AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ನಟ ಅನುಪಮ್ ಖೇರ್ ಪತ್ನಿ ನಟಿ, ರಾಜಕಾರಣಿ ಕಿರಣ್ ಖೇರ್​ಗೆ ಬ್ಲಡ್ ಕ್ಯಾನ್ಸರ್

Kirron Kher: ಕಿರಣ್ ಖೇರ್ ಅವರಿಗೆ ಬ್ಲಡ್ ಕ್ಯಾನ್ಸರ್​ನ ವಿಧಗಳಲ್ಲೊಂದಾದ ಮಲ್ಟಿಪಲ್ ಮೈಲೋಮಾ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅನುಪಮ್ ಖೇರ್ ಹೇಳಿದ್ದಾರೆ.

ಬಾಲಿವುಡ್ ನಟ ಅನುಪಮ್ ಖೇರ್ ಪತ್ನಿ ನಟಿ, ರಾಜಕಾರಣಿ ಕಿರಣ್ ಖೇರ್​ಗೆ ಬ್ಲಡ್ ಕ್ಯಾನ್ಸರ್
ಕಿರಣ್ ಖೇರ್
ರಶ್ಮಿ ಕಲ್ಲಕಟ್ಟ
|

Updated on:Apr 01, 2021 | 2:38 PM

Share

ದೆಹಲಿ: ಬಾಲಿವುಡ್​ನ ಖ್ಯಾತ ನಟಿ ಹಾಗೂ ರಾಜಕಾರಣಿ ಕಿರಣ್ ಖೇರ್ ರಕ್ತದ ಅರ್ಬುದದಿಂದ (blood cancer) ಬಳಲುತ್ತಿದ್ದಾರೆ ಎಂದು ಅವರ ಪತಿ ಬಾಲಿವುಡ್ ಹಿರಿಯ ನಟ ಅನುಪಮ್ ಖೇರ್ ಹೇಳಿದ್ದಾರೆ. ಕಿರಣ್ ಖೇರ್ ಅವರಿಗೆ ಬ್ಲಡ್ ಕ್ಯಾನ್ಸರ್​ನ ವಿಧಗಳಲ್ಲೊಂದಾದ ಮಲ್ಟಿಪಲ್ ಮೈಲೋಮಾ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅನುಪಮ್ ಖೇರ್ ಮತ್ತು ಅವರ ಪುತ್ರ ಸಿಕಂದರ್ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಕಿರಣ್ ಅವರು ಮಲ್ಟಿಪಲ್ ಮೈಲೊಮಾ ರೋಗದ ಚಿಕಿತ್ಸೆಗೊಳಪಡಲಿದ್ದಾರೆ. ವದಂತಿಗಳಿಂದಾಗಿ ಪರಿಸ್ಥಿತಿ ಬಿಗಡಾಯಿಸುವುದಕ್ಕಿಂತ ಮುನ್ನ ಸಿಕಂದರ್ ಮತ್ತು ನಾನು ಈ ಬಗ್ಗೆ ಎಲ್ಲರಿಗೆ ವಿಷಯವನ್ನು ತಿಳಿಸಲು ಬಯಸುತ್ತೇವೆ . ಅವರು ಈಗ ಚಿಕಿತ್ಸೆಗೊಳಪಟ್ಟಿದ್ದು, ಮತ್ತಷ್ಟು ಶಕ್ತಿಶಾಲಿಯಾಗಿ ಮರಳಿ ಬರುತ್ತಾರೆ. ಅವರನ್ನು ತಜ್ಞ ವೈದ್ಯರು ನೋಡಿಕೊಳ್ಳುತ್ತಿದ್ದಾರೆ. ಆಕೆ ಛಲಗಾತಿ, ಇದನ್ನೂ ಗೆಲ್ಲುತ್ತಾಳೆ ಎಂದು ಅನುಪಮ್ ಖೇರ್ ಟ್ವೀಟ್ ಮಾಡಿದ್ದಾರೆ.

ಆಕೆಯ ಹೃದಯ ವಿಶಾಲವಾದುದು. ಹಾಗಾಗಿ ತುಂಬಾ ಜನರು ಆಕೆಯನ್ನು ಪ್ರೀತಿಸುತ್ತಾರೆ. ಆಕೆಗೆ ನಿಮ್ಮ ಪ್ರೀತಿಯನ್ನು ಕಳಿಸಿ, ನಿಮ್ಮ ಹೃದಯ ಮತ್ತು ಪ್ರಾರ್ಥನೆಯಲ್ಲಿ ಆಕೆ ಇರಲಿ. ಆಕೆ ಚೇತರಿಸಿಕೊಳ್ಳುತ್ತಿದ್ದು, ಬೆಂಬಲ ಮತ್ತು ಪ್ರೀತಿ ನೀಡಿದ ಎಲ್ಲರಿಗೂ ನಮ್ಮ ಧನ್ಯವಾದಗಳು ಎಂದಿದ್ದಾರೆ ಅನುಪಮ್ ಖೇರ್.

ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಬಿಜೆಪಿ ನಾಯಕಿ ಕಿರಣ್ ನಾಪತ್ತೆಯಾಗಿದ್ದಾರೆ, ಕಾಣೆಯಾಗಿದ್ದಾರೆ ಎಂದು ಜನರು ಹೇಳುತ್ತಿದ್ದಾರೆ. ಆಕೆ ಮಲ್ಟಿಪಲ್ ಮೈಲೋಮಾದಿಂದ ಬಳಲುತ್ತಿದ್ದು ಮುಂಬೈಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಂಡೀಗಢದ ಬಿಜೆಪಿ ಮುಖ್ಯಸ್ಥ ಅರುಣ್ ಸೂದ್ ಹೇಳಿಕೆ ನೀಡಿದ ಬೆನ್ನಲ್ಲೇ ಅನುಪಮ್ ಖೇರ್ ಮತ್ತು ಅವರ ಪುತ್ರ ಈ ವಿಷಯ ಬಹಿರಂಗಪಡಿಸಿದ್ದಾರೆ.

ನವೆಂಬರ್ 11ಕ್ಕೆ ಕಿರಣ್ ಅವರನ್ನು ಚಂಡೀಗಢ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಕೆಯ ಕೈಗೆ ಏಟಾಗಿದ್ದರಿಂದಲೋ, ಮೂಳೆ ಮುರಿದಿರುವುದರಿಂದಲೋ ಅವರನ್ನು ಆಸ್ಪತ್ರೆಗೆ ದಾಖಲಿಸಿಲ್ಲ. ಆಕೆ ಕುಸಿದು ಬಿದ್ದಿಲ್ಲ. ಆಮೇಲೆ PET ಸ್ಕ್ಯಾನ್ ಮಾಡಿದಾಗ ಆಕೆಯ ಭುಜ ಮತ್ತು ಬಲ ತೋಳಿನಲ್ಲಿ ಮಲ್ಟಿಪಲ್ ಮೈಲೋಮಾ ಇರುವುದಾಗಿ ಪತ್ತೆಯಾಗಿತ್ತು ಎಂದು ಇಂಡಿಯನ್ ಎಕ್ಸ್ ಪ್ರೆಸ್ ಜತೆ ಮಾತನಾಡಿದ್ದ ಸೂದ್ ಹೇಳಿದ್ದರು.

ಇದನ್ನೂ ಓದಿ:   ಮಗ್ಗುಲ ಮುಳ್ಳಂತಿದ್ದ ಕ್ಯಾನ್ಸರ್​ ಜತೆ ಹೋರಾಡುತ್ತ, ಕೊರೊನಾ ರೋಗಿಗಳ ಸೇವೆ ಮಾಡಿದ ನರ್ಸ್​ ಕೃಪಾ ಶಿಲಬದ್ರ

Published On - 2:37 pm, Thu, 1 April 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು