AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಹಿಂಡೆನ್‌ಬರ್ಗ್ ವರದಿ ಕುರಿತು ತನಿಖೆಗೆ ಸುಪ್ರೀಂ ಆದೇಶ: ನಿವೃತ್ತ ನ್ಯಾ.ಎ.ಎಂ.ಸಪ್ರೆ ನೇತೃತ್ವದ ತಜ್ಞರ ಸಮಿತಿ ರಚನೆ

ಗೌತಮ್ ಅದಾನಿ (Gautham Adani) ವಿರುದ್ಧ ಬಿಡುಗಡೆ ಮಾಡಲಾಗಿದ್ದ ಹಿಂಡೆನ್‌ಬರ್ಗ್ ವರದಿಯ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಜೊತೆಗೆ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.  ಈ ತನಿಖೆ ಸಮಿತಿಯ ನೇತೃತ್ವವನ್ನು  ನಿವೃತ್ತ ನ್ಯಾಯಾಧೀಶ ಎ.ಎಮ್ ಸಪ್ರೆ  ವಹಿಸಲಿದ್ದಾರೆ ಎಂದು ಸುಪ್ರೀಂ ಹೇಳಿದೆ.

Adani Row: ಹಿಂಡೆನ್‌ಬರ್ಗ್ ವರದಿ ಕುರಿತು ತನಿಖೆಗೆ ಸುಪ್ರೀಂ ಆದೇಶ: ನಿವೃತ್ತ ನ್ಯಾ.ಎ.ಎಂ.ಸಪ್ರೆ ನೇತೃತ್ವದ ತಜ್ಞರ ಸಮಿತಿ ರಚನೆ
ಗೌತಮ್ ಅದಾನಿ
ಅಕ್ಷಯ್​ ಪಲ್ಲಮಜಲು​​
|

Updated on:Mar 02, 2023 | 11:32 AM

Share

ದೆಹಲಿ: ಗೌತಮ್ ಅದಾನಿ (Gautham Adani) ವಿರುದ್ಧ ಬಿಡುಗಡೆ ಮಾಡಲಾಗಿದ್ದ ಹಿಂಡೆನ್‌ಬರ್ಗ್ ವರದಿಯ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಜೊತೆಗೆ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.  ಈ ತನಿಖೆ ಸಮಿತಿಯ ನೇತೃತ್ವವನ್ನು  ನಿವೃತ್ತ ನ್ಯಾಯಾಧೀಶ ಎ.ಎಮ್ ಸಪ್ರೆ  ವಹಿಸಲಿದ್ದಾರೆ ಎಂದು ಸುಪ್ರೀಂ ಹೇಳಿದೆ. ನಿವೃತ್ತ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ನೇತೃತ್ವದ ಸಮಿತಿಯು ಹಿರಿಯ ಬ್ಯಾಂಕರ್‌ಗಳಾದ ಕೆವಿ ಕಾಮತ್ ಮತ್ತು ಒಪಿ ಭಟ್, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ, ಒಪಿ ಭಟ್ ಮತ್ತು ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್ ಅವರನ್ನು ಒಳಗೊಂಡಿರುತ್ತದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಈ ಸಮಿತಿಯು ತನಿಖೆಯ ವರದಿಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು ಮತ್ತು ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು. ತಜ್ಞರ ಸಮಿತಿಯು ಕಾನೂನು ಚೌಕಟ್ಟುಗಳನ್ನು ಬಲಪಡಿಸುವ ಕ್ರಮಗಳನ್ನು ಸೂಚಿಸುತ್ತದೆ, ಅದಾನಿ ಸಾಲದ ಬಗ್ಗೆಯು ಕೂಡ ತನಿಖೆ ಮಾಡುತ್ತದೆ ಮತ್ತು ಶಾಸನಬದ್ಧ ಚೌಕಟ್ಟಯೊಳಗೆ ಕ್ರಮಗಳನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Adani Row: ಅದಾನಿಯಿಂದ ಭಾರತದ ಹೂಡಿಕೆಗೆ ಘಾಸಿ ಎಂದಿದ್ದ ಜಾರ್ಜ್​ ಸೊರಸ್​ಗೆ ಖಡಕ್ ಉತ್ತರ ಕೊಟ್ಟ ಸಚಿವೆ ಸ್ಮೃತಿ ಇರಾನಿ

ಹೂಡಿಕೆದಾರರನ್ನು ರಕ್ಷಿಸಲು ನಿಯಂತ್ರಕ ಕಾರ್ಯವಿಧಾನಗಳನ್ನು ಕೇಳುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನಿಯಮಗಳ ಉಲ್ಲಂಘನೆಯಾಗಿದೆಯೇ ಮತ್ತು ಷೇರುಗಳ ಬೆಲೆಯಲ್ಲಿ ಯಾವುದೇ ಮೋಸ ನಡೆದಿದೆಯೇ ಎಂದು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೆಬಿಗೆ ಸೂಚಿಸಿದೆ.

Published On - 11:01 am, Thu, 2 March 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!