AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ.

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 10, 2021 | 10:25 AM

Share

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ ರೇಪ್​​ಗೆ ಒಳಗಾಗಿದ್ದರು. ಈ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ಕೂಡ ನೀಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಆಕೆಯಲ್ಲಿ ಕೊವಿಡ್ 19 ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭವಾಗಿತ್ತು. ಹಾಗಾಗಿ ಏಪ್ರಿಲ್​ 26ರಂದು ಶಿವಮ್​ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಕೊವಿಡ್ ದೃಢಪಟ್ಟಿತ್ತು. ಅದಾದ ನಾಲ್ಕೇ ದಿನಗಳಲ್ಲಿ ಅಂದರೆ ಏಪ್ರಿಲ್​ 30ರಂದು ಕೊನೆಯುಸಿರೆಳಿದಿದ್ದಾರೆ.

ಯುವತಿಯ ಮರಣಕ್ಕೆ ಸಂಯುಕ್ತ ಕಿಸಾನ್​ ಮೋರ್ಚಾ ಸಂತಾಪ ವ್ಯಕ್ತಪಡಿಸಿದೆ. ಹಾಗೇ ಆಕೆಗೆ ನ್ಯಾಯ ಸಿಗಬೇಕು, ಈ ಹೋರಾಟದಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದೆ.

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ. ಇನ್ನು ಅತ್ಯಾಚಾರದ ಆರೋಪಿಗಳನ್ನು ಚಳುವಳಿಯಿಂದ ಅದಾಗಲೇ ದೂರವಿಟ್ಟಿರುವ ಸಂಘಟನೆ, ಅವರಿಗೆ ಸಾರ್ವಜನಿಕ ಬಹಿಷ್ಕಾರ ಹಾಕುವಂತೆ ಜನರಲ್ಲಿ ಮನವಿಯನ್ನೂ ಮಾಡಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

ನಿನ್ನ ದೇಣಿಗೆ ಹಣದಲ್ಲಿ ಒಂದು ವೆಂಟಿಲೇಟರ್ ಸಹ ಬರುವುದಿಲ್ಲ; ದೇಣಿಗೆ ನೀಡಿ ಟ್ರೋಲ್ ಆದ ಯಜ್ವೇಂದ್ರ ಚಹಲ್

Published On - 10:22 am, Mon, 10 May 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ