AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Group: ಅದಾನಿ ಗ್ರೂಪ್ ವಿರುದ್ಧ ತನಿಖೆಗೆ ವಿಪಕ್ಷಗಳ ಒತ್ತಾಯ; ಬ್ಯಾಂಕುಗಳಿಂದ ವಿವರ ಕೇಳಿದ ಆರ್​ಬಿಐ

Opposition Parties Attack Government: ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಥವಾ ಸಿಜೆಐ ನೇಮಿತ ಸಮಿತಿಯೊಂದರಿಂದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ವಿಪಕ್ಷಗಳ ನಾಯಕರು ಆಗ್ರಹಿಸುತ್ತಿದ್ದಾರೆ.

Adani Group: ಅದಾನಿ ಗ್ರೂಪ್ ವಿರುದ್ಧ ತನಿಖೆಗೆ ವಿಪಕ್ಷಗಳ ಒತ್ತಾಯ; ಬ್ಯಾಂಕುಗಳಿಂದ ವಿವರ ಕೇಳಿದ ಆರ್​ಬಿಐ
ವಿಪಕ್ಷಗಳ ನಾಯಕರ ಸಭೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 02, 2023 | 1:39 PM

Share

ನವದೆಹಲಿ: ಅದಾನಿ ಗ್ರೂಪ್​ನಿಂದ ಷೇರುಮೌಲ್ಯ ಹೆಚ್ಚಿಸಲು ವಂಚನೆಗಳಾಗಿವೆ ಎಂಬಂತೆ ಹಿಂಡನ್ಬರ್ಗ್ ರಿಸರ್ಚ್ ವರದಿ (Hindenburg Research Report) ಮಾಡಿದ ಬೆನ್ನಲ್ಲೇ ಭಾರತದಲ್ಲಿ ಷೇರುಪೇಟೆ ಅಲುಗಾಡಲು ಆರಂಭವಾಗಿದೆ. ಜೊತೆಗೆ, ನರೇಂದ್ರ ಮೋದಿ ನೇತೃತ್ವದ ಆಳಿತಾರೂಢ ಬಿಜೆಪಿಯನ್ನು ಅಲುಗಾಡಿಸಲು ವಿಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಂತಾಗಿದೆ. ಇದೀಗ ಸಂಸತ್​ನಲ್ಲಿ ಅದಾನಿ ಗ್ರೂಪ್ ಪ್ರಕರಣವೇ (Adani Group) ಜೋರು ಸದ್ದು ಮಾಡುತ್ತಿದೆ. ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ– JPC- Joint Parliamentary Committee) ಅಥವಾ ಸಿಜೆಐ ನೇಮಿತ ಸಮಿತಿಯೊಂದರಿಂದ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ವಿಪಕ್ಷಗಳ ನಾಯಕರು ಆಗ್ರಹಿಸುತ್ತಿದ್ದಾರೆ.

ಸಂಸತ್​ನಲ್ಲಿ ಅದಾನಿ ಗ್ರೂಪ್ ವಿಚಾರವನ್ನು ಪ್ರಸ್ತಾಪಿಸಿ ಚರ್ಚಿಸಲು ವಿಪಕ್ಷಗಳು ಪ್ರಯತ್ನಿಸುತ್ತಿವೆ. ಆದರೆ, ಸರ್ಕಾರದಿಂದ ಅದಕ್ಕೆ ಅವಕಾಶ ಸಿಗುತ್ತಿಲ್ಲ ಎಂಬುದು ಕಾಂಗ್ರೆಸ್ ಮತ್ತಿತರ ಪಕ್ಷಗಳ ಆಕ್ರೋಶವಾಗಿದೆ. ಸಂಸದೀಯ ಅಧಿವೇಶನಕ್ಕೆ ಮುನ್ನ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾಜವಾದಿ ಪಕ್ಷ, ಎನ್​ಸಿಪಿ, ಶಿವಸೇನೆ, ಡಿಎಂಕೆ, ಟಿಎಂಸಿ, ಎಎಪಿ, ಸಿಪಿಐಎಂ ಮೊದಲಾದ ವಿಪಕ್ಷಗಳ ನಾಯಕರ ಸಭೆ ನಡೆದು ಅದಾನಿ ವಿಚಾರವನ್ನು ಚರ್ಚೆಗೆ ತರಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ಅವಕಾಶ ಕಲ್ಪಿಸದೇ ಹೋದ್ದರಿಂದ ಗುರುವಾರದ ಅಧಿವೇಶನದಲ್ಲಿ ವಿಪಕ್ಷಗಳ ಸದಸ್ಯರು ಗಲಾಟೆ ನಡೆಸಿದ್ದಾರೆ.

ಇದನ್ನೂ ಓದಿ: ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧಿ ಹುತಾತ್ಮರಾಗಿಲ್ಲ ಅದೊಂದು ಅಪಘಾತವಷ್ಟೇ ಎಂದ ಬಿಜೆಪಿ ಸಚಿವ

ಎಸ್​ಬಿಐ ಮತ್ತು ಎಲ್​ಐಸಿಯಲ್ಲಿರುವ ಬಹಳಷ್ಟು ಸಾರ್ವಜನಿಕರ ಹಣವು ಅದಾನಿ ಗ್ರೂಪ್​ಗಳಲ್ಲಿ ಹೂಡಿಕೆಯಾಗಿದೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೋಟ್ಯಂತರ ಜನರ ಹಣವು ಎಲ್​ಐಸಿ ಮತ್ತು ಎಸ್​ಬಿಐನಂತರ ಸಂಸ್ಥೆಗಳ ಮೂಲಕ ಕೆಲ ಆಯ್ದ ಕಂಪನಿಗಳಿಗೆ ಸಂದಾಯವಾಗಿದೆ. ಈ ಕಂಪನಿ (ಅದಾನಿ ಎಂಟರ್ಪ್ರೈಸಸ್) ಬಗ್ಗೆ ಹಿಂಡನ್ಬರ್ಗ್ ರೀಸರ್ಚ್ ವರದಿಯಲ್ಲಿ ಎತ್ತಿತೋರಿಸಲಾಗಿದೆ. ಅದಾದ ಬಳಿಕ ಆ ಕಂಪನಿಯ ಷೇರುಗಳು ಬಿದ್ದಿವೆ. ಈ ಕಂಪನಿಯ ಮಾಲೀಕ ಯಾರು ಎಂದು ನಿಮಗೆ ಗೊತ್ತು. ಇಂಥ ಕಂಪನಿಗಳಿಗೆ ಸರ್ಕಾರ ಯಾಕೆ ಹಣ ಕೊಡುತ್ತಿದೆ? ಎಲ್​ಐಸಿ, ಎಸ್​ಬಿಐ ಮೊದಲಾದ ಸಂಸ್ಥೆಗಳು ಈ ಕಂಪನಿಗೆ ಹಣ ಕೊಟ್ಟಿವೆ. ಇದರ ತನಿಖೆ ಆಗಬೇಕು. ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ಆಗಬೇಕು ಅಥವಾ ಭಾರತೀಯ ಮುಖ್ಯ ನ್ಯಾಯಮೂರ್ತಿ ಮಾರ್ಗದರ್ಶನದಲ್ಲಿ ಸಮಿತಿ ರಚನೆಯಾಗಿ ಅದರಿಂದಲಾದರೂ ತನಿಖೆ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.

ಬ್ಯಾಂಕ್​ಗಳಿಂದ ವಿವರ ಕೋರಿದ ಆರ್​ಬಿಐ

ಅದಾನಿ ಗ್ರೂಪ್​ನ ವಿವಿಧ ಕಂಪನಿಗಳಿಗೆ ಯಾವ್ಯಾವ ಬ್ಯಾಂಕುಗಳು ಸಾಲ ನೀಡಿವೆ ಎಂದು ಆರ್​ಬಿಐ ಮಾಹಿತಿ ಕಲೆಹಾಕುತ್ತಿದೆ. ಈ ಸಂಬಂಧ ಸ್ಥಳೀಯ ಬ್ಯಾಂಕುಗಳಿಂದ ಆರ್​ಬಿಐ ವಿವರ ಕೋರುತ್ತಿದೆ.

ಇದನ್ನೂ ಓದಿ: Share Market: ಭಾರತದ ಷೇರುಪೇಟೆ ಗುರುವಾರವೂ ಕುಸಿತ; ಅದಾನಿ ಷೇರು ಇನ್ನಷ್ಟು ಇಳಿಕೆ

ಕ್ರೆಡಿಟ್ ಸ್ಯೂಸ್, ಸಿಟಿ ಗ್ರೂಪ್ ಕಂಪನಿಗಳು ಅದಾನಿ ಗ್ರೂಪ್​ನಿಂದ ಬಾಂಡ್​ಗಳನ್ನು ಅಡವಾಗಿ ಪಡೆದು ಸಾಲ ನೀಡುವುದನ್ನು ನಿಲ್ಲಿಸಿವೆ. ಈ ಬೆಳವಣಿಗೆಯಿಂದಾಗಿ ಆರ್​ಬಿಐ ಅನಿವಾರ್ಯವಾಗಿ ಕ್ರಮ ಕೈಗೊಳ್ಳಲು ಮುಂದಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಆರ್​ಬಿಐನಿಂದ ಈ ಬಗ್ಗೆ ಮಾಧ್ಯಮಗಳಿಗೆ ಅಧಿಕೃತವಾಗಿ ಪ್ರತಿಕ್ರಿಯೆ ಸಿಕ್ಕಿಲ್ಲ.

ನಿನ್ನೆ ಅದಾನಿ ಎಂಟರ್ಪ್ರೈಸಸ್ ಸಂಸ್ಥೆ ತನ್ನ ಎಫ್​ಪಿಒ ಯೋಜನೆಯನ್ನು ರದ್ದು ಮಾಡಿತ್ತು. ಎಫ್​ಪಿಒದಲ್ಲಿ ಭರ್ತಿ ಹೂಡಿಕೆಯಾಗಿದ್ದ 20 ಸಾವಿರ ಕೋಟಿ ರೂ ಹಣವನ್ನು ಜನರಿಗೆ ಮರಳಿಸಲೂ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಅದಾನಿ ಗ್ರೂಪ್​ನ ಕಂಪನಿಗಳ ಷೇರುಗಳು ಕುಸಿಯುವುದು ಮುಂದುವರಿದಿದೆ. ಹಿಂಡನ್ಬರ್ಗ್ ರಿಸರ್ಚ್​ನ ವರದಿ ಬಿಡುಗಡೆ ಆದ ಬಳಿಕ ಅದಾನಿ ಕಂಪನಿಗಳ ಷೇರುಗಳು ಪ್ರಪಾತಕ್ಕೆ ಧುಮುಕುತ್ತಿವೆ. ಕ್ಷಿಪ್ರಗತಿಯಲ್ಲಿ ಬೆಳವಣಿಗೆ ಕಂಡ ಅದಾನಿ ಗ್ರೂಪ್​ನ ಕಂಪನಿಗಳಲ್ಲಿ ದೊಡ್ಡ ರಿಟರ್ನ್ಸ್ ನಿರೀಕ್ಷೆಯಲ್ಲಿ ಹಣ ಹೂಡಿಕೆ ಮಾಡಿದ್ದವರು ಈಗ ಆತಂಕಗೊಂಡಿದ್ದಾರೆ.

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ