AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿಯವರಿಗೆ ಆಡಳಿತ ನಡೆಸಲು ಬರುವುದಿಲ್ಲ, ಸಚಿನ್​ಗೆ ಬ್ಯಾಟಿಂಗ್ ಗೊತ್ತಿಲ್ಲ ಎಂಬಂತಾಯ್ತು ನಿಮ್ಮ ವಾದ: ಕಂಗನಾ ರಣಾವತ್

Kangana Ranaut: ಎಲ್ಲದಕ್ಕೂ ರೊಚ್ಚಿಗೇಳಬೇಡಿ. ಕುಂಭ ಮೇಳ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಮೋದಿ ಕೆಲವು ತಪ್ಪುಗಳನ್ನು ಮಾಡಿದ್ದಾರೆ ಎಂಬುದು ನಿಮಗೂ ಗೊತ್ತಿರಬೇಕು. ದೇಶದ ಪ್ರಧಾನಿಂತೆ ನಡೆದುಕೊಳ್ಳುವ ಮೂಲಕ ಎಲ್ಲವನ್ನೂ ಸರಿ ಮಾಡುವ ಭರವಸೆಯನ್ನು ಅವರು ನೀಡಬೇಕು ಎಂದು ಟ್ವೀಟಿಗರೊಬ್ಬರು ಕಂಗನಾ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದಾರೆ.

ಮೋದಿಯವರಿಗೆ ಆಡಳಿತ ನಡೆಸಲು ಬರುವುದಿಲ್ಲ, ಸಚಿನ್​ಗೆ ಬ್ಯಾಟಿಂಗ್ ಗೊತ್ತಿಲ್ಲ ಎಂಬಂತಾಯ್ತು ನಿಮ್ಮ  ವಾದ: ಕಂಗನಾ ರಣಾವತ್
ನಟಿ ಕಂಗನಾ
ರಶ್ಮಿ ಕಲ್ಲಕಟ್ಟ
|

Updated on:Apr 27, 2021 | 9:39 PM

Share

ಮುಂಬೈ: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು #Resign_PM_Modi ಎಂಬ ಹ್ಯಾಷ್​ಟ್ಯಾಗ್ ಟ್ವಿಟರ್​ನಲ್ಲಿ ಟ್ರೆಂಡ್ ಆಗುತ್ತಿದೆ. ಮೋದಿ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುವ ಟ್ವೀಟ್​ಗಳ ಬಗ್ಗೆ ಗುಡುಗಿದ ಬಾಲಿವುಡ್ ನಟಿ ಕಂಗನಾ ರಣಾವತ್, ಮೋದಿಜೀ ಅವರಿಗೆ ಆಡಳಿತ ನಡೆಸಲು ಬರುವುದಿಲ್ಲ,ಕಂಗನಾಗೆ ನಟನೆ ಬರುವುದಿಲ್ಲ, ಸಚಿನ್ ಗೆ ಬ್ಯಾಟಿಂಗ್ ಮಾಡಲು ಬರುವುದಿಲ್ಲ, ಲತಾಜೀ ಅವರಿಗೆ ಹಾಡಲು ಬರುವುದಿಲ್ಲ, ಆದರೆ ಈ ಚಿಂದಿ ಟ್ರೋಲ್ ಗಳಿಗೆ ಎಲ್ಲವೂ ತಿಳಿದಿದೆ. ಪ್ಲೀಸ್ #Resign_PM_Modi ಜೀ, ಈ ವಿಷ್ಣು ಅವತಾರದ ಟ್ರೋಲ್ ಗಳನ್ನು ಭಾರತದ ಮುಂದಿನ ಪ್ರಧಾನಿಯನ್ನಾಗಿ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಎರಡನೇ ಅಲೆಗೆ ಮೋದಿಯೇ ಕಾರಣ ಎಂದು ಆರೋಪಿಸಿ ನೆಟ್ಟಿಗರು #Resign_PM_Modi ಹ್ಯಾಷ್ ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.

ಕಂಗನಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿದ ಕೆಲವು ನೆಟ್ಟಿಗರು ದೇಶದಲ್ಲಿ ಕೊವಿಡ್ ಪ್ರಕರಣಗಳು ಇರುವಾಗಲೇ ಕುಂಭ ಮೇಳ ಆಯೋಜಿಸಲು, ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸಲು ಮೋದಿ ಅನುಮತಿ ನೀಡಬಾರದಿತ್ತು ಎಂದಿದ್ದಾರೆ.

ಎಲ್ಲದಕ್ಕೂ ರೊಚ್ಚಿಗೇಳಬೇಡಿ. ಕುಂಭ ಮೇಳ ಮತ್ತು ಚುನಾವಣಾ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಮೋದಿ ಕೆಲವು ತಪ್ಪುಗಳನ್ನು ಮಾಡಿದ್ದಾರೆ ಎಂಬುದು ನಿಮಗೂ ಗೊತ್ತಿರಬೇಕು. ದೇಶದ ಪ್ರಧಾನಿಂತೆ ನಡೆದುಕೊಳ್ಳುವ ಮೂಲಕ ಎಲ್ಲವನ್ನೂ ಸರಿ ಮಾಡುವ ಭರವಸೆಯನ್ನು ಅವರು ನೀಡಬೇಕು ಎಂದು ಟ್ವೀಟಿಗರೊಬ್ಬರು ಕಂಗನಾ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದಾರೆ.

ವಿಡಿಯೊವೊಂದನ್ನು ಟ್ವೀಟ್  ಮಾಡಿದ ಕಂಗನಾ ಇಡೀ ಜಗತ್ತು ಭಾರತದ ಬಗ್ಗೆ ಅನುಭೂತಿ ಮತ್ತು ಗೌರವವನ್ನು ತೋರಿಸುತ್ತಿದೆ, ಅದಕ್ಕೆ ಕಾರಣ ನಮ್ಮ ನಾಯಕ ಮತ್ತು ಅವರ ಶ್ರೇಷ್ಠ ನಾಯಕತ್ವ, ಖಾತರಿಗಾಗಿ ಏನನ್ನೂ ತೆಗೆದುಕೊಳ್ಳಬೇಡಿ, ವಿಷಪೂರಿತ ಕೃತಜ್ಞತೆಯಿಲ್ಲದ ಸರೀಸೃಪವಾಗಿರ.ಇವರುಕೊವಿಡ್ ವಿರುದ್ಧ ಹೋರಾಡುವ ಬದಲು ಆ ಮಹಾನ್ ನಾಯಕತ್ವದ ವಿರುದ್ಧ ಹೋರಾಡುತ್ತಾರೆ ಮತ್ತು ಅವರನ್ನು ಕಟುವಾಗಿ ನಿಂದಿಸುತ್ತಾರೆ ಎಂದಿದ್ದಾರೆ.

ಇದನ್ನೂ ಓದಿ: Kangana Ranaut : ನಟ ಕಾರ್ತಿಕ್ ಸಹ ಬಾಲಿವುಡ್ ನೆಪೋಟಿಸ್ಮ್ ಅನ್ನು ಎದುರಿಸುತ್ತಿದ್ದಾರೆ : ನಟಿ ಕಂಗನಾ

Published On - 9:38 pm, Tue, 27 April 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!