AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coronavirus cases in India: ದೇಶದಲ್ಲಿ 26,115 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ

Covid-19: ದೇಶದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 8606 ರಿಂದ 309,575 ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಒಟ್ಟಾರೆ ಪ್ರಕರಣಗಳ ಶೇ 0.9 ಅನ್ನು ಒಳಗೊಂಡಿರುತ್ತವೆ

Coronavirus cases in India: ದೇಶದಲ್ಲಿ 26,115 ಹೊಸ ಕೊವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 21, 2021 | 10:39 AM

Share

ದೆಹಲಿ: ದೇಶದಲ್ಲಿ ದೈನಂದಿನ ಕೊವಿಡ್  (Covid-19) ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು ಕಳೆದ24 ಗಂಟೆಗಳಲ್ಲಿ 26,115 ಹೊಸ ಪ್ರಕರಣಗಳು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಹೇಳಿದ. ಹೊಸ ರೋಗಿಗಳ ಸೇರ್ಪಡೆಯೊಂದಿಗೆ, ರಾಷ್ಟ್ರವ್ಯಾಪಿ ಸೋಂಕಿನ ಸಂಖ್ಯೆ 33,504,534 ಕ್ಕೆ ಏರಿದೆ ಎಂದು ಅಂಕಿಅಂಶಗಳು ತಿಳಿಸಿವೆ. ದೇಶದಲ್ಲಿ ಸಕ್ರಿಯ ರೋಗಿಗಳ ಸಂಖ್ಯೆ 8606 ರಿಂದ 309,575 ಕ್ಕೆ ಇಳಿದಿದೆ. ಸಕ್ರಿಯ ಪ್ರಕರಣಗಳು ಒಟ್ಟಾರೆ ಪ್ರಕರಣಗಳ ಶೇ 0.9 ಅನ್ನು ಒಳಗೊಂಡಿರುತ್ತವೆ. ಇದು ಮಾರ್ಚ್ 2020 ರ ನಂತರ ರಾಷ್ಟ್ರವ್ಯಾಪಿ ಸಂಖ್ಯೆಯಲ್ಲಿನ ಸಕ್ರಿಯ ಪ್ರಕರಣಗಳ ಇಳಿಕೆಯನ್ನು ತೋರಿಸುತ್ತದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇದು 6 ತಿಂಗಳಲ್ಲಿ ಅಥವಾ 184 ದಿನಗಳಿಗಳಲ್ಲಿ ಸೋಮವಾರ ಅತೀ ಕಡಿಮೆ ಸಕ್ರಿಯ ಪ್ರಕರಣಗಳು ವರದಿ ಆಗಿವೆ. ಮತ್ತೊಂದು ಮಹತ್ವದ ಬೆಳವಣಿಗೆಯಲ್ಲಿ ಕೊವಿಡ್ -19 ರಿಂದ ಇಲ್ಲಿಯವರೆಗೆ ಚೇತರಿಸಿಕೊಂಡ ಜನರ ಸಂಖ್ಯೆ ಶೇ 97.75ಕ್ಕೆ ಏರಿದೆ. ಇದು ಕಳೆದ ಮಾರ್ಚ್‌ನಿಂದ ಅತಿ ಹೆಚ್ಚು. ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆಯಾದ 34,469 ಜನರ ಸೇರ್ಪಡೆಯೊಂದಿಗೆ, ದೇಶದಲ್ಲಿ ಇಂತಹ ಒಟ್ಟು ಪ್ರಕರಣಗಳ ಸಂಖ್ಯೆ ಈಗ 32,749,574 ಕ್ಕೆ ತಲುಪಿದೆ. ಏತನ್ಮಧ್ಯೆ, 252 ಮಂದಿ ಸಾವಿಗೀಡಾಗಿದ್ದು ಸಾವುಗಳ ಸಂಖ್ಯೆ 445,385 ಅಥವಾ ಒಟ್ಟು ಪ್ರಕರಣಗಳಲ್ಲಿ ಶೇ 1.33 ಕ್ಕೆ ತಲುಪಿದೆ.

ಸಾಪ್ತಾಹಿಕ (ಶೇ 2.08) ಮತ್ತು ದೈನಂದಿನ ಧನಾತ್ಮಕ ದರಗಳು (ಶೇ 1.85) ಶೇ 3ಕ್ಕಿಂತ ಕಡಿಮೆ ಉಳಿದಿವೆ,. ಸೆಪ್ಟೆಂಬರ್ 20 ರಂದು ಸಾಂಕ್ರಾಮಿಕ ರೋಗ ಪತ್ತೆಗಾಗಿ 1,413,951 ಮಾದರಿಗಳನ್ನು ಪರೀಕ್ಷಿಸಲಾಯಿತು. ಇದುವರೆಗೆ ಪರೀಕ್ಷಿಸಿದ ಮಾದರಿಗಳ ಸಂಖ್ಯೆ 555,035,717 ಕ್ಕೆ ತಲುಪಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ಲಸಿಕೆ ವಿತರಣೆಯಲ್ಲಿ ಜನವರಿ 16 ರಂದು ರಾಷ್ಟ್ರವ್ಯಾಪಿ ಚಾಲನೆ ಆರಂಭವಾದಾಗಿನಿಂದ ಕನಿಷ್ಠ 818,513,827 ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಈ ಪೈಕಿ 9,646,778 ಅನ್ನು ಸೋಮವಾರ ನೀಡಲಾಯಿತು.

ಇದನ್ನೂ ಓದಿ: ಅಕ್ಟೋಬರ್​ನಿಂದ ಕೊವಿಡ್ 19 ಲಸಿಕೆ ರಫ್ತು ಮತ್ತೆ ಪ್ರಾರಂಭ; ಇಂದು ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಸಚಿವ

(Active cases lowest in 6 months India reports 26,115 new Covid casesin last 24 hours)

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ