AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆ ಬಾಬತ್ತಿನಲ್ಲಿ APAC ರಾಷ್ಟ್ರಗಳಿಗೆ ADB ಸಂಸ್ಥೆಯಿಂದ 9 ಶತಕೋಟಿ ಡಾಲರ್ ಯೋಜನೆ ಜಾರಿ

ಏಷ್ಯಾ ಪೆಸಿಫಿಕ್ ವ್ಯಾಕ್ಸಿನ್ ಆ್ಯಕ್ಸೆಸ್ ಫೆಸಿಲಿಟಿ (ಎಪಿವಿಎಕ್ಸ್) ಎಂದು ಕರೆಯಲ್ಪಡುವ ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ರಾಷ್ಟ್ರಗಳು ಕೊರೊನಾ ಲಸಿಕೆ ಪಡೆಯಲು ವಂಚಿತರಾಗದಂತೆ ಗಮನಹರಿಸಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಕೊರೊನಾ ಲಸಿಕೆ ಬಾಬತ್ತಿನಲ್ಲಿ APAC ರಾಷ್ಟ್ರಗಳಿಗೆ ADB ಸಂಸ್ಥೆಯಿಂದ 9 ಶತಕೋಟಿ ಡಾಲರ್ ಯೋಜನೆ ಜಾರಿ
ಏಷ್ಯನ್ ಡೆವೆಲಪ್ಮೆಂಟ್ ಬ್ಯಾಂಕ್
sandhya thejappa
| Edited By: |

Updated on: Dec 12, 2020 | 10:37 AM

Share

ದೆಹಲಿ: ಎಪಿಎಸಿ ( ಏಷ್ಯಾ ಪೆಸಿಫಿಕ್ ಮತ್ತು ಆಸ್ಟ್ರೇಲಿಯಾ ಖಂಡ) ಯ ದೇಶಗಳಿಗೆ ಕೊರೊನಾ ಲಸಿಕೆಗಳ ಪೂರೈಕೆಗೆ ನೆರವಾಗುವ ನಿಟ್ಟಿನಲ್ಲಿ ಏಷ್ಯನ್ ಡೆವೆಲಪ್ಮೆಂಟ್ ಬ್ಯಾಂಕ್ 9 ಬಿಲಿಯನ್ ಡಾಲರ್ ಮೊತ್ತದ ಯೋಜನೆಯನ್ನು ಜಾರಿಗೆ ತಂದಿದೆ.

ಏಷ್ಯಾ ಪೆಸಿಫಿಕ್ ವ್ಯಾಕ್ಸಿನ್ ಆ್ಯಕ್ಸೆಸ್ ಫೆಸಿಲಿಟಿ (ಎಪಿವಿಎಕ್ಸ್) ಎಂದು ಕರೆಯಲ್ಪಡುವ ಈ ಯೋಜನೆಯು ಆರ್ಥಿಕವಾಗಿ ಹಿಂದುಳಿದಿರುವ ರಾಷ್ಟ್ರಗಳು ಕೊರೊನಾ ಲಸಿಕೆ ಪಡೆಯಲು ವಂಚಿತವಾಗದಂತೆ ಗಮನಹರಿಸಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಏಷ್ಯಾ ಪೆಸಿಫಿಕ್ ಪ್ರಾಂತ್ಯದಲ್ಲಿ ಸುಮಾರು 14.3 ಮಿಲಿಯನ್ ಪ್ರಕರಣಗಳು ದಾಖಲಾಗಿದೆ. ಅಲ್ಲದೇ 2,00,000 ಕ್ಕೂ ಹೆಚ್ಚು ಸೋಂಕಿತರು ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಇದರಿಂದ ಕೊರೊನಾ ಲಸಿಕೆ ಪೂರೈಕೆಗೆ ಆರ್ಥಿಕ ಪರಿಸ್ಥಿತಿ ಎದುರಾಗದಂತೆ ನಿಗಾ ವಹಿಸಲಾಗಿದೆ ಎಂದು ಎಡಿಬಿ ಅಧ್ಯಕ್ಷ ಮಸಾತ್ಸುಗಾ ಅಸಾಕಾವಾ ಅಭಿಪ್ರಾಯಪಟ್ಟರು.

ಜನರಿಗೆ ಆದಷ್ಟು ಬೇಗ ಲಸಿಕೆ ಹಾಕಲು ತಯಾರಿ ನಡೆಸುತ್ತಿರುವುದರಿಂದ, ಲಸಿಕೆಗಳನ್ನು ಸಂಗ್ರಹಿಸಲು ಹಣಕಾಸಿನ ಅಗತ್ಯವಿರುತ್ತದೆ ಮತ್ತು ಲಸಿಕೆ ಪ್ರಕ್ರಿಯೆಯನ್ನು ಸುರಕ್ಷಿತವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸಲು ಈ ಯೋಜನೆಯಡಿ  ಸಾಧ್ಯವಾಗುತ್ತದೆ ಎಂದರು.

ಪಂಜಾಬ್​ನಲ್ಲಿ ನಿಲ್ಲದ ಕೊರೊನಾ ಹಾವಳಿ; ಹೊಸ ವರ್ಷದವರೆಗೆ ರಾತ್ರಿ ಕರ್ಫ್ಯೂ ವಿಸ್ತರಣೆ

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!