AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಲಿ ಕುರ್ಚಿಗಾಗಿ 30 ನಿಮಿಷ ಕಾಯಬೇಕಾಗಿ ಬಂತು; ಏರ್ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡ ಖುಷ್ಬೂ

ಡಿಯರ್ ಏರ್ ಇಂಡಿಯಾ (Air India) ಮೊಣಕಾಲಿನ ಗಾಯದ ಪ್ರಯಾಣಿಕರನ್ನು ಕರೆದೊಯ್ಯಲು ನಿಮ್ಮಲ್ಲಿ ಗಾಲಿಕುರ್ಚಿ ಇಲ್ಲ. ಅವರು ಇನ್ನೊಬ್ಬರಿಂದ ಗಾಲಿಕುರ್ಚಿಯನ್ನು ಎರವಲು ಪಡೆಯುವ ಮೊದಲು ನಾನು ಚೆನ್ನೈ ವಿಮಾನ ನಿಲ್ದಾಣದಲ್ಲಿ 30 ನಿಮಿಷ ಕಾಯಬೇಕಾಯಿತು

ಗಾಲಿ ಕುರ್ಚಿಗಾಗಿ 30 ನಿಮಿಷ ಕಾಯಬೇಕಾಗಿ ಬಂತು; ಏರ್ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡ ಖುಷ್ಬೂ
ಖುಷ್ಬೂ ಸುಂದರ್
TV9 Web
| Edited By: |

Updated on:Jan 31, 2023 | 7:53 PM

Share

ಚೆನ್ನೈ ವಿಮಾನ ನಿಲ್ದಾಣದಲ್ಲಿ ಗಾಲಿಕುರ್ಚಿಗಾಗಿ ಕಾಯುವಂತೆ ಮಾಡಲಾಗಿದೆ ಎಂದು ನಟಿ, ರಾಜಕಾರಣಿ ಖುಷ್ಬೂ ಸುಂದರ್  (Khushbu Sundar) ಟ್ವಿಟರ್‌ನಲ್ಲಿ ಏರ್ ಇಂಡಿಯಾವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ತಾನು ಗಾಲಿಕುರ್ಚಿಗಾಗಿ ವಿಮಾನ ನಿಲ್ದಾಣದಲ್ಲಿ ಅರ್ಧಗಂಟೆ ಕಾಯಬೇಕಾಗಿ ಬಂತು ಎಂದು ಹೇಳಿದ್ದಾರೆ. ಡಿಯರ್ ಏರ್ ಇಂಡಿಯಾ (Air India) ಮೊಣಕಾಲಿನ ಗಾಯದ ಪ್ರಯಾಣಿಕರನ್ನು ಕರೆದೊಯ್ಯಲು ನಿಮ್ಮಲ್ಲಿ ಗಾಲಿಕುರ್ಚಿ ಇಲ್ಲ. ಅವರು ಇನ್ನೊಬ್ಬರಿಂದ ಗಾಲಿಕುರ್ಚಿಯನ್ನು ಎರವಲು ಪಡೆಯುವ ಮೊದಲು ನಾನು ಚೆನ್ನೈ ವಿಮಾನ ನಿಲ್ದಾಣದಲ್ಲಿ 30 ನಿಮಿಷ ಕಾಯಬೇಕಾಯಿತು. ನೀವು ಉತ್ತಮವಾಗಿ ಮಾಡಬಹುದು ಎಂದು ನನಗೆ ಖಾತ್ರಿಯಿದೆ ಎಂದು ಏರ್ ಇಂಡಿಯಾಗೆ ಟ್ಯಾಗ್ ಮಾಡಿ ಖುಷ್ಬೂ ಟ್ವೀಟ್ ಮಾಡಿದ್ದಾರೆ.

ನಿಮಗೆ ಉಂಟಾದ ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ ಎಂದು ವಿಮಾನಯಾನ ಸಂಸ್ಥೆ ಪ್ರತಿಕ್ರಿಯಿಸಿದೆ. “ಆತ್ಮೀಯ ಮೇಡಂ, ನಿಮಗಾದ ಅನುಭವಕ್ಕೆ ನಾವು ತುಂಬಾ ವಿಷಾದಿಸುತ್ತೇವೆ. ನಾವು ಇದನ್ನು ನಮ್ಮ ಚೆನ್ನೈ ವಿಮಾನ ನಿಲ್ದಾಣದ ತಂಡಕ್ಕೆ ತಿಳಿಸುತ್ತಿದ್ದೇವೆ ಎಂದು ಏರ್‌ಲೈನ್ ಟ್ವೀಟ್ ಮಾಡಿದೆ.

ಕಳೆದ ವರ್ಷ ಎರಡು ಅಂತರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರೊಂದಿಗಿನ ಅಶಿಸ್ತಿನ ವರ್ತನೆಯ ಕನಿಷ್ಠ ಮೂರು ಘಟನೆಗಳ ನಡುವೆಯೇ ಖುಷ್ಬೂ ಸುಂದರ್ ಅವರ ಹೇಳಿಕೆಗಳು ಬಂದಿವೆ.

52 ವರ್ಷದ ಸುಂದರ್ ಅವರು ಅಕ್ಟೋಬರ್ 2020 ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದರು.  ಕಳೆದ ವರ್ಷ ಅಕ್ಟೋಬರ್‌ನಲ್ಲಿ ಡಿಎಂಕೆಯ ಪದಾಧಿಕಾರಿಯೊಬ್ಬರು ತಮ್ಮ ವಿರುದ್ಧ ಮಾಡಿದ ಹೇಳಿಕೆಯ ಬಗ್ಗೆ ಕಿಡಿಕಾರಿದ್ದ ಖುಷ್ಬೂ, ಆ ವ್ಯಕ್ತಿಯವನ್ನು ವಜಾ ಮಾಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಒತ್ತಾಯಿಸಿದ್ದರು.

ಡಿಎಂಕೆ ಕಾರ್ಯಾಧ್ಯಕ್ಷ ಸೈದಾಯಿ ಸಿದ್ದಿಕ್ ಹೇಳಿಕೆ ಬಗ್ಗೆ ಟ್ವೀಟ್ ಮಾಡಿದ್ದ ಖುಷ್ಬೂ, ನನ್ನ ಮುಖ್ಯಮಂತ್ರಿ (ಎಂಕೆ ಸ್ಟಾಲಿನ್) ನನ್ನ ಪರವಾಗಿ ನಿಲ್ಲುವುದನ್ನು ನೋಡಲು ನಾನು ಬಯಸುತ್ತೇನೆ. ಅವರು ಏಕೆ ಮೌನವಾಗಿದ್ದಾರೆ? ಎಂದು ಖುಷ್ಬೂ ಪ್ರಶ್ನಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 pm, Tue, 31 January 23

ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ