Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರಿಗೆ ಆಡಳಿತ ನಡೆಸಲು ಬರುವುದಿಲ್ಲ, ಸಚಿನ್​ಗೆ ಬ್ಯಾಟಿಂಗ್ ಗೊತ್ತಿಲ್ಲ ಎಂಬಂತಾಯ್ತು ನಿಮ್ಮ ವಾದ: ಕಂಗನಾ ರಣಾವತ್

Kangana Ranaut: ಎಲ್ಲದಕ್ಕೂ ರೊಚ್ಚಿಗೇಳಬೇಡಿ. ಕುಂಭ ಮೇಳ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಮೋದಿ ಕೆಲವು ತಪ್ಪುಗಳನ್ನು ಮಾಡಿದ್ದಾರೆ ಎಂಬುದು ನಿಮಗೂ ಗೊತ್ತಿರಬೇಕು. ದೇಶದ ಪ್ರಧಾನಿಂತೆ ನಡೆದುಕೊಳ್ಳುವ ಮೂಲಕ ಎಲ್ಲವನ್ನೂ ಸರಿ ಮಾಡುವ ಭರವಸೆಯನ್ನು ಅವರು ನೀಡಬೇಕು ಎಂದು ಟ್ವೀಟಿಗರೊಬ್ಬರು ಕಂಗನಾ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದಾರೆ.

ಮೋದಿಯವರಿಗೆ ಆಡಳಿತ ನಡೆಸಲು ಬರುವುದಿಲ್ಲ, ಸಚಿನ್​ಗೆ ಬ್ಯಾಟಿಂಗ್ ಗೊತ್ತಿಲ್ಲ ಎಂಬಂತಾಯ್ತು ನಿಮ್ಮ  ವಾದ: ಕಂಗನಾ ರಣಾವತ್
ನಟಿ ಕಂಗನಾ
Follow us
ರಶ್ಮಿ ಕಲ್ಲಕಟ್ಟ
|

Updated on:Apr 27, 2021 | 9:39 PM

ಮುಂಬೈ: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು #Resign_PM_Modi ಎಂಬ ಹ್ಯಾಷ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗುತ್ತಿದೆ. ಮೋದಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುವ ಟ್ವೀಟ್​ಗಳ ಬಗ್ಗೆ ಗುಡುಗಿದ ಬಾಲಿವುಡ್ ನಟಿ ಕಂಗನಾ ರಣಾವತ್, ಮೋದಿಜೀ ಅವರಿಗೆ ಆಡಳಿತ ನಡೆಸಲು ಬರುವುದಿಲ್ಲ,ಕಂಗನಾಗೆ ನಟನೆ ಬರುವುದಿಲ್ಲ, ಸಚಿನ್ ಗೆ ಬ್ಯಾಟಿಂಗ್ ಮಾಡಲು ಬರುವುದಿಲ್ಲ, ಲತಾಜೀ ಅವರಿಗೆ ಹಾಡಲು ಬರುವುದಿಲ್ಲ, ಆದರೆ ಈ ಚಿಂದಿ ಟ್ರೋಲ್ ಗಳಿಗೆ ಎಲ್ಲವೂ ತಿಳಿದಿದೆ. ಪ್ಲೀಸ್ #Resign_PM_Modi ಜೀ, ಈ ವಿಷ್ಣು ಅವತಾರದ ಟ್ರೋಲ್ ಗಳನ್ನು ಭಾರತದ ಮುಂದಿನ ಪ್ರಧಾನಿಯನ್ನಾಗಿ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆಗೆ ಮೋದಿಯೇ ಕಾರಣ ಎಂದು ಆರೋಪಿಸಿ ನೆಟ್ಟಿಗರು #Resign_PM_Modi ಹ್ಯಾಷ್ ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಕಂಗನಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಕೆಲವು ನೆಟ್ಟಿಗರು ದೇಶದಲ್ಲಿ ಕೊವಿಡ್ ಪ್ರಕರಣಗಳು ಇರುವಾಗಲೇ ಕುಂಭ ಮೇಳ ಆಯೋಜಿಸಲು, ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಲು ಮೋದಿ ಅನುಮತಿ ನೀಡಬಾರದಿತ್ತು ಎಂದಿದ್ದಾರೆ.

ಎಲ್ಲದಕ್ಕೂ ರೊಚ್ಚಿಗೇಳಬೇಡಿ. ಕುಂಭ ಮೇಳ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಮೋದಿ ಕೆಲವು ತಪ್ಪುಗಳನ್ನು ಮಾಡಿದ್ದಾರೆ ಎಂಬುದು ನಿಮಗೂ ಗೊತ್ತಿರಬೇಕು. ದೇಶದ ಪ್ರಧಾನಿಂತೆ ನಡೆದುಕೊಳ್ಳುವ ಮೂಲಕ ಎಲ್ಲವನ್ನೂ ಸರಿ ಮಾಡುವ ಭರವಸೆಯನ್ನು ಅವರು ನೀಡಬೇಕು ಎಂದು ಟ್ವೀಟಿಗರೊಬ್ಬರು ಕಂಗನಾ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದಾರೆ.

ವಿಡಿಯೊವೊಂದನ್ನು ಟ್ವೀಟ್  ಮಾಡಿದ ಕಂಗನಾ ಇಡೀ ಜಗತ್ತು ಭಾರತದ ಬಗ್ಗೆ ಅನುಭೂತಿ ಮತ್ತು ಗೌರವವನ್ನು ತೋರಿಸುತ್ತಿದೆ, ಅದಕ್ಕೆ ಕಾರಣ ನಮ್ಮ ನಾಯಕ ಮತ್ತು ಅವರ ಶ್ರೇಷ್ಠ ನಾಯಕತ್ವ, ಖಾತರಿಗಾಗಿ ಏನನ್ನೂ ತೆಗೆದುಕೊಳ್ಳಬೇಡಿ, ವಿಷಪೂರಿತ ಕೃತಜ್ಞತೆಯಿಲ್ಲದ ಸರೀಸೃಪವಾಗಿರ.ಇವರುಕೊವಿಡ್ ವಿರುದ್ಧ ಹೋರಾಡುವ ಬದಲು ಆ ಮಹಾನ್ ನಾಯಕತ್ವದ ವಿರುದ್ಧ ಹೋರಾಡುತ್ತಾರೆ ಮತ್ತು ಅವರನ್ನು ಕಟುವಾಗಿ ನಿಂದಿಸುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: Kangana Ranaut : ನಟ ಕಾರ್ತಿಕ್ ಸಹ ಬಾಲಿವುಡ್ ನೆಪೋಟಿಸ್ಮ್ ಅನ್ನು ಎದುರಿಸುತ್ತಿದ್ದಾರೆ : ನಟಿ ಕಂಗನಾ

Published On - 9:38 pm, Tue, 27 April 21

ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಬಹಳಷ್ಟು ಪಡಿತರ ಅಂಗಡಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ವಂಚನೆ
ಬಹಳಷ್ಟು ಪಡಿತರ ಅಂಗಡಿಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿದೆ ವಂಚನೆ
ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಕಾಳಿಂಗ ಸರ್ಪದೊಂದಿಗೆ ಭೀಕರ ಕಾಳಗ: ಮಕ್ಕಳ ಜೀವ ಉಳಿಸಿ ಪ್ರಾಣ ಬಿಟ್ಟ ಶ್ವಾನ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ