AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ.

ರೈತಹೋರಾಟದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆ ಕೊವಿಡ್​ ಸೋಂಕಿನಿಂದ ಸಾವು
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 10, 2021 | 10:25 AM

Share

ದೆಹಲಿಯ ಟಿಕ್ರಿ ಗಡಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮಬಂಗಾಳದಿಂದ ತೆರಳುತ್ತಿದ್ದ 26ವರ್ಷದ ಹೋರಾಟಗಾರ್ತಿಯೊಬ್ಬಳನ್ನು, ಅವಳ ಜತೆಗಿದ್ದ ಇಬ್ಬರು ಅತ್ಯಾಚಾರ ಮಾಡಿದ್ದರು. ಈ ಅತ್ಯಾಚಾರ ಸಂತ್ರಸ್ತೆ ಇದೀಗ ಕೊವಿಡ್ 19 ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದು ತುಸು ಹಳೇ ಘಟನೆಯಾಗಿದ್ದು, ಇದೀಗ ಬೆಳಕಿಗೆ ಬಂದಿದೆ. ಏಪ್ರಿಲ್​ 11ರಂದು ಈ ಯುವತಿ, ಇನ್ನಿಬ್ಬರೊಂದಿಗೆ ದೆಹಲಿ ಗಡಿಗೆ ತೆರಳುತ್ತಿದ್ದರು. ಆದರೆ ದುರ್ದೈವವೆಂಬಂತೆ ಜತೆಗಿದ್ದವರಿಂದಲೇ ರೇಪ್​​ಗೆ ಒಳಗಾಗಿದ್ದರು. ಈ ಬಗ್ಗೆ ಆಕೆಯ ತಂದೆ ಪೊಲೀಸರಿಗೆ ದೂರು ಕೂಡ ನೀಡಿದ್ದರು. ಅದಾದ ಕೆಲವೇ ದಿನಗಳಲ್ಲಿ ಆಕೆಯಲ್ಲಿ ಕೊವಿಡ್ 19 ಲಕ್ಷಣಗಳು ಕಾಣಿಸಿಕೊಳ್ಳಲು ಪ್ರಾರಂಭವಾಗಿತ್ತು. ಹಾಗಾಗಿ ಏಪ್ರಿಲ್​ 26ರಂದು ಶಿವಮ್​ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಲ್ಲಿ ಕೊವಿಡ್ ದೃಢಪಟ್ಟಿತ್ತು. ಅದಾದ ನಾಲ್ಕೇ ದಿನಗಳಲ್ಲಿ ಅಂದರೆ ಏಪ್ರಿಲ್​ 30ರಂದು ಕೊನೆಯುಸಿರೆಳಿದಿದ್ದಾರೆ.

ಯುವತಿಯ ಮರಣಕ್ಕೆ ಸಂಯುಕ್ತ ಕಿಸಾನ್​ ಮೋರ್ಚಾ ಸಂತಾಪ ವ್ಯಕ್ತಪಡಿಸಿದೆ. ಹಾಗೇ ಆಕೆಗೆ ನ್ಯಾಯ ಸಿಗಬೇಕು, ಈ ಹೋರಾಟದಲ್ಲಿ ನಾವು ದೃಢವಾಗಿ ನಿಲ್ಲುತ್ತೇವೆ ಎಂದು ಹೇಳಿದೆ.

ನಮ್ಮ ಸಂಘಟನೆಯ ಹೋರಾಟಗಾರ್ತಿಯ ಮೇಲೆ ಅತ್ಯಾಚಾರ ಆಗಿದ್ದು ದುರಂತ ಎಂದು ಹೇಳಿರುವ ಎಸ್​ಕೆಎಂ ನಾಲ್ಕು ದಿನಗಳ ಹಿಂದೆಯೇ ಟಿಕ್ರಿ ಗಡಿಯಲ್ಲಿರುವ ಕಿಸಾನ್ ಸೋಷಿಯಲ್ ಆರ್ಮಿ ಎಂದು ಬರೆದುಕೊಂಡಿದ್ದ ದೊಡ್ಡ ಬ್ಯಾನರ್​, ಟೆಂಟ್​ಗಳನ್ನೆಲ್ಲ ತೆಗೆದುಹಾಕಿದೆ. ಇನ್ನು ಅತ್ಯಾಚಾರದ ಆರೋಪಿಗಳನ್ನು ಚಳುವಳಿಯಿಂದ ಅದಾಗಲೇ ದೂರವಿಟ್ಟಿರುವ ಸಂಘಟನೆ, ಅವರಿಗೆ ಸಾರ್ವಜನಿಕ ಬಹಿಷ್ಕಾರ ಹಾಕುವಂತೆ ಜನರಲ್ಲಿ ಮನವಿಯನ್ನೂ ಮಾಡಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 12 ಜನ ಕೊರೊನಾ ಸೋಂಕಿಗೆ ಬಲಿ; ಜನರಲ್ಲಿ ಹೆಚ್ಚಾದ ಆತಂಕ

ನಿನ್ನ ದೇಣಿಗೆ ಹಣದಲ್ಲಿ ಒಂದು ವೆಂಟಿಲೇಟರ್ ಸಹ ಬರುವುದಿಲ್ಲ; ದೇಣಿಗೆ ನೀಡಿ ಟ್ರೋಲ್ ಆದ ಯಜ್ವೇಂದ್ರ ಚಹಲ್

Published On - 10:22 am, Mon, 10 May 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?