Adani Group: ಫೆ.10 ರಂದು ಸುಪ್ರೀಂನಲ್ಲಿ ಅದಾನಿ ಸಂಸ್ಥೆಗಳ ವಿರುದ್ಧದ ಹಿಂಡನ್‌ಬರ್ಗ್ ವರದಿಯ ತನಿಖೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ

ಅದಾನಿ ಸಂಸ್ಥೆಗಳ ಮೇಲಿನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಫೆ.10 ರಂದು ವಿಚಾರಣೆ ಮಾಡಲು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ.

Adani Group: ಫೆ.10 ರಂದು ಸುಪ್ರೀಂನಲ್ಲಿ ಅದಾನಿ ಸಂಸ್ಥೆಗಳ ವಿರುದ್ಧದ ಹಿಂಡನ್‌ಬರ್ಗ್ ವರದಿಯ ತನಿಖೆ ಕೋರಿ ಸಲ್ಲಿಸಲಾದ ಅರ್ಜಿ ವಿಚಾರಣೆ
ಸುಪ್ರೀಂಕೋರ್ಟ್​
Follow us
|

Updated on:Feb 09, 2023 | 12:02 PM

ಅದಾನಿ ಸಂಸ್ಥೆಗಳ ಮೇಲಿನ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಸಲ್ಲಿಸಿರುವ ಮನವಿಯನ್ನು ಫೆ.10 ರಂದು ವಿಚಾರಣೆ ಮಾಡಲು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದೆ.

ಅರ್ಜಿ ಸಲ್ಲಿಸಿರುವ ವಕೀಲ ವಿಶಾಲ್ ತಿವಾರಿ ಅವರು ಗುರುವಾರ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ನೇತೃತ್ವದ ಪೀಠದ ಮುಂದೆ ತುತ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು. ಹಿಂಡೆನ್​ಬರ್ಗ್​ ಕಳೆದ ವಾರ ಅದಾನಿ ಗ್ರೂಪ್ ವಿರುದ್ಧ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಅದಾನಿ ಸಮೂಹ ಸಂಸ್ಥೆಗಳ ವಿರುದ್ಧ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯ ಬಗ್ಗೆ ಆರೋಪ ಮಾಡಿದೆ.

ಹಿಂಡೆನ್​ಬರ್ಗ್​ ವರದಿಯ ಬಗ್ಗೆ ಅದಾನಿ ಗ್ರೂಪ್ ಬಿಡುಗಡೆಗೊಳಿಸಿರುವ 413 ಪುಟಗಳ ಪ್ರತಿಕ್ರಿಯೆಗೆ ಹಿಂಡೆನ್​ಬರ್ಗ್ ಪ್ರತ್ಯುತ್ತರ ನೀಡಿದ್ದು, ಅದಾನಿ ಗ್ರೂಪ್ ಜಂಬದ ಪ್ರತಿಕ್ರಿಯೆ ನೀಡುವ ಮೂಲಕ ನಾವು ಎತ್ತಿರುವ ಪ್ರಮುಖ ಆರೋಪಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದೆ. ಅದಾನಿ ಗ್ರೂಪ್ ನಿರೀಕ್ಷೆಯಂತೆ ಪ್ರಮುಖ ವಿಷಯವನ್ನು ಮರೆಮಾಚಲು ರಾಷ್ಟ್ರೀಯವಾದವನ್ನು ಮುಂಚೂಣಿಗೆ ತಂದಿದೆ ಎಂದಿದೆ.

ಹಿಂಡೆನ್​ಬರ್ಗ್​ ವರದಿ ಏನು?

ಅಮೆರಿಕದ ಶಾರ್ಟ್‌ ಸೆಲ್ಲರ್‌ ಸಂಸ್ಥೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಅದಾನಿ ಸಮೂಹದ ವಿರುದ್ಧ ವರದಿ ಬಿಡುಗಡೆ ಮಾಡಿತ್ತು. ಇದರ ನಂತರ ಅದಾನಿ ಗ್ರೂಪ್‌ ಷೇರುಗಳು ತೀವ್ರ ಕುಸಿತ ಕಂಡಿವೆ. ಈ ವರದಿಯಿಂದಾಗಿ ಭಾರತ ಮತ್ತು ಏಷ್ಯಾದ ಅತಿದೊಡ್ಡ ಉದ್ಯಮಿ ಗೌತಮ್ ಅದಾನಿ ಸಂಪತ್ತು ಸುಮಾರು 4 ಲಕ್ಷ ಕೋಟಿ ರೂ. ಕರಗಿದೆ. ಅದಾನಿ ಗ್ರೂಪ್‌ನಲ್ಲಿ ಎಲ್ಲವೂ ಸರಿಯಾಗಿಲ್ಲ ಎಂದು ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿ ಹೇಳಿದೆ. ಈ ಗ್ರೂಪ್‌ ದಶಕಗಳಿಂದ ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಖಾತೆ ವಂಚನೆಯಲ್ಲಿ ತೊಡಗಿಸಿಕೊಂಡಿದೆ ಎಂದು ಆರೋಪಿಸಿದೆ.

ಅದಾನಿ ಅವರ ನಿವ್ವಳ ಮೌಲ್ಯ 92 ಬಿಲಿಯನ್‌ಗೆ ಇಳಿದಿದೆ. ಈ ಮೂಲಕ ಅದಾನಿ ಅವರು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದ್ದಾರೆ. ಈ ವಿಚಾರದಲ್ಲಿ ಅದಾನಿ ಗ್ರೂಪ್ ಹಿಂಡೆನ್‌ಬರ್ಗ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ಹಿಂಡೆನ್‌ಬರ್ಗ್ ತನ್ನ ವರದಿಯಲ್ಲಿ ಅದಾನಿ ಗ್ರೂಪ್‌ ಕುರಿತು 88 ನೇರ ಪ್ರಶ್ನೆಗಳನ್ನು ಕೇಳಿತ್ತು. ಆದರೆ, ಈ ಪ್ರಶ್ನೆಗಳಿಗೆ ಅದಾನಿ ಗ್ರೂಪ್ ಯಾವುದೇ ಸ್ಪಷ್ಟನೆ ನೀಡಿಲ್ಲ ಎಂದು ಹಿಂಡೆನ್‌ಬರ್ಗ್ ಹೇಳಿಕೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:49 am, Thu, 9 February 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ