AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..
ಪರೇಶ್​ ರಾವಲ್​ ಕೊರೊನಾ ಲಸಿಕೆ ಪಡೆದ ಕ್ಷಣ
Lakshmi Hegde
|

Updated on: Mar 27, 2021 | 5:12 PM

Share

ನವದೆಹಲಿ: ನಟ, ರಾಜಕಾರಣಿ ಪರೇಶ್​ ರಾವಲ್​ ಅವರು ಕೊರೊನಾ ಸೋಂಕಿತರಾಗಿದ್ದಾರೆ. ದುರ್ದೈವವೆಂದರೆ ಇತ್ತೀಚೆಗಷ್ಟೇ ಕೊರೊನಾ ಲಸಿಕೆ ಮೊದಲ ಡೋಸ್​ ತೆಗೆದುಕೊಂಡಿದ್ದರು. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಪರೇಶ್​, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪರೇಶ್​ ರಾವಲ್​ ಮಾರ್ಚ್​ 9ರಂದು ಕೊರೊನಾ ವ್ಯಾಕ್ಸಿನ್​ನ ಮೊದಲ ಡೋಸ್​ ಪಡೆದಿದ್ದರು. ಅಂದು ಲಸಿಕೆ ಪಡೆದಿದ್ದ ರಾವಲ್​ ಟ್ವೀಟ್​ ಮಾಡಿ, ನಾನಿವತ್ತು ಕೊವಿಡ್​ ಲಸಿಕೆ ತೆಗೆದುಕೊಂಡಿದ್ದೇನೆ. ಕೊರೊನಾ ವಿರುದ್ಧ ಮುಂಚೂಣಿಯಲ್ಲಿದ್ದುಕೊಂಡು ಹೋರಾಟ ನಡೆಸಿದ ವೈದ್ಯರು, ನರ್ಸ್​​ಗಳು, ಆರೋಗ್ಯ ಸಿಬ್ಬಂದಿ, ವಿಜ್ಞಾನಿಗಳಿಗೆ ಕೃತಜ್ಞತೆಗಳು. ಹಾಗೇ, ಪ್ರಧಾನಿ ನರೇಂದ್ರ ಮೋದಿಯವರಿಗೂ ಧನ್ಯವಾದ ತಿಳಿಸಿದ್ದರು. ಹಾಗೇ, ವ್ಯಾಕ್ಸಿನ್​ ಪಡೆದ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದರು. ಹಾಗೇ, ಪರೇಶ್​ ರಾವಲ್​ ಪತ್ನಿ ಸ್ವರೂಪ್​ ರಾವಲ್ ಕೂಡ ಲಸಿಕೆ ಪಡೆದು, ಫೋಟೋ ಶೇರ್ ಮಾಡಿಕೊಂಡಿದ್ದರು.

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು. ಎರಡನೇ ಡೋಸ್ ಪಡೆಯುವುದಕ್ಕೂ ಮೊದಲೇ ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 62,258 ಮಂದಿಗೆ ಕೊರೊನಾ; 5 ತಿಂಗಳುಗಳಲ್ಲಿ ವರದಿ ಆಗಿರುವ ಅತಿಹೆಚ್ಚು ಪ್ರಕರಣ

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ