AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..
ಪರೇಶ್​ ರಾವಲ್​ ಕೊರೊನಾ ಲಸಿಕೆ ಪಡೆದ ಕ್ಷಣ
Lakshmi Hegde
|

Updated on: Mar 27, 2021 | 5:12 PM

Share

ನವದೆಹಲಿ: ನಟ, ರಾಜಕಾರಣಿ ಪರೇಶ್​ ರಾವಲ್​ ಅವರು ಕೊರೊನಾ ಸೋಂಕಿತರಾಗಿದ್ದಾರೆ. ದುರ್ದೈವವೆಂದರೆ ಇತ್ತೀಚೆಗಷ್ಟೇ ಕೊರೊನಾ ಲಸಿಕೆ ಮೊದಲ ಡೋಸ್​ ತೆಗೆದುಕೊಂಡಿದ್ದರು. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಪರೇಶ್​, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪರೇಶ್​ ರಾವಲ್​ ಮಾರ್ಚ್​ 9ರಂದು ಕೊರೊನಾ ವ್ಯಾಕ್ಸಿನ್​ನ ಮೊದಲ ಡೋಸ್​ ಪಡೆದಿದ್ದರು. ಅಂದು ಲಸಿಕೆ ಪಡೆದಿದ್ದ ರಾವಲ್​ ಟ್ವೀಟ್​ ಮಾಡಿ, ನಾನಿವತ್ತು ಕೊವಿಡ್​ ಲಸಿಕೆ ತೆಗೆದುಕೊಂಡಿದ್ದೇನೆ. ಕೊರೊನಾ ವಿರುದ್ಧ ಮುಂಚೂಣಿಯಲ್ಲಿದ್ದುಕೊಂಡು ಹೋರಾಟ ನಡೆಸಿದ ವೈದ್ಯರು, ನರ್ಸ್​​ಗಳು, ಆರೋಗ್ಯ ಸಿಬ್ಬಂದಿ, ವಿಜ್ಞಾನಿಗಳಿಗೆ ಕೃತಜ್ಞತೆಗಳು. ಹಾಗೇ, ಪ್ರಧಾನಿ ನರೇಂದ್ರ ಮೋದಿಯವರಿಗೂ ಧನ್ಯವಾದ ತಿಳಿಸಿದ್ದರು. ಹಾಗೇ, ವ್ಯಾಕ್ಸಿನ್​ ಪಡೆದ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದರು. ಹಾಗೇ, ಪರೇಶ್​ ರಾವಲ್​ ಪತ್ನಿ ಸ್ವರೂಪ್​ ರಾವಲ್ ಕೂಡ ಲಸಿಕೆ ಪಡೆದು, ಫೋಟೋ ಶೇರ್ ಮಾಡಿಕೊಂಡಿದ್ದರು.

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು. ಎರಡನೇ ಡೋಸ್ ಪಡೆಯುವುದಕ್ಕೂ ಮೊದಲೇ ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 62,258 ಮಂದಿಗೆ ಕೊರೊನಾ; 5 ತಿಂಗಳುಗಳಲ್ಲಿ ವರದಿ ಆಗಿರುವ ಅತಿಹೆಚ್ಚು ಪ್ರಕರಣ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ