AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’

ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು ಎಂದು ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಹೇಳಿದರು.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’
ಕೋವಿಶೀಲ್ಡ್​ ಲಸಿಕೆ (ಎಡ); ಅದಾರ್​ ಪೂನಾವಾಲ (ಬಲ)
guruganesh bhat
|

Updated on:Nov 28, 2020 | 8:50 PM

Share

ಪುಣೆ: ಮುಂದಿನ 2 ವಾರಗಳಲ್ಲಿ ಕೋವಿಶೀಲ್ಡ್​ ಲಸಿಕೆಯ ತುರ್ತು ಬಳಕೆಗಾಗಿ ಜನರಿಗೆ ಲಭ್ಯವಾಗಲು ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಕಾರ್ಯೋನ್ಮುಖವಾಗಿದೆ ಎಂದು ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಪೂನಾವಾಲಾ ಈ ವಿಷಯ ತಿಳಿಸಿದರು. ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು. ಕೇಂದ್ರ ಸರ್ಕಾರ ಎಷ್ಟು ಲಸಿಕೆಗಳನ್ನು ಖರೀದಿಸಲಿದೆ ಎಂಬ ಮಾಹಿತಿ ಅಧಿಕೃತವಾಗಿ ದೊರೆತಿಲ್ಲ. ಆದರೆ, 2021ರ ಜುಲೈ ಹೊತ್ತಿಗೆ 300ರಿಂದ 400ಮಿಲಿಯನ್ ಡೋಸೇಜ್​​​ಗಳನ್ನು ಕೇಂದ್ರ ಸರ್ಕಾರ ಖರೀದಿಸಬಹುದು ಎಂದು ಅದಾರ್​ ತಿಳಿಸಿದರು.

‘ದೇಶದ ಜನರಿಗೆ ಮೊದಲ ಆದ್ಯತೆ’ ಲಸಿಕೆಯನ್ನು ಮೊದಲು ದೇಶದ ಜನತೆಗಾಗಿ ಬಳಸಲಾಗುವುದು. ನಂತರ, ಆಫ್ರಿಕಾದ ದೇಶಗಳಿಗೆ ವಿತರಿಸಲಾಗುವುದು. ಅಮೆರಿಕ ಮತ್ತು ಯೂರೋಪ್​ನ ದೇಶಗಳಿಗೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್​ಫರ್ಡ್ ವಿವಿಯ ಲಸಿಕೆ ಲಭಿಸಲಿದೆ. ಪುಣೆ ಮತ್ತು ಮಾಂಡ್ರಿಯಲ್ಲಿ ಅತ್ಯಾಧುನಿಕ ಸಾಂಕ್ರಾಮಿಕ ಪಿಡುಗು ನಿರ್ವಹಣಾ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಕುರಿತು ಪ್ರಧಾನಿಯವರಿಗೆ ವಿವರಿಸಿದ್ದೇವೆ ಎಂದು ಅವರು ತಿಳಿಸಿದರು.

Published On - 8:36 pm, Sat, 28 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ