AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು.

ಕೊರೊನಾ​ ಲಸಿಕೆ ಮೊದಲ ಡೋಸ್ ಪಡೆದಿದ್ದ ನಟ, ರಾಜಕಾರಣಿ ಪರೇಶ್​ ರಾವಲ್​ಗೆ ಕೊರೊನಾ ಸೋಂಕು..
ಪರೇಶ್​ ರಾವಲ್​ ಕೊರೊನಾ ಲಸಿಕೆ ಪಡೆದ ಕ್ಷಣ
Lakshmi Hegde
|

Updated on: Mar 27, 2021 | 5:12 PM

Share

ನವದೆಹಲಿ: ನಟ, ರಾಜಕಾರಣಿ ಪರೇಶ್​ ರಾವಲ್​ ಅವರು ಕೊರೊನಾ ಸೋಂಕಿತರಾಗಿದ್ದಾರೆ. ದುರ್ದೈವವೆಂದರೆ ಇತ್ತೀಚೆಗಷ್ಟೇ ಕೊರೊನಾ ಲಸಿಕೆ ಮೊದಲ ಡೋಸ್​ ತೆಗೆದುಕೊಂಡಿದ್ದರು. ಈ ಬಗ್ಗೆ ಶುಕ್ರವಾರ ಟ್ವೀಟ್ ಮಾಡಿರುವ ಪರೇಶ್​, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 10 ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ತಪಾಸಣೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಪರೇಶ್​ ರಾವಲ್​ ಮಾರ್ಚ್​ 9ರಂದು ಕೊರೊನಾ ವ್ಯಾಕ್ಸಿನ್​ನ ಮೊದಲ ಡೋಸ್​ ಪಡೆದಿದ್ದರು. ಅಂದು ಲಸಿಕೆ ಪಡೆದಿದ್ದ ರಾವಲ್​ ಟ್ವೀಟ್​ ಮಾಡಿ, ನಾನಿವತ್ತು ಕೊವಿಡ್​ ಲಸಿಕೆ ತೆಗೆದುಕೊಂಡಿದ್ದೇನೆ. ಕೊರೊನಾ ವಿರುದ್ಧ ಮುಂಚೂಣಿಯಲ್ಲಿದ್ದುಕೊಂಡು ಹೋರಾಟ ನಡೆಸಿದ ವೈದ್ಯರು, ನರ್ಸ್​​ಗಳು, ಆರೋಗ್ಯ ಸಿಬ್ಬಂದಿ, ವಿಜ್ಞಾನಿಗಳಿಗೆ ಕೃತಜ್ಞತೆಗಳು. ಹಾಗೇ, ಪ್ರಧಾನಿ ನರೇಂದ್ರ ಮೋದಿಯವರಿಗೂ ಧನ್ಯವಾದ ತಿಳಿಸಿದ್ದರು. ಹಾಗೇ, ವ್ಯಾಕ್ಸಿನ್​ ಪಡೆದ ಫೋಟೋವನ್ನೂ ಶೇರ್ ಮಾಡಿಕೊಂಡಿದ್ದರು. ಹಾಗೇ, ಪರೇಶ್​ ರಾವಲ್​ ಪತ್ನಿ ಸ್ವರೂಪ್​ ರಾವಲ್ ಕೂಡ ಲಸಿಕೆ ಪಡೆದು, ಫೋಟೋ ಶೇರ್ ಮಾಡಿಕೊಂಡಿದ್ದರು.

ಲಸಿಕೆಯನ್ನು ಎರಡು ಹಂತದಲ್ಲಿ ಪಡೆಯಬೇಕು. ಅಂದರೆ ಮೊದಲ ಡೋಸ್​ ಪಡೆದ 28 ದಿನಕ್ಕೆ ಮತ್ತೊಂದು ಡೋಸ್​ ತೆಗೆದುಕೊಳ್ಳಬೇಕು. ಪರೇಶ್​ ರಾವಲ್​ ಸದ್ಯ ಮೊದಲ ಡೋಸ್​ ತೆಗೆದುಕೊಂಡಿದ್ದರು. ಎರಡನೇ ಡೋಸ್ ಪಡೆಯುವುದಕ್ಕೂ ಮೊದಲೇ ಅವರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 62,258 ಮಂದಿಗೆ ಕೊರೊನಾ; 5 ತಿಂಗಳುಗಳಲ್ಲಿ ವರದಿ ಆಗಿರುವ ಅತಿಹೆಚ್ಚು ಪ್ರಕರಣ

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?