AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಕಿಚ್ಚ ಸುದೀಪ್​ ಮುಖ್ಯ ಅತಿಥಿ; ಇಂದಿನಿಂದ ಪ್ರಾರಂಭ

2004ರಿಂದ ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಿನಿಮಾ ಉತ್ಸವ (International Film Festival of India (IFFI) ಪ್ರತಿಷ್ಠಿತ ಫಿಲ್ಮ್​ ಫೆಸ್ಟಿವಲ್​ಗಳ ಸಾಲಿಗೆ ಸೇರುತ್ತದೆ. ಹಾಗೇ ಏಷ್ಯಾದಲ್ಲೇ ಅತಿದೊಡ್ಡ ಸಿನಿ ಉತ್ಸವ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ.

51ನೇ ಗೋವಾ ಅಂತರರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ ಕಿಚ್ಚ ಸುದೀಪ್​ ಮುಖ್ಯ ಅತಿಥಿ; ಇಂದಿನಿಂದ ಪ್ರಾರಂಭ
Lakshmi Hegde
| Edited By: |

Updated on:Jan 16, 2021 | 11:34 AM

Share

ಗೋವಾದಲ್ಲಿ ಇಂದಿನಿಂದ ಪ್ರಾರಂಭವಾಗಲಿರುವ 51ನೇ ಅಂತಾರಾಷ್ಟ್ರೀಯ ಸಿನಿಮಾ ಉತ್ಸವದಲ್ಲಿ (IFFI) ಕನ್ನಡದ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ತಮ್ಮ ಸಿನಿಮಾಗಳ ಮೂಲಕ ರಾಷ್ಟ್ರಮಟ್ಟದಲ್ಲಿ ಖ್ಯಾತಿಗಳಿಸಿರುವ ಸುದೀಪ್​, ಗೋವಾದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಫಿಲ್ಮ್​ ಉತ್ಸವದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುತ್ತಿರುವುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿಯಾಗಿದೆ.

ಪಣಜಿಯಲ್ಲಿರುವ ಡಾ. ಶ್ಯಾಮ್​ ಪ್ರಸಾದ್​ ಮುಖರ್ಜಿ ಒಳಾಂಗಣ ಕ್ರೀಡಾಂಗಣದಲ್ಲಿ ಜನವರಿ 24ರವರೆಗೆ ಈ ಫಿಲ್ಮ್​ ಫೆಸ್ಟಿವಲ್​ ನಡೆಯಲಿದ್ದು,ವಿವಿಧ ದೇಶಗಳ 224 ಸಿನಿಮಾಗಳು ಈ ಬಾರಿ ಪ್ರದರ್ಶನಗೊಳ್ಳಲಿವೆ. ಪ್ರತಿಬಾರಿಯೂ ನವೆಂಬರ್​20-28ರವರೆಗೆ ಗೋವಾದಲ್ಲಿ ಈ ಫಿಲ್ಮ್​ ಫೆಸ್ಟಿವಲ್​ ನಡೆಯುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಈ ಬಾರಿ ಮುಂದೂಡಲಾಗಿತ್ತು.

2004ರಿಂದ ಗೋವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸಿನಿಮಾ ಉತ್ಸವ (International Film Festival of India (IFFI) ಪ್ರತಿಷ್ಠಿತ ಫಿಲ್ಮ್​ ಫೆಸ್ಟಿವಲ್​ಗಳ ಸಾಲಿಗೆ ಸೇರುತ್ತದೆ. ಹಾಗೇ ಏಷ್ಯಾದಲ್ಲೇ ಅತಿದೊಡ್ಡ ಸಿನಿ ಉತ್ಸವ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಈ ಬಾರಿ ವರ್ಚ್ಯುವಲ್​ ಆಗಿ ವೀಕ್ಷಿಸುವ ಅವಕಾಶವನ್ನೂ ನೀಡಲಾಗಿದೆ. ಕೊರೊನಾ ವೈರಸ್ ಪ್ರಸರಣ ಇರುವ ಕಾರಣಕ್ಕೆ, ತುಂಬ ಜನ ಆಗಮಿಸಿದರೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ವರ್ಚ್ಯುವಲ್​ ವ್ಯವಸ್ಥೆಯನ್ನೂ ಮಾಡಿದ್ದು, ವಿಶೇಷ.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ನೇತೃತ್ವದಲ್ಲಿ, ಗೋವಾ ಸರ್ಕಾರ ಮತ್ತು ಚಲನಚಿತ್ರ ಉತ್ಸವದ ನಿರ್ದೇಶನಾಲಯಗಳು ಜಂಟಿಯಾಗಿ ಈ ಉತ್ಸವವನ್ನು ಆಯೋಜಿಸುತ್ತಿದ್ದು, ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​, ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ ಸೇರಿ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಕೊವಿಡ್​-19ಗೆ ಸಂಬಂಧಪಟ್ಟ ಎಲ್ಲ ನಿಯಮಗಳನ್ನೂ ಪಾಲಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಉತ್ಸವ ನಡೆಯುವ ಕ್ರೀಡಾಂಗಣದ ಹೊರ, ಒಳಭಾಗಗಳನ್ನು ಭರ್ಜರಿ ಶೃಂಗರಿಸಲಾಗಿದೆ.

ಗಟ್ಟಿಮೇಳ ಧಾರಾವಾಹಿಯ ವೇದಾಂತ್​ ಸಂಭಾವನೆ ಎಷ್ಟು ಗೊತ್ತಾ?

Published On - 11:33 am, Sat, 16 January 21

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ