ ಸುರಿದರು ಎಂಬುದೂ ಸದ್ಯಕ್ಕೆ ಗೊತ್ತಾಗಿಲ್ಲ.

Acid Attack: ಮದುವೆ ಮಂಟಪದಲ್ಲಿ ಘೋರ: ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ಎರಚಿದ ದುಷ್ಕರ್ಮಿಗಳು!
ವಧು-ವರ ಸೇರಿದಂತೆ 12 ಮಂದಿ ಮೇಲೆ ಆಸಿಡ್‌ ದಾಳಿ
ಸಾಧು ಶ್ರೀನಾಥ್​

Updated on: Apr 20, 2023 | 2:02 PM

ಛತ್ತೀಸ್‌ಗಢ್ ರಾಜ್ಯದಲ್ಲಿ ಮದುವೆ ಮಂಟಪದಲ್ಲಿ ಘೋರ ಘಟನೆ ಸಂಭವಿಸಿದೆ. ದುಷ್ಕರ್ಮಿಗಳು ವಧು-ವರ ( Bride- Bridegroom) ಇಬ್ಬರ ಮೇಲೆಯೂ ಆಸಿಡ್‌ ಹಾಕಿ (Acid Attack) ಪರಾರಿಯಾಗಿದ್ದಾರೆ. ಈ ಘಟನೆಯಲ್ಲಿ ಭಾವಿ ದಂಪತಿಯಿಬ್ಬರು, ಇಬ್ಬರು ಮಕ್ಕಳು ಸೇರಿದಂತೆ 12 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಛತ್ತೀಸ್‌ಗಢ್ ಪೊಲೀಸರು (Chhattisgarh Crime) ನೀಡಿರುವ ವಿವರಗಳ ಪ್ರಕಾರ…

ಸ್ತರ್ ಜಿಲ್ಲೆಯ ಛೋಟೆ ಅಮಾಬಲ್ ಗ್ರಾಮದಲ್ಲಿ ಸುಧಾಪಾಲ್ ನಿವಾಸಿ ದಮ್ರು ಬಾಘೇಲ್ (23), ಸುನೀತಾ ಕಶ್ಯಪ್ (19) ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ಅಷ್ಟರಲ್ಲಿ ಇದ್ದಿಕ್ಕಿದ್ದಂತೆ ಕರೆಂಟ್ ಹೋಯಿತು. ಇದೇ ವೇಳೆ ಅಪರಿಚಿತ ವ್ಯಕ್ತಿಯೊಬ್ಬ ವೇದಿಕೆಯೇರಿ ವಧು ವರರ ಮೇಲೆ ಆಸಿಡ್ ಹಾಕಿದ್ದಾನೆ. ಆಸಿಡ್ ವಧು ವರರಷ್ಟೇ ಅಲ್ಲದೆ ಅವರ ಜೊತೆಯಲ್ಲಿ ಪಕ್ಕದಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 12 ಮಂದಿಯ ಮೇಲೆ ಸಹ ಆಸಿಡ್​ ಎರಚಿದ್ದಾರೆ. ಇದರಿಂದ ಮದುವೆ ಮಂಟಪದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಇದನ್ನೂ ಓದಿ:
ಬೆಂಗಳೂರು: ಒಂಟಿತನ ಕಾಡುತ್ತಿದೆ ಎಂದು ಆಸ್ಪತ್ರೆಯಿಂದ ಮಗು ಕಳ್ಳತನ, 600 ಸಿಸಿಟಿವಿ ಪರಿಶೀಲನೆ ಬಳಿಕ ಸಿಕ್ಕ ಕಳ್ಳಿ

ಮಾಹಿತಿ ಪಡೆದ ಪೊಲೀಸರು ಘಟನೆಯ ಸ್ಥಳವನ್ನು ತಲುಪಿ ಸಂತ್ರಸ್ತರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮದುವೆ ಸಮಾರಂಭದಲ್ಲಿ ಕರೆಂಟ್ ಹೋದ ಸಮಯದಲ್ಲಿ ಈ ದಾಳಿ ನಡೆದಾಗ ಅಸಿಡ್​ ದಾಳಿ ಮಾಡಿದ್ದು ಯಾರು ಎಂಬುದರ ಬಗ್ಗೆ ಸ್ಪಷ್ಟತೆ ಇಲ್ಲ. ಜೊತೆಗೆ ಯಾಕಾಗಿ ಆಸಿಡ್ ಸುರಿದರು ಎಂಬುದೂ ಸದ್ಯಕ್ಕೆ ಗೊತ್ತಾಗಿಲ್ಲ. ಭಾನ್‌ಪುರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗಾಗಿ ಪ್ರಯತ್ನಿಸುತ್ತಿದ್ದಾರೆ.

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us