ಕೇಸರಿ ಬಟ್ಟೆ ತೊಟ್ಟ ವಿದ್ಯಾರ್ಥಿಗಳ ವಿರುದ್ಧ ಕ್ರಮ, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

ಕೇಸರಿ ಉಡುಗೆ ತೊಟ್ಟ ಶಾಲೆಗೆ ಬಂದ ವಿದ್ಯಾರ್ಥಿಗಳ ವಿರುದ್ಧ ಕ್ರಮ ತೆಗೆದುಕೊಂಡ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ತೆರೇಸಾ ಶಾಲೆ ವಿರುದ್ಧ ಹಿಂದೂ ಸಂಘಟನೆಗಳು ಅಕ್ರೋಶಗೊಂಡು ಶಾಲೆಯೊಳಗೆ ನುಗ್ಗಿ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗುತ್ತಿದೆ.

ಕೇಸರಿ ಬಟ್ಟೆ ತೊಟ್ಟ ವಿದ್ಯಾರ್ಥಿಗಳ ವಿರುದ್ಧ ಕ್ರಮ, ತೆರೇಸಾ ಶಾಲೆ ವಿರುದ್ಧ ದಂಗೆ ಎದ್ದ ಹಿಂದೂ ಸಂಘಟನೆ

Updated on: Apr 18, 2024 | 12:23 PM

ಮಂಚೇರಿಯಲ್, ಏ.18: ತೆಲಂಗಾಣದ (telangana) ಮಂಚೇರಿಯಲ್ ಜಿಲ್ಲೆಯ ತೆರೇಸಾ ಶಾಲೆಯಲ್ಲಿ ವಿದ್ಯಾರ್ಥಿಗಳು ‘ಹನುಮಾನ್ ದೀಕ್ಷೆ ಉಡುಗೆ’ ಧರಿಸಿ ತರಗತಿಗೆ ಬಂದಿರುವುದನ್ನು ಶಿಕ್ಷಕರು ವಿರೋಧಿಸಿದ್ದಾರೆ. ಇದೀಗ ಶಿಕ್ಷಕರ ವಿರುದ್ಧ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಪ್ರತಿಭಟನೆಗಾರರು ಶಾಲಾ ಕ್ರಮದ ವಿರುದ್ಧ ಅಕ್ರೋಶಗೊಂಡ ಶಾಲಾ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿದೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ.

ಮದರ್ ತೆರೇಸಾ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳನ್ನು ಹನುಮಾನ್ ದೀಕ್ಷೆ ಉಡುಗೆ ಹಾಕಿಕೊಂಡು ಬಂದಿರುವುದಕ್ಕೆ ತರಗತಿಯೊಳಗೆ ಪ್ರವೇಶವಿಲ್ಲ ಎಂದು ಶಾಲಾ ಆಡಳಿತ ಮಂಡಳಿ ಹೇಳಿದೆ ಎಂದು ತರಗತಿಯಿಂದ ಹೊರ ಕಳುಹಿಸಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿ ವಿದ್ಯಾರ್ಥಿಗಳು ಹಾಗು ಸಂಘಟನೆಗಳು ಶಾಲೆ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಇನ್ನು ವಿದ್ಯಾರ್ಥಿಗಳ ಪೋಷಕರ ದೂರಿನ ಮೇರೆಗೆ ಬುಧವಾರ ಶಾಲಾ ಶಿಕ್ಷಕರು ಹಾಗೂ ಪ್ರಾಂಶುಪಾಲರ ವಿರುದ್ಧ ಸೆಕ್ಷನ್ 153 (ಎ) (ಧರ್ಮ ಅಥವಾ ಜನಾಂಗದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 (ಎ) (ಧಾರ್ಮಿಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವಿಲ್ಲದೆ ಶಾಲೆಗೆ ಬಂದಿರುವುದನ್ನು ಕಂಡು ಪ್ರಾಂಶುಪಾಲರ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಬರುವಂತೆ ಹೇಳಿದ್ದಾರೆ. ಇದನ್ನು ವಿರೋಧಿಸಿ ಹಿಂದೂ ಸಂಘಟನೆ ಸದಸ್ಯರು ಶಾಲೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಸಮವಸ್ತ್ರ ಧರಿಸದೇ ಬರದ ವಿದ್ಯಾರ್ಥಿಗಳು ಶಾಲೆ ಪ್ರವೇಶಿಸುವಂತಿಲ್ಲ ಹಾಗೂ ವಾರ್ಷಿಕ ಪರೀಕ್ಷೆಗೆ ಹಾಜರಾಗದಂತೆ ಆಡಳಿತ ಮಂಡಳಿ ಹೇಳಿತ್ತು.

ಇದನ್ನೂ ಓದಿ : ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ದೂರ ಎಳೆದೊಯ್ದ ಲಾರಿ, ಎದೆ ಝೆಲ್ಲೆನಿಸುವ ವಿಡಿಯೋ

ಇದರಿಂದ ಅಕ್ರೋಶಗೊಂಡು ಶಾಲೆ ಹೊರಗೆ ಪ್ರತಿಭಟನೆ ಮಾಡುತ್ತಿದ್ದ ಹಿಂದೂ ಸಂಘಟನೆ ಸದಸ್ಯರು ಶಾಲೆಯೊಳಗೆ ನುಗ್ಗಿ ಶಾಲೆಯ ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ. ಶಾಲೆ ಅನೇಕ ವಸ್ತುಗಳು ಮುರಿದು ಹಾಕಿದ್ದಾರೆ. ಶಾಲೆಯ ಆಡಳಿತ ಮಂಡಳಿ ಸ್ಥಳೀಯ ಪೊಲೀಸರಿಗೆ ಈ ಘಟನೆಯ ಬಗ್ಗೆ ದೂರು ನೀಡಿದ್ದು, ಇನ್ನೂ ಯಾರನ್ನೂ ಬಂಧಿಸಿಲ್ಲ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us