Coronavirus cases in India: ದೇಶದಲ್ಲಿ 26,115 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

Covid-19: ದೇಶದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 8606 ರಿಂದ 309,575 ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಒಟ್ಟಾರೆ ಪ್ರಕರಣಗಳ ಶೇ 0.9 ಅನ್ನು ಒಳಗೊಂಡಿರುತ್ತವೆ

Coronavirus cases in India: ದೇಶದಲ್ಲಿ 26,115 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
ಪ್ರಾತಿನಿಧಿಕ ಚಿತ್ರ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Sep 21, 2021 | 10:39 AM

ದೆಹಲಿ: ದೇಶದಲ್ಲಿ ದೈನಂದಿನ ಕೊವಿಡ್  (Covid-19) ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು ಕಳೆದ24 ಗಂಟೆಗಳಲ್ಲಿ 26,115 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಹೇಳಿದ. ಹೊಸ ರೋಗಿಗಳ ಸೇರ್ಪಡೆಯೊಂದಿಗೆ, ರಾಷ್ಟ್ರವ್ಯಾಪಿ ಸೋಂಕಿನ ಸಂಖ್ಯೆ 33,504,534 ಕ್ಕೆ ಏರಿದೆ ಎಂದು ಅಂಕಿಅಂಶಗಳು ತಿಳಿಸಿವೆ. ದೇಶದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 8606 ರಿಂದ 309,575 ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಒಟ್ಟಾರೆ ಪ್ರಕರಣಗಳ ಶೇ 0.9 ಅನ್ನು ಒಳಗೊಂಡಿರುತ್ತವೆ. ಇದು ಮಾರ್ಚ್ 2020 ರ ನಂತರ ರಾಷ್ಟ್ರವ್ಯಾಪಿ ಸಂಖ್ಯೆಯಲ್ಲಿನ ಸಕ್ರಿಯ ಪ್ರಕರಣಗಳ ಇಳಿಕೆಯನ್ನು ತೋರಿಸುತ್ತದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇದು 6 ತಿಂಗಳಲ್ಲಿ ಅಥವಾ 184 ದಿನಗಳಿಗಳಲ್ಲಿ ಸೋಮವಾರ ಅತೀ ಕಡಿಮೆ ಸಕ್ರಿಯ ಪ್ರಕರಣಗಳು ವರದಿ ಆಗಿವೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಕೊವಿಡ್ -19 ರಿಂದ ಇಲ್ಲಿಯವರೆಗೆ ಚೇತರಿಸಿಕೊಂಡ ಜನರ ಸಂಖ್ಯೆ ಶೇ 97.75ಕ್ಕೆ ಏರಿದೆ. ಇದು ಕಳೆದ ಮಾರ್ಚ್‌ನಿಂದ ಅತಿ ಹೆಚ್ಚು. ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆಯಾದ 34,469 ಜನರ ಸೇರ್ಪಡೆಯೊಂದಿಗೆ, ದೇಶದಲ್ಲಿ ಇಂತಹ ಒಟ್ಟು ಪ್ರಕರಣಗಳ ಸಂಖ್ಯೆ ಈಗ 32,749,574 ಕ್ಕೆ ತಲುಪಿದೆ. ಏತನ್ಮಧ್ಯೆ, 252 ಮಂದಿ ಸಾವಿಗೀಡಾಗಿದ್ದು ಸಾವುಗಳ ಸಂಖ್ಯೆ 445,385 ಅಥವಾ ಒಟ್ಟು ಪ್ರಕರಣಗಳಲ್ಲಿ ಶೇ 1.33 ಕ್ಕೆ ತಲುಪಿದೆ.

ಸಾಪ್ತಾಹಿಕ (ಶೇ 2.08) ಮತ್ತು ದೈನಂದಿನ ಧನಾತ್ಮಕ ದರಗಳು (ಶೇ 1.85) ಶೇ 3ಕ್ಕಿಂತ ಕಡಿಮೆ ಉಳಿದಿವೆ,. ಸೆಪ್ಟೆಂಬರ್ 20 ರಂದು ಸಾಂಕ್ರಾಮಿಕ ರೋಗ ಪತ್ತೆಗಾಗಿ 1,413,951 ಮಾದರಿಗಳನ್ನು ಪರೀಕ್ಷಿಸಲಾಯಿತು. ಇದುವರೆಗೆ ಪರೀಕ್ಷಿಸಿದ ಮಾದರಿಗಳ ಸಂಖ್ಯೆ 555,035,717 ಕ್ಕೆ ತಲುಪಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ಲಸಿಕೆ ವಿತರಣೆಯಲ್ಲಿ ಜನವರಿ 16 ರಂದು ರಾಷ್ಟ್ರವ್ಯಾಪಿ ಚಾಲನೆ ಆರಂಭವಾದಾಗಿನಿಂದ ಕನಿಷ್ಠ 818,513,827 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಈ ಪೈಕಿ 9,646,778 ಅನ್ನು ಸೋಮವಾರ ನೀಡಲಾಯಿತು.

ಇದನ್ನೂ ಓದಿ: ಅಕ್ಟೋಬರ್​ನಿಂದ ಕೊವಿಡ್ 19 ಲಸಿಕೆ ರಫ್ತು ಮತ್ತೆ ಪ್ರಾರಂಭ; ಇಂದು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ

(Active cases lowest in 6 months India reports 26,115 new Covid casesin last 24 hours)

Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ