2026ರ ತಮಿಳುನಾಡು ಚುನಾವಣೆಗೆ ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ
2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಟಿವಿಕೆಯ ಅಧಿಕೃತ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಅವರನ್ನು ಆಯ್ಕೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ಬಿಜೆಪಿ ಮತ್ತು ಡಿಎಂಕೆ ಜೊತೆ ಮೈತ್ರಿ ಇಲ್ಲ ಎಂದು ಟಿವಿಕೆ ಘೋಷಿಸಿದೆ. ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಟಿವಿಕೆ ಯಾವ ಮೈತ್ರಿಕೂಟಗಳನ್ನು ಮಾಡಿಕೊಳ್ಳಬೇಕು ಎಂಬುದನ್ನು ನಿರ್ಧರಿಸಲು ವಿಜಯ್ ಅವರಿಗೆ ಸಂಪೂರ್ಣ ಅಧಿಕಾರವಿದೆ ಎಂದು ಪಕ್ಷ ಹೇಳಿದೆ.

ಚೆನ್ನೈ, ಜುಲೈ 4: 2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಅಧಿಕೃತ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ-ರಾಜಕಾರಣಿ ವಿಜಯ್ (Actor Vijay) ಅವರನ್ನು ಘೋಷಿಸಲಾಗಿದೆ. ನಟ ವಿಜಯ್ ಅವರು ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವೆ ರಾಜ್ಯ ಪ್ರವಾಸ ಮಾಡಲಿದ್ದಾರೆ. ಬಿಜೆಪಿ ಮತ್ತು ಡಿಎಂಕೆ ಜೊತೆಗಿನ ಮೈತ್ರಿಯನ್ನು ವಿಜಯ್ ತಳ್ಳಿಹಾಕಿದ್ದು, ಅವರನ್ನು ಟಿವಿಕೆಯ ‘ಸೈದ್ಧಾಂತಿಕ ಶತ್ರುಗಳು’ ಎಂದು ಕರೆದಿದ್ದಾರೆ.
2026ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ-ರಾಜಕಾರಣಿ ವಿಜಯ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಶುಕ್ರವಾರ ಅಧಿಕೃತವಾಗಿ ಘೋಷಿಸಲಾಯಿತು. ಸಮಿತಿ ಸಭೆಯಲ್ಲಿ ಮಾತನಾಡಿದ ವಿಜಯ್, “ನಮ್ಮ ಪಕ್ಷವು ಬಿಜೆಪಿಯೊಂದಿಗೆ ಎಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಸಾರ್ವಜನಿಕವಾಗಿ ಮಾತ್ರವಲ್ಲದೆ ಮುಚ್ಚಿದ ಬಾಗಿಲುಗಳ ಹಿಂದೆಯೂ ಮೈತ್ರಿ ಮಾಡಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡು: ಅಣ್ಣಾಮಲೈ ದೇವಸ್ಥಾನದ ಆವರಣದಲ್ಲಿ ಮಾಂಸಾಹಾರ ಸೇವನೆ, ಉದ್ವಿಗ್ನತೆ
“ಸೈದ್ಧಾಂತಿಕ ಶತ್ರುಗಳು” ಎಂದು ಕರೆದವರೊಂದಿಗೆ ಕೈಜೋಡಿಸುವ ಯಾವುದೇ ಸಾಧ್ಯತೆಯಿಲ್ಲ ಎಂದು ವಿಜಯ್ ಸ್ಪಷ್ಟವಾಗಿ ನಿರಾಕರಿಸಿದ್ದಾರೆ. “ಬಿಜೆಪಿ ಬೇರೆಡೆ ವಿಷದ ಬೀಜಗಳನ್ನು ಬಿತ್ತಬಹುದು, ಆದರೆ ತಮಿಳುನಾಡಿನಲ್ಲಿ ಅಲ್ಲ” ಎಂದು ಅವರು ಹೇಳಿದ್ದಾರೆ. “ನೀವು ಅಣ್ಣಾ ಮತ್ತು ಪೆರಿಯಾರ್ ಅವರನ್ನು ವಿರೋಧಿಸಲು ಅಥವಾ ಅವಮಾನಿಸಲು ಮತ್ತು ತಮಿಳುನಾಡಿನಲ್ಲಿ ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿಯೊಂದಿಗೆ ಕೈಜೋಡಿಸಲು ಟಿವಿಕೆ ಡಿಎಂಕೆ ಅಥವಾ ಎಐಎಡಿಎಂಕೆ ಅಲ್ಲ” ಎಂದಿದ್ದಾರೆ.
Thalaivar @TVKVijayHQ Full Speech 📸 pic.twitter.com/Jkp5NdouEq
— TVK Vijay Trends (@TVKVijayTrends) July 4, 2025
ಇದನ್ನೂ ಓದಿ: ತಮಿಳುನಾಡು ದೇವಾಲಯಕ್ಕೆ ರೋಬೊ ಆನೆ ಉಡುಗೊರೆ ಕೊಟ್ಟ ತ್ರಿಷಾ ಕೃಷ್ಣನ್
ಚುನಾವಣೆಗೆ ಮುಂಚಿತವಾಗಿ ಮೈತ್ರಿಯನ್ನು ನಿರ್ಧರಿಸಲು ಪಕ್ಷವು ವಿಜಯ್ ಅವರಿಗೆ ಸಂಪೂರ್ಣ ಅಧಿಕಾರವನ್ನು ವಹಿಸಿತು. ಟಿವಿಕೆ ತಮಿಳುನಾಡು ರಾಜ್ಯದಲ್ಲಿ 2 ಕೋಟಿ ಸದಸ್ಯರನ್ನು ದಾಖಲಿಸುವ ಗುರಿಯನ್ನು ಹೊಂದಿತ್ತು. ಜನರನ್ನು ತಲುಪಲು ವಿಜಯ್ ಈ ವರ್ಷ ಸೆಪ್ಟೆಂಬರ್ ನಿಂದ ಡಿಸೆಂಬರ್ ವರೆಗೆ ತಮಿಳುನಾಡಿನಾದ್ಯಂತ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ. ಮತದಾರರನ್ನು ಭೇಟಿ ಮಾಡಿ ಬೆಂಬಲವನ್ನು ಕೋರಲಿದ್ದಾರೆ. ಟಿವಿಕೆಯ ಎರಡನೇ ರಾಜ್ಯ ಸಮ್ಮೇಳನವು ಆಗಸ್ಟ್ನಲ್ಲಿ ನಡೆಯಲಿದ್ದು, ಅಲ್ಲಿ ಹೆಚ್ಚಿನ ಕಾರ್ಯತಂತ್ರಗಳನ್ನು ಅನಾವರಣಗೊಳಿಸುವ ನಿರೀಕ್ಷೆಯಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




