AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲರು ಆರ್​ಎಸ್​ಎಸ್​ನ ಸಾಧನದಂತೆ ವರ್ತಿಸುತ್ತಿದ್ದಾರೆ; ಕುಲಪತಿಗಳ ರಾಜೀನಾಮೆ ಕೇಳಿದ್ದಕ್ಕೆ ಕೇರಳ ಸಿಎಂ ಆಕ್ರೋಶ

ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಆರ್‌ಎಸ್‌ಎಸ್‌ನ ಸಾಧನವಾಗಿ ವರ್ತಿಸುತ್ತಿದ್ದಾರೆ. ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯಪಾಲರು ಆರ್​ಎಸ್​ಎಸ್​ನ ಸಾಧನದಂತೆ ವರ್ತಿಸುತ್ತಿದ್ದಾರೆ; ಕುಲಪತಿಗಳ ರಾಜೀನಾಮೆ ಕೇಳಿದ್ದಕ್ಕೆ ಕೇರಳ ಸಿಎಂ ಆಕ್ರೋಶ
ಕೇರಳ ಸಿಎಂ ಪಿಣರಾಯಿ ವಿಜಯನ್
TV9 Web
| Updated By: ಸುಷ್ಮಾ ಚಕ್ರೆ|

Updated on:Oct 24, 2022 | 2:41 PM

Share

ಕೇರಳದ 9 ವಿಶ್ವವಿದ್ಯಾನಿಲಯಗಳ ಕುಲಪತಿಗಳು ತಮ್ಮ ರಾಜೀನಾಮೆಯನ್ನು ಸಲ್ಲಿಸುವಂತೆ ಸೂಚಿಸಿರುವ ರಾಜ್ಯಪಾಲರ ಆದೇಶದ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (CM Pinarayi Vijayan) ಕಿಡಿ ಕಾರಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಆರ್‌ಎಸ್‌ಎಸ್‌ನ (RSS) ಸಾಧನವಾಗಿ ವರ್ತಿಸುತ್ತಿದ್ದಾರೆ. ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ರಾಜ್ಯಪಾಲರ ಹುದ್ದೆ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುವುದೇ ವಿನಃ ಸರ್ಕಾರದ ವಿರುದ್ಧ ನಡೆಯುವುದಲ್ಲ. ರಾಜ್ಯಪಾಲರ ವರ್ತನೆ ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಇದು ಕುಲಪತಿಗಳ ಅಧಿಕಾರದ ಮೇಲಿನ ಅತಿಕ್ರಮಣವಾಗಿದೆ. ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡಬೇಕೆಂದು ರಾಜ್ಯಪಾಲರು ನಿರ್ದೇಶನ ನೀಡಿದ ಬೆನ್ನಲ್ಲೇ ಕೇರಳದ ಮುಖ್ಯಮಂತ್ರಿ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Cyclone: ಬಂಗಾಳಕೊಲ್ಲಿಯಲ್ಲಿ ಈ ವಾರ ಚಂಡಮಾರುತ ಸಾಧ್ಯತೆ; ಕರ್ನಾಟಕ, ಕೇರಳ ಸೇರಿ ಹಲವೆಡೆ ಭಾರೀ ಮಳೆ

ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳು ರಾಜೀನಾಮೆ ನೀಡುವಂತೆ ರಾಜ್ಯಪಾಲರ ಆದೇಶದ ನಂತರ ಆ 9 ವಿವಿಗಳ ಕುಲಪತಿಗಳು ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಕುಲಪತಿಗಳ ನೇಮಕ ಮಾಡುವಾಗ ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಿ ಎಪಿಜೆ ತಾಂತ್ರಿಕ ವಿಶ್ವವಿದ್ಯಾನಿಲಯದ ಉಪಕುಲಪತಿಗಳಿಗೆ ರಾಜೀನಾಮೆ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶದ ರಾಜ್ಯಪಾಲರ ಈ ಆದೇಶ ಹೊರಬಿದ್ದಿದೆ. ಇತ್ತೀಚೆಗಷ್ಟೆ ಯುಜಿಸಿ ನಿಯಮಗಳನ್ನು ಪಾಲಿಸದೆ ನೇಮಕಗೊಳಿಸಿರುವ ಹಿನ್ನೆಲೆಯಲ್ಲಿ ತಿರುವನಂತಪುರದ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯ ನೇಮಕಾತಿಯನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿತ್ತು. ಸುಪ್ರೀಂ ಕೋರ್ಟ್​ ಆದೇಶವನ್ನು ಎತ್ತಿ ಹಿಡಿದಿರುವ ಕೇರಳದ ರಾಜ್ಯಪಾಲರು ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ ಸೇರಿದಂತೆ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ರಾಜೀನಾಮೆ ನೀಡಲು ಸೂಚಿಸಿದ್ದಾರೆ.

ಆ 9 ವಿಶ್ವವಿದ್ಯಾನಿಲಯಗಳೆಂದರೆ ಕೇರಳ ವಿಶ್ವವಿದ್ಯಾನಿಲಯ, ಮಹಾತ್ಮಾ ಗಾಂಧಿ ವಿಶ್ವವಿದ್ಯಾಲಯ, ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ, ಕೇರಳ ಮೀನುಗಾರಿಕೆ ಮತ್ತು ಸಾಗರ ಅಧ್ಯಯನ ವಿಶ್ವವಿದ್ಯಾಲಯ, ಕಣ್ಣೂರು ವಿಶ್ವವಿದ್ಯಾಲಯ, ಎಪಿಜೆ ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯ, ಶ್ರೀ ಶಂಕರಾಚಾರ್ಯ ಸಂಸ್ಕೃತ ವಿಶ್ವವಿದ್ಯಾಲಯ, ಕ್ಯಾಲಿಕಟ್ ವಿಶ್ವವಿದ್ಯಾಲಯ ಮತ್ತು ತುಂಚತ್ ಎಝುತಾಚನ್ ಮಲಯಾಳಂ ವಿಶ್ವವಿದ್ಯಾಲಯ.

ಇದನ್ನೂ ಓದಿ: ಕೇರಳದ 9 ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ಇಂದು ರಾಜೀನಾಮೆ ನೀಡಲು ರಾಜ್ಯಪಾಲರ ಆದೇಶ

ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ತಾಂತ್ರಿಕ ವಿಶ್ವವಿದ್ಯಾಲಯದ (ಕೆಟಿಯು) ಉಪಕುಲಪತಿಯಾಗಿ ಡಾ.ರಾಜಶ್ರೀ ಎಂಎಸ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ಈ ಹಿಂದೆ ರದ್ದುಗೊಳಿಸಿತ್ತು. ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದ ಪ್ರಕಾರ, ಶೋಧನಾ ಸಮಿತಿಯು ವಿಸಿ ಹುದ್ದೆಗೆ ಮೂವರಿಗೆ ಕಡಿಮೆಯಿಲ್ಲದ ಅರ್ಹ ವ್ಯಕ್ತಿಗಳ ಸಮಿತಿಯನ್ನು ಶಿಫಾರಸು ಮಾಡಬೇಕಾಗಿತ್ತು .ಆದರೆ ರಾಜಶ್ರೀ ಅವರ ಪ್ರಕರಣದಲ್ಲಿ ಅವರ ಹೆಸರನ್ನು ಮಾತ್ರ ಶಿಫಾರಸು ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:21 pm, Mon, 24 October 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!