AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಕಾರಿ ಮಾರುತ್ತಿದ್ದ ಟೆಕ್ಕಿ ಯುವತಿಗೆ ಕರೆದು ಕೆಲಸ ಕೊಟ್ಟ ಸೋನು ಸೂದ್ The Real Hero

ಹೈದರಾಬಾದ್: ಬಹುಬಾಷಾ ನಟ ಸೋನು ಸೂದ್ ಮತ್ತೇ ಸುದ್ದಿಯಲ್ಲಿದ್ದಾರೆ . ಕೆಲದಿನಗಳ ಹಿಂದಷ್ಟೇ ಆಂಧ್ರದ ಬಡ ರೈತ ಮತ್ತು ಆತನ ಇಬ್ಬರು ಹೆಣ್ಣುಮಕ್ಕಳು ಹೊಲದಲ್ಲಿ ನೊಗ ಹೊತ್ತು ಉಳುಮೆ ಮಾಡುವುದನ್ನು ನೋಡಿ ಟ್ರ್ಯಾಕ್ಟರ್ ಕೊಡಿಸಿದ್ದ ಸೂದ್ ಈಗ ಮತ್ತೊಬ್ಬ ಯುವತಿಗೆ ಸಹಾಯ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹೌದು ಪ್ರತಿಭಾನ್ವಿತ ನಟ ಸೋನು ಸೂದ್, ಈಗ ಕೊರೊನಾದಿಂದಾಗಿ ಕೆಲಸ ಕಳೆದುಕೊಂಡು ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹೈದರಾಬಾದ್ ಟೆಕ್ಕಿ ಯವತಿಯೊಬ್ಬಳಿಗೆ ಸಹಾಯ ಹಸ್ತ ಚಾಚಿದ್ದಾರೆ. ಹೈದರಾಬಾದ್‌ನ ವರ್ಚೂಸ್ ಕಾರ್ಪೋರೇಶನ್ ಎಂಬ […]

ತರಕಾರಿ ಮಾರುತ್ತಿದ್ದ ಟೆಕ್ಕಿ ಯುವತಿಗೆ ಕರೆದು ಕೆಲಸ ಕೊಟ್ಟ ಸೋನು ಸೂದ್ The Real Hero
Guru
| Edited By: |

Updated on:Jul 30, 2020 | 4:02 PM

Share

ಹೈದರಾಬಾದ್: ಬಹುಬಾಷಾ ನಟ ಸೋನು ಸೂದ್ ಮತ್ತೇ ಸುದ್ದಿಯಲ್ಲಿದ್ದಾರೆ . ಕೆಲದಿನಗಳ ಹಿಂದಷ್ಟೇ ಆಂಧ್ರದ ಬಡ ರೈತ ಮತ್ತು ಆತನ ಇಬ್ಬರು ಹೆಣ್ಣುಮಕ್ಕಳು ಹೊಲದಲ್ಲಿ ನೊಗ ಹೊತ್ತು ಉಳುಮೆ ಮಾಡುವುದನ್ನು ನೋಡಿ ಟ್ರ್ಯಾಕ್ಟರ್ ಕೊಡಿಸಿದ್ದ ಸೂದ್ ಈಗ ಮತ್ತೊಬ್ಬ ಯುವತಿಗೆ ಸಹಾಯ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಹೌದು ಪ್ರತಿಭಾನ್ವಿತ ನಟ ಸೋನು ಸೂದ್, ಈಗ ಕೊರೊನಾದಿಂದಾಗಿ ಕೆಲಸ ಕಳೆದುಕೊಂಡು ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹೈದರಾಬಾದ್ ಟೆಕ್ಕಿ ಯವತಿಯೊಬ್ಬಳಿಗೆ ಸಹಾಯ ಹಸ್ತ ಚಾಚಿದ್ದಾರೆ. ಹೈದರಾಬಾದ್‌ನ ವರ್ಚೂಸ್ ಕಾರ್ಪೋರೇಶನ್ ಎಂಬ ಮಲ್ಟಿ ನ್ಯಾಷನಲ್ ಕಂಪನಿಯಲ್ಲಿ ಕೆಲಸ ಮಾಡುದತ್ತಿದ್ದ ಶಾರದಾ ಎಂಬ ಯುವತಿಯನ್ನ ಆ ಕಂಪನಿ ಕೊರೊನಾ ಸಂಕಷ್ಟ ಆರಂಭವಾಗುತ್ತಿದ್ದಂತೆ ಕೆಲಸದಿಂದ ಬಿಡುಗಡೆ ಮಾಡಿತ್ತು.

ಹೈದರಾಬಾದ್‌ನಲ್ಲಿ ತರಕಾರಿ ಮಾರುತ್ತಿದ್ದ ಟೆಕ್ಕಿ

ಮೊದಲೇ ಬಡತನದಿಂದ ಕಷ್ಟಪಟ್ಟು ಎಂಜಿನಿಯರಿಂಗ್ ಓದಿದ್ದ ಈ ಸಾಫ್ಟವೇರ್ ಹುಡುಗಿ ಇದರಿಂದ ಆರಂಭದಲ್ಲಿ ಕಂಗಾಲಾಗಿದ್ದಳು., ಆದ್ರೆ ತಾನು ಹುಟ್ಟಿದಾಗಿನಿಂದ ಕುಟುಂಬ ನಡೆಸುತ್ತಿದ್ದ ತರಕಾರಿ ವ್ಯಾಪಾರ ಈಕೆಯ ಕೈ ಹಿಡಿದಿದೆ. ಹೊಟ್ಟೆಪಾಡಿಗೆ ಮತ್ತು ಕುಟುಂಬ ಸಲುಹಲು ಶಾರದಾ ಮತ್ತೇ ರಸ್ತೆ ಬದಿಯಲ್ಲಿ ತರಕಾರಿ ಮಾರಲು ಆರಂಭಿಸಿದ್ದಾಳೆ.

ತರಕಾರಿ ಮಾರುತ್ತಿದ್ದ ಟೆಕ್ಕಿಗೆ ಕೆಲಸ ಕೊಟ್ಟ ಸೋನು

ಈ ವಿಷಯವನ್ನ ಯಾರೋ ಒಬ್ಬರು ಟ್ವೀಟ್ ಮೂಲಕ ನಟ ಸೋನು ಸೂದ್ ಗಮನಕ್ಕ ತಂದಿದ್ದಾರೆ. ತಕ್ಷಣವೇ ಪ್ರತಿಕ್ರಿಯಿಸಿರುವ ಸೋನು, ನಾನು ಈಕೆ ಕೆಲಸ ಕೊಡಿಸುತ್ತೇನೆಂದು ಅಭಯ ನೀಡಿದ್ದಾರೆ. ಅಷ್ಟೇ ಅಲ್ಲ ತಮ್ಮ ಕಚೇರಿ ಸಿಬ್ಬಂದಿಯನ್ನ ಆಕೆಯಿದ್ದಲ್ಲಿಗೆ ಕಳಿಸಿ ಸಂದರ್ಶನ ಮಾಡಿ ಕೆಲಸವನ್ನೂ ನೀಡಿದ್ದಾರೆ. ನಂತರ ಈ ವಿಷಯವನ್ನ ಟ್ವೀಟ್ ಮಾಡಿದ್ದಾರೆ.

ಕೊರೊನಾ ಸಂಕಷ್ಟದಲ್ಲಿ ಬಡವರ ಪಾಲಿಗೆ ಸೂಪರ್‌ ಹೀರೋ

ಕೊರೊನಾ ಸಂಕಷ್ಟದಲ್ಲಿ ಸೋನು ಸೂದ್ರ ಈ ಸಹಾಯ ಹಸ್ತದ ಗುಣ ಕೋಟ್ಯಂತರ ಜನರ ಹೃದಯ ಗೆದ್ದಿದೆ. ಈಗಾಗಲೇ ದಿನಗೂಲಿ ವಲಸೆ ಕಾರ್ಮಿಕರಿಗೆ ಬಸ್ ಸೌಲಭ್ಯ, ರೈತನ ಮಕ್ಕಳಿಗೆ ಟ್ರ್ಯಾಕ್ಟರ್ ಕೊಡಿಸಿ ಸಹಾಯ ಮಾಡಿರುವ ಸೋನು ಸೂದ್ ಈಗ ಟೆಕ್ಕಿಗೆ ಕೆಲಸವನ್ನು ಕೊಟ್ಟಿದ್ದಾರೆ. ಇದೆಲ್ಲವನ್ನ ಗಮನಿಸಿದ್ರೆ ತೆರೆ ಮೇಲೆ ಖಳನಾಯಕ ಪಾತ್ರ ಮಾಡುವ ಸೋನು ನಿಜ ಜೀವನದಲ್ಲಿ ಮಾತ್ರ ಪಕ್ಕಾ ಹೀರೋ ಎನ್ನೋದನ್ನ ತೋರಿಸಿಕೊಟ್ಟಿದ್ದಾರೆ.

Published On - 7:11 pm, Tue, 28 July 20

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು