AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟ ಅನುಪಮ್ ಖೇರ್ ಪತ್ನಿ ನಟಿ, ರಾಜಕಾರಣಿ ಕಿರಣ್ ಖೇರ್​ಗೆ ಬ್ಲಡ್ ಕ್ಯಾನ್ಸರ್

Kirron Kher: ಕಿರಣ್ ಖೇರ್ ಅವರಿಗೆ ಬ್ಲಡ್ ಕ್ಯಾನ್ಸರ್​ನ ವಿಧಗಳಲ್ಲೊಂದಾದ ಮಲ್ಟಿಪಲ್ ಮೈಲೋಮಾ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅನುಪಮ್ ಖೇರ್ ಹೇಳಿದ್ದಾರೆ.

ಬಾಲಿವುಡ್ ನಟ ಅನುಪಮ್ ಖೇರ್ ಪತ್ನಿ ನಟಿ, ರಾಜಕಾರಣಿ ಕಿರಣ್ ಖೇರ್​ಗೆ ಬ್ಲಡ್ ಕ್ಯಾನ್ಸರ್
ಕಿರಣ್ ಖೇರ್
ರಶ್ಮಿ ಕಲ್ಲಕಟ್ಟ
|

Updated on:Apr 01, 2021 | 2:38 PM

Share

ದೆಹಲಿ: ಬಾಲಿವುಡ್​ನ ಖ್ಯಾತ ನಟಿ ಹಾಗೂ ರಾಜಕಾರಣಿ ಕಿರಣ್ ಖೇರ್ ರಕ್ತದ ಅರ್ಬುದದಿಂದ (blood cancer) ಬಳಲುತ್ತಿದ್ದಾರೆ ಎಂದು ಅವರ ಪತಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಹೇಳಿದ್ದಾರೆ. ಕಿರಣ್ ಖೇರ್ ಅವರಿಗೆ ಬ್ಲಡ್ ಕ್ಯಾನ್ಸರ್​ನ ವಿಧಗಳಲ್ಲೊಂದಾದ ಮಲ್ಟಿಪಲ್ ಮೈಲೋಮಾ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅನುಪಮ್ ಖೇರ್ ಮತ್ತು ಅವರ ಪುತ್ರ ಸಿಕಂದರ್ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಕಿರಣ್ ಅವರು ಮಲ್ಟಿಪಲ್ ಮೈಲೊಮಾ ರೋಗದ ಚಿಕಿತ್ಸೆಗೊಳಪಡಲಿದ್ದಾರೆ. ವದಂತಿಗಳಿಂದಾಗಿ ಪರಿಸ್ಥಿತಿ ಬಿಗಡಾಯಿಸುವುದಕ್ಕಿಂತ ಮುನ್ನ ಸಿಕಂದರ್ ಮತ್ತು ನಾನು ಈ ಬಗ್ಗೆ ಎಲ್ಲರಿಗೆ ವಿಷಯವನ್ನು ತಿಳಿಸಲು ಬಯಸುತ್ತೇವೆ . ಅವರು ಈಗ ಚಿಕಿತ್ಸೆಗೊಳಪಟ್ಟಿದ್ದು, ಮತ್ತಷ್ಟು ಶಕ್ತಿಶಾಲಿಯಾಗಿ ಮರಳಿ ಬರುತ್ತಾರೆ. ಅವರನ್ನು ತಜ್ಞ ವೈದ್ಯರು ನೋಡಿಕೊಳ್ಳುತ್ತಿದ್ದಾರೆ. ಆಕೆ ಛಲಗಾತಿ, ಇದನ್ನೂ ಗೆಲ್ಲುತ್ತಾಳೆ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ.

ಆಕೆಯ ಹೃದಯ ವಿಶಾಲವಾದುದು. ಹಾಗಾಗಿ ತುಂಬಾ ಜನರು ಆಕೆಯನ್ನು ಪ್ರೀತಿಸುತ್ತಾರೆ. ಆಕೆಗೆ ನಿಮ್ಮ ಪ್ರೀತಿಯನ್ನು ಕಳಿಸಿ, ನಿಮ್ಮ ಹೃದಯ ಮತ್ತು ಪ್ರಾರ್ಥನೆಯಲ್ಲಿ ಆಕೆ ಇರಲಿ. ಆಕೆ ಚೇತರಿಸಿಕೊಳ್ಳುತ್ತಿದ್ದು, ಬೆಂಬಲ ಮತ್ತು ಪ್ರೀತಿ ನೀಡಿದ ಎಲ್ಲರಿಗೂ ನಮ್ಮ ಧನ್ಯವಾದಗಳು ಎಂದಿದ್ದಾರೆ ಅನುಪಮ್ ಖೇರ್.

ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಬಿಜೆಪಿ ನಾಯಕಿ ಕಿರಣ್ ನಾಪತ್ತೆಯಾಗಿದ್ದಾರೆ, ಕಾಣೆಯಾಗಿದ್ದಾರೆ ಎಂದು ಜನರು ಹೇಳುತ್ತಿದ್ದಾರೆ. ಆಕೆ ಮಲ್ಟಿಪಲ್ ಮೈಲೋಮಾದಿಂದ ಬಳಲುತ್ತಿದ್ದು ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಂಡೀಗಢದ ಬಿಜೆಪಿ ಮುಖ್ಯಸ್ಥ ಅರುಣ್ ಸೂದ್ ಹೇಳಿಕೆ ನೀಡಿದ ಬೆನ್ನಲ್ಲೇ ಅನುಪಮ್ ಖೇರ್ ಮತ್ತು ಅವರ ಪುತ್ರ ಈ ವಿಷಯ ಬಹಿರಂಗಪಡಿಸಿದ್ದಾರೆ.

ನವೆಂಬರ್ 11ಕ್ಕೆ ಕಿರಣ್ ಅವರನ್ನು ಚಂಡೀಗಢ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಕೈಗೆ ಏಟಾಗಿದ್ದರಿಂದಲೋ, ಮೂಳೆ ಮುರಿದಿರುವುದರಿಂದಲೋ ಅವರನ್ನು ಆಸ್ಪತ್ರೆಗೆ ದಾಖಲಿಸಿಲ್ಲ. ಆಕೆ ಕುಸಿದು ಬಿದ್ದಿಲ್ಲ. ಆಮೇಲೆ PET ಸ್ಕ್ಯಾನ್ ಮಾಡಿದಾಗ ಆಕೆಯ ಭುಜ ಮತ್ತು ಬಲ ತೋಳಿನಲ್ಲಿ ಮಲ್ಟಿಪಲ್ ಮೈಲೋಮಾ ಇರುವುದಾಗಿ ಪತ್ತೆಯಾಗಿತ್ತು ಎಂದು ಇಂಡಿಯನ್ ಎಕ್ಸ್ ಪ್ರೆಸ್ ಜತೆ ಮಾತನಾಡಿದ್ದ ಸೂದ್ ಹೇಳಿದ್ದರು.

ಇದನ್ನೂ ಓದಿ:   ಮಗ್ಗುಲ ಮುಳ್ಳಂತಿದ್ದ ಕ್ಯಾನ್ಸರ್​ ಜತೆ ಹೋರಾಡುತ್ತ, ಕೊರೊನಾ ರೋಗಿಗಳ ಸೇವೆ ಮಾಡಿದ ನರ್ಸ್​ ಕೃಪಾ ಶಿಲಬದ್ರ

Published On - 2:37 pm, Thu, 1 April 21

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK