ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನದಿಂದ ಇಂದು ನಿವೃತ್ತರಾದ ಎಸ್.ಎ.ಬೋಬ್ಡೆ ಅವರ ವಿದಾಯ​ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ ಬಾರ್​ ಅಸೋಸಿಯೇಷನ್​ ಮುಖ್ಯಸ್ಥ ವಿಕಾಸ್​ ಸಿಂಗ್​ ಈ ವಿಚಾರ ಬಹಿರಂಗಪಡಿಸಿದ್ದಾರೆ.

ರಾಮ ಜನ್ಮಭೂಮಿ ವಿವಾದ ಇತ್ಯರ್ಥ ಸಮಿತಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ಗೂ ಇತ್ತು ಆಹ್ವಾನ
ಶಾರುಖ್​ ಖಾನ್​
Edited By:

Updated on: Apr 23, 2021 | 9:58 PM

ಹಲವು ದಶಕಗಳ ರಾಮ ಜನ್ಮಭೂಮಿ ವಿವಾದಕ್ಕೆ 2019ರಲ್ಲಿ ತೆರೆ ಬಿದ್ದಿತ್ತು. ರಾಮ ಜನ್ಮಭೂಮಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ನ್ಯಾಯಪೀಠದಲ್ಲಿ ನ್ಯಾಯಮೂರ್ತಿ ಎಸ್.​ಎ. ಬೋಬ್ಡೆ ಕೂಡ ಇದ್ದರು. ಈ ವಿವಾದ ಇತ್ಯರ್ಥ ಮಾಡಲು ರಚಿಸಲಾದ ಮಧ್ಯಸ್ಥಿಕೆ ಸಮಿತಿಯಲ್ಲಿ ಬಾಲಿವುಡ್​ ನಟ ಶಾರುಖ್​ಖಾನ್​ ಅವರನ್ನು ಸೇರಿಸಿಕೊಳ್ಳುವ ಆಲೋಚನೆ ಬೋಬ್ಡೆ ಅವರದ್ದಾಗಿತ್ತಂತೆ. ಇದಕ್ಕೆ ಶಾರುಖ್​ ಕೂಡ ಆಸಕ್ತಿ ತೋರಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಇದು ನೆರವೇರಲಿಲ್ಲ

ಬೋಬ್ಡೆ ಅವರು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನಿವೃತ್ತಿ ಹೊಂದಿದ್ದಾರೆ. ಕೊರೊನಾ ವೈರಸ್​ ಹೆಚ್ಚುರತ್ತಿರುವುದರಿಂದ ವರ್ಚುವಲ್​ ಸಮಾರಂಭದ​ ಮೂಲಕ ಅವರಿಗೆ ವಿದಾಯ ಹೇಳಲಾಗಿದೆ. ಈ ವಿದಾಯ​ ಸಮಾರಂಭದಲ್ಲಿ ಸುಪ್ರೀಂಕೋರ್ಟ್​ ಬಾರ್​ ಅಸೋಸಿಯೇಷನ್​ ಮುಖ್ಯಸ್ಥ ವಿಕಾಸ್​ ಸಿಂಗ್​ ಈ ವಿಚಾರ ಬಿಚ್ಚಿಟ್ಟಿದ್ದಾರೆ.

ಅಯೋಧ್ಯೆ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಲು ಸಮಿತಿ ಒಂದನ್ನು ರಚಿಸಲು ಸುಪ್ರೀಂಕೋರ್ಟ್ ನಿರ್ಧರಿಸಿತ್ತು​. ಈ ಕಮಿಟಿಯಲ್ಲಿ ಪಾಲ್ಗೊಳ್ಳಲು ಶಾರುಖ್​ ಖಾನ್​ ಅವರಿಗೆ ಆಸಕ್ತಿ ಇದೆಯೇ ಎಂಬುದನ್ನು ವಿಚಾರಿಸಿ ಎಂದು ಬೋಬ್ಡೆ ನನಗೆ ಸೂಚಿಸಿದ್ದರು. ನಾನು ಶಾರುಖ್​ ಬಳಿ ಮಾತನಾಡಿದೆ. ಅವರು ಖುಷಿಪಟ್ಟರು. ಆದರೆ, ಕೊನೇ ಕ್ಷಣದಲ್ಲಿ ಇದು ನೆರವೇರಲಿಲ್ಲ ಎಂದು ವಿಕಾಸ್​ ಸಿಂಗ್​ ತಿಳಿಸಿದ್ದಾರೆ.

ಅಯೋಧ್ಯೆ ವಿವಾದ ಬಗೆ ಹರಿಸಲು ಸುಪ್ರೀಂಕೋರ್ಟ್​ ಸಮಿತಿ ಒಂದನ್ನು ರಚನೆ ಮಾಡಿತ್ತು. ಈ ಸಮಿತಿಯಲ್ಲಿ ಎಫ್​ಎಂಐ ಕಲಿಫುಲ್ಲಾ, ಆಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್​ ಹಾಗೂ ಹಿರಿಯ ವಕೀಲ ಶ್ರೀರಾಮ್​ ಪಾಂಚು ಇದ್ದರು. ಆದರೆ, ಮಧ್ಯಸ್ಥಿಕೆ ಯಶಸ್ವಿಯಾಗದ ಕಾರಣ, ಸುಪ್ರೀಂಕೋರ್ಟ್​ ತಾನೇ ಪ್ರಕರಣವನ್ನು ಕೈಗೆತ್ತಿಕೊಂಡು ತೀರ್ಪು ನೀಡಿತ್ತು.

2019ರಲ್ಲಿ ಸುಪ್ರೀಂಕೋರ್ಟ್​ ರಾಮ ಜನ್ಮಭೂಮಿ ಬಗ್ಗೆ ಮಹತ್ವದ ತೀರ್ಪೊಂದನ್ನು ನೀಡಿತ್ತು. ವಿವಾದಿತ ಜಾಗವನ್ನು ರಾಮ ಮಂದಿರ ನಿರ್ಮಾಣ ಮಾಡಲು ಹಸ್ತಾಂತರ ಮಾಡಲಾಗಿತ್ತು ಹಾಗೂ ಮಸೀದಿ ನಿರ್ಮಾಣ ಮಾಡಲು ಪ್ರತ್ಯೇಕ ಜಾಗ ನೀಡಲಾಗಿತ್ತು.

ಇದನ್ನೂ ಓದಿ: ಸಂಸ್ಕೃತವನ್ನು ದೇಶದ ಅಧಿಕೃತ ಭಾಷೆಯಾಗಿಸುವ ಇಚ್ಛೆ ಅಂಬೇಡ್ಕರ್ ಅವರಿ​ಗಿತ್ತು: ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಬೋಬ್ಡೆ

ಇದನ್ನೂ ಓದಿ: IPL 2021: ಚೆನ್ನೈ- ಕೋಲ್ಕತ್ತಾ ನಡುವೆ ಇಂದು 25ನೇ ಐಪಿಎಲ್ ಪಂದ್ಯ .. ಶಾರುಖ್​ ತಂಡದೆದುರು ಧೋನಿ ತಂಡದ್ದೆ ಮೇಲುಗೈ!

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us