AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ.

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 10, 2021 | 10:25 AM

Share

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ ರೇಪ್​​ಗೆ ಒಳಗಾಗಿದ್ದರು. ಈ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ಕೂಡ ನೀಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಆಕೆಯಲ್ಲಿ ಕೊವಿಡ್ 19 ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭವಾಗಿತ್ತು. ಹಾಗಾಗಿ ಏಪ್ರಿಲ್​ 26ರಂದು ಶಿವಮ್​ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಕೊವಿಡ್ ದೃಢಪಟ್ಟಿತ್ತು. ಅದಾದ ನಾಲ್ಕೇ ದಿನಗಳಲ್ಲಿ ಅಂದರೆ ಏಪ್ರಿಲ್​ 30ರಂದು ಕೊನೆಯುಸಿರೆಳಿದಿದ್ದಾರೆ.

ಯುವತಿಯ ಮರಣಕ್ಕೆ ಸಂಯುಕ್ತ ಕಿಸಾನ್​ ಮೋರ್ಚಾ ಸಂತಾಪ ವ್ಯಕ್ತಪಡಿಸಿದೆ. ಹಾಗೇ ಆಕೆಗೆ ನ್ಯಾಯ ಸಿಗಬೇಕು, ಈ ಹೋರಾಟದಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದೆ.

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ. ಇನ್ನು ಅತ್ಯಾಚಾರದ ಆರೋಪಿಗಳನ್ನು ಚಳುವಳಿಯಿಂದ ಅದಾಗಲೇ ದೂರವಿಟ್ಟಿರುವ ಸಂಘಟನೆ, ಅವರಿಗೆ ಸಾರ್ವಜನಿಕ ಬಹಿಷ್ಕಾರ ಹಾಕುವಂತೆ ಜನರಲ್ಲಿ ಮನವಿಯನ್ನೂ ಮಾಡಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

ನಿನ್ನ ದೇಣಿಗೆ ಹಣದಲ್ಲಿ ಒಂದು ವೆಂಟಿಲೇಟರ್ ಸಹ ಬರುವುದಿಲ್ಲ; ದೇಣಿಗೆ ನೀಡಿ ಟ್ರೋಲ್ ಆದ ಯಜ್ವೇಂದ್ರ ಚಹಲ್

Published On - 10:22 am, Mon, 10 May 21

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ