AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ಇಂದು ನಿವೃತ್ತರಾದ ಎಸ್.ಎ.ಬೋಬ್ಡೆ ಅವರ ವಿದಾಯ​ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ ಬಾರ್​ ಅಸೋಸಿಯೇಷನ್​ ಮುಖ್ಯಸ್ಥ ವಿಕಾಸ್​ ಸಿಂಗ್​ ಈ ವಿಚಾರ ಬಹಿರಂಗಪಡಿಸಿದ್ದಾರೆ.

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ
ಶಾರುಖ್​ ಖಾನ್​
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 23, 2021 | 9:58 PM

ಹಲವು ದಶಕಗಳ ರಾಮ ಜನ್ಮಭೂಮಿ ವಿವಾದಕ್ಕೆ 2019ರಲ್ಲಿ ತೆರೆ ಬಿದ್ದಿತ್ತು. ರಾಮ ಜನ್ಮಭೂಮಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಎಸ್.​ಎ. ಬೋಬ್ಡೆ ಕೂಡ ಇದ್ದರು. ಈ ವಿವಾದ ಇತ್ಯರ್ಥ ಮಾಡಲು ರಚಿಸಲಾದ ಮಧ್ಯಸ್ಥಿಕೆ ಸಮಿತಿಯಲ್ಲಿ ಬಾಲಿವುಡ್​ ನಟ ಶಾರುಖ್​ಖಾನ್​ ಅವರನ್ನು ಸೇರಿಸಿಕೊಳ್ಳುವ ಆಲೋಚನೆ ಬೋಬ್ಡೆ ಅವರದ್ದಾಗಿತ್ತಂತೆ. ಇದಕ್ಕೆ ಶಾರುಖ್​ ಕೂಡ ಆಸಕ್ತಿ ತೋರಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಇದು ನೆರವೇರಲಿಲ್ಲ

ಬೋಬ್ಡೆ ಅವರು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನಿವೃತ್ತಿ ಹೊಂದಿದ್ದಾರೆ. ಕೊರೊನಾ ವೈರಸ್​ ಹೆಚ್ಚುರತ್ತಿರುವುದರಿಂದ ವರ್ಚುವಲ್​ ಸಮಾರಂಭದ​ ಮೂಲಕ ಅವರಿಗೆ ವಿದಾಯ ಹೇಳಲಾಗಿದೆ. ಈ ವಿದಾಯ​ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ ಬಾರ್​ ಅಸೋಸಿಯೇಷನ್​ ಮುಖ್ಯಸ್ಥ ವಿಕಾಸ್​ ಸಿಂಗ್​ ಈ ವಿಚಾರ ಬಿಚ್ಚಿಟ್ಟಿದ್ದಾರೆ.

ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಮಿತಿ ಒಂದನ್ನು ರಚಿಸಲು ಸುಪ್ರೀಂಕೋರ್ಟ್ ನಿರ್ಧರಿಸಿತ್ತು​. ಈ ಕಮಿಟಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ ಅವರಿಗೆ ಆಸಕ್ತಿ ಇದೆಯೇ ಎಂಬುದನ್ನು ವಿಚಾರಿಸಿ ಎಂದು ಬೋಬ್ಡೆ ನನಗೆ ಸೂಚಿಸಿದ್ದರು. ನಾನು ಶಾರುಖ್​ ಬಳಿ ಮಾತನಾಡಿದೆ. ಅವರು ಖುಷಿಪಟ್ಟರು. ಆದರೆ, ಕೊನೇ ಕ್ಷಣದಲ್ಲಿ ಇದು ನೆರವೇರಲಿಲ್ಲ ಎಂದು ವಿಕಾಸ್​ ಸಿಂಗ್​ ತಿಳಿಸಿದ್ದಾರೆ.

ಅಯೋಧ್ಯೆ ವಿವಾದ ಬಗೆ ಹರಿಸಲು ಸುಪ್ರೀಂಕೋರ್ಟ್​ ಸಮಿತಿ ಒಂದನ್ನು ರಚನೆ ಮಾಡಿತ್ತು. ಈ ಸಮಿತಿಯಲ್ಲಿ ಎಫ್​ಎಂಐ ಕಲಿಫುಲ್ಲಾ, ಆಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್​ ಹಾಗೂ ಹಿರಿಯ ವಕೀಲ ಶ್ರೀರಾಮ್​ ಪಾಂಚು ಇದ್ದರು. ಆದರೆ, ಮಧ್ಯಸ್ಥಿಕೆ ಯಶಸ್ವಿಯಾಗದ ಕಾರಣ, ಸುಪ್ರೀಂಕೋರ್ಟ್​ ತಾನೇ ಪ್ರಕರಣವನ್ನು ಕೈಗೆತ್ತಿಕೊಂಡು ತೀರ್ಪು ನೀಡಿತ್ತು.

2019ರಲ್ಲಿ ಸುಪ್ರೀಂಕೋರ್ಟ್​ ರಾಮ ಜನ್ಮಭೂಮಿ ಬಗ್ಗೆ ಮಹತ್ವದ ತೀರ್ಪೊಂದನ್ನು ನೀಡಿತ್ತು. ವಿವಾದಿತ ಜಾಗವನ್ನು ರಾಮ ಮಂದಿರ ನಿರ್ಮಾಣ ಮಾಡಲು ಹಸ್ತಾಂತರ ಮಾಡಲಾಗಿತ್ತು ಹಾಗೂ ಮಸೀದಿ ನಿರ್ಮಾಣ ಮಾಡಲು ಪ್ರತ್ಯೇಕ ಜಾಗ ನೀಡಲಾಗಿತ್ತು.

ಇದನ್ನೂ ಓದಿ: ಸಂಸ್ಕೃತವನ್ನು ದೇಶದ ಅಧಿಕೃತ ಭಾಷೆಯಾಗಿಸುವ ಇಚ್ಛೆ ಅಂಬೇಡ್ಕರ್ ಅವರಿ​ಗಿತ್ತು: ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಇದನ್ನೂ ಓದಿ: IPL 2021: ಚೆನ್ನೈ- ಕೋಲ್ಕತ್ತಾ ನಡುವೆ ಇಂದು 25ನೇ ಐಪಿಎಲ್ ಪಂದ್ಯ .. ಶಾರುಖ್​ ತಂಡದೆದುರು ಧೋನಿ ತಂಡದ್ದೆ ಮೇಲುಗೈ!

‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್