AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಮೋಸ ಮಾಡಿದವರಿಗೆ ಪಕ್ಷದ ನಾಯಕರು ಸಹಾಯ ಮಾಡುತ್ತಿದ್ದಾರೆ, ಬಿಜೆಪಿ ತೊರೆದಿದ್ದಕ್ಕೆ ಕಾರಣ ಹೇಳಿದ ನಟಿ ಗೌತಮಿ

25 ವರ್ಷಗಳ ಕಾಲ ಬಿಜೆಪಿ ಸದಸ್ಯೆಯಾಗಿದ್ದ ತಮಿಳು ನಟಿ ಗೌತಮಿ ತಡಿಮಲ್ಲ(Gautami Tadimalla) ಅವರು ಸೋಮವಾರ (ಅಕ್ಟೋಬರ್ 23) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ಕಾರಣವನ್ನು ಕೂಡ ತಿಳಿಸಿದ್ದಾರೆ. ಗೌತಮಿ ಪಕ್ಷದ ಬಗೆಗೆ ನನಗೆ ಗೌರವವಿದೆ. ಆದರೆ ಬಿಜೆಪಿಯಿಂದ ನನಗೆ ಯಾವುದೇ ಬೆಂಬಲ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಇದರಿಂದಾಗಿ ತನ್ನ ಜೀವನದ ದೊಡ್ಡ ಬಿಕ್ಕಟ್ಟಿನಲ್ಲಿ ಸಿಲುಕಿದೆ. ನನಗೆ ಮೋಸ ಮಾಡಿದವರನ್ನು ಪಕ್ಷದ ನಾಯಕರು ಬೆಂಬಲಿಸುತ್ತಿದ್ದಾರೆ ಎಂದು ದೂರಿದ್ದಾರೆ.

ನನಗೆ ಮೋಸ ಮಾಡಿದವರಿಗೆ ಪಕ್ಷದ ನಾಯಕರು ಸಹಾಯ ಮಾಡುತ್ತಿದ್ದಾರೆ, ಬಿಜೆಪಿ ತೊರೆದಿದ್ದಕ್ಕೆ ಕಾರಣ ಹೇಳಿದ ನಟಿ ಗೌತಮಿ
ಗೌತಮಿ ತಡಿಮಲ್ಲ
ನಯನಾ ರಾಜೀವ್
|

Updated on: Oct 23, 2023 | 10:41 AM

Share

25 ವರ್ಷಗಳ ಕಾಲ ಬಿಜೆಪಿ ಸದಸ್ಯೆಯಾಗಿದ್ದ ತಮಿಳು ನಟಿ ಗೌತಮಿ ತಡಿಮಲ್ಲ(Gautami Tadimalla) ಅವರು ಸೋಮವಾರ (ಅಕ್ಟೋಬರ್ 23) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೆ ಕಾರಣವನ್ನು ಕೂಡ ತಿಳಿಸಿದ್ದಾರೆ. ಗೌತಮಿ ಪಕ್ಷದ ಬಗೆಗೆ ನನಗೆ ಗೌರವವಿದೆ. ಆದರೆ ಬಿಜೆಪಿಯಿಂದ ನನಗೆ ಯಾವುದೇ ಬೆಂಬಲ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಇದರಿಂದಾಗಿ ತನ್ನ ಜೀವನದ ದೊಡ್ಡ ಬಿಕ್ಕಟ್ಟಿನಲ್ಲಿ ಸಿಲುಕಿದೆ. ನನಗೆ ಮೋಸ ಮಾಡಿದವರನ್ನು ಪಕ್ಷದ ನಾಯಕರು ಬೆಂಬಲಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಇಂದು ನಾನು ನನ್ನ ಜೀವನದಲ್ಲಿ ಊಹಿಸಲಾಗದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇನೆ. ಪಕ್ಷದ ನಾಯಕರಿಂದ ನನಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ನನಗೆ ದ್ರೋಹ ಬಗೆದಿದ್ದಲ್ಲದೆ ನನ್ನ ಜೀವನದ ಸಂಪಾದನೆಯನ್ನೂ ಕಿತ್ತುಕೊಂಡಿರುವ ಇಂತಹ ವ್ಯಕ್ತಿಗೆ ಸಹಾಯ ಮಾಡಿ ಬೆಂಬಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅಳಗಪ್ಪನ್ ಬಗ್ಗೆ ನಟಿ ಮಾತನಾಡಿದ್ದು, ಹಣ, ಆಸ್ತಿ, ದಾಖಲೆ ಪತ್ರ ಪಡೆದು ವಂಚಿಸಿದ್ದಾರೆ. ತಮಿಳುನಾಡು ಸರ್ಕಾರ ಹಾಗೂ ನ್ಯಾಯಾಂಗ ಇಲಾಖೆ ಮೇಲೆ ನಂಬಿಕೆಯಿದ್ದು, ತನಗೆ ಹಾಗೂ ತನ್ನ ಮಗುವಿನ ಭವಿಷ್ಯಕ್ಕಾಗಿ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವುದಾಗಿ ಅವರು ಹೇಳಿದ್ದಾರೆ.

ಮತ್ತಷ್ಟು ಓದಿ: ಎಬಿಪಿ-ಸಿ ವೋಟರ್ ಸಮೀಕ್ಷೆ: ವಿಧಾನಸಭಾ ಚುನಾವಣೆಯಲ್ಲಿ ಸಂಸದರನ್ನು ಕಣಕ್ಕಿಳಿಸುವ ಬಿಜೆಪಿಯ ತಂತ್ರ ವರ್ಕ್​ ಆಗುತ್ತಾ?

ವೇಲಾಚೇರಿಯಲ್ಲಿ ನೆಲೆಸಿರುವ ತಮ್ಮ ಪರಿಚಯಸ್ಥರಾದ ಸಿ.ಅಳಗಪ್ಪನ್ ಮತ್ತು ಅವರ ಪತ್ನಿ ನಾಚಲ್ ಅವರು 25 ಕೋಟಿ ರೂಪಾಯಿ ಮತ್ತು ಆಸ್ತಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗೌತಮಿ ಸೆಪ್ಟೆಂಬರ್‌ನಲ್ಲಿ ಪೊಲೀಸ್ ದೂರು ದಾಖಲಿಸಿದ್ದರು.

ತಮಿಳುನಾಡಿನಲ್ಲಿ 2021 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಯು ತಮಗೆ ರಾಜಪಾಳ್ಯಂ ಕ್ಷೇತ್ರವನ್ನು ನೀಡುತ್ತೇವೆ ಎಂದು ಭರವಸೆ ನೀಡಿತ್ತು. ಪಕ್ಷದಿಂದ ಸ್ಥಾನ ನೀಡಲಾಗುವುದು ಎಂಬ ಭರವಸೆಯೂ ಸಿಕ್ಕಿತ್ತು. ಆದರೆ, ಕೊನೆ ಕ್ಷಣದಲ್ಲಿ ಸೀಟು ನೀಡಲಿಲ್ಲ. ಇಷ್ಟೆಲ್ಲಾ ಘಟನೆಗಳ ನಂತರವೂ ಪಕ್ಷಕ್ಕೆ ನಿಷ್ಠವಾಗಿಯೇ ಇದ್ದೆ ಎಂದು ತಮಿಳು ನಟಿ ಹೇಳಿದ್ದಾರೆ. ಆದರೆ ಪಕ್ಷದಿಂದ ಬೆಂಬಲ ಸಿಗದೇ ಇದ್ದಾಗ ಅನಿವಾರ್ಯವಾಗಿ ಪಕ್ಷದಿಂದ ಹೊರಬರಬೇಕಾಯಿತು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!