AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sengol: ಪ್ರಧಾನಿ ನರೇಂದ್ರ ಮೋದಿಗೆ ‘ಸೆಂಗೋಲ್’ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ

ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಐತಿಹಾಸಿಕ ಮತ್ತು ಪವಿತ್ರವಾದ ಸೆಂಗೋಲ್ ಸ್ಥಾಪಿಸಲಿದ್ದಾರೆ.

Sengol: ಪ್ರಧಾನಿ ನರೇಂದ್ರ ಮೋದಿಗೆ 'ಸೆಂಗೋಲ್' ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ
ಮೋದಿಗೆ ಸೆಂಗೋಲ್ ಹಸ್ತಾಂತರ
ರಶ್ಮಿ ಕಲ್ಲಕಟ್ಟ
|

Updated on:May 27, 2023 | 8:47 PM

Share

ಹೊಸ ಸಂಸತ್ ಭವನದ ಉದ್ಘಾಟನೆಯ ಮುನ್ನಾದಿನ (ಶನಿವಾರ )ಅಧೀನಂ ಪೀಠಾಧಿಪತಿ ಪವಿತ್ರ ರಾಜದಂಡ ಸೆಂಗೋಲ್ (Sengol) ಅನ್ನು ಪ್ರಧಾನಿ ನರೇಂದ್ರ ಮೋದಿ (Narendera Modi) ಅವರಿಗೆ ಹಸ್ತಾಂತರಿಸಿದರು. ಅಧೀನರು ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆಯನ್ನೂ ನೀಡಿದ್ದಾರೆ. ಇಂದು ರಾಷ್ಟ್ರ ರಾಜಧಾನಿಗೆ ತಲುಪಿದ ಅಧೀನರನ್ನು ಪ್ರಧಾನಿ ಮೋದಿ ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಅಧೀನರ ಆಶೀರ್ವಾದ ಪಡೆದರು. ಇದಕ್ಕೂ ಮುನ್ನ ಧರ್ಮಪುರಂ ಮತ್ತು ತಿರುವವಾಡುತುರೈನ ಅಧೀನರು ದೆಹಲಿಗೆ ಆಗಮಿಸಿದ್ದಾರೆ.

ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಐತಿಹಾಸಿಕ ಮತ್ತು ಪವಿತ್ರವಾದ ಸೆಂಗೋಲ್ ಸ್ಥಾಪಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು 21 ಅಧೀನರು ಈ ಹಿಂದೆ ಚೆನ್ನೈನಿಂದ ದೆಹಲಿಗೆ ತೆರಳಿದ್ದರು.

ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈನಿಂದ ದೆಹಲಿಗೆ ತೆರಳಿದ ಅಧೀನಂಗಳಲ್ಲಿ ಧರ್ಮಪುರಂ ಅಧೀನಂ, ಪಳನಿ ಅಧೀನಂ, ವಿರುಧಾಚಲಂ ಅಧೀನಂ ಮತ್ತು ತಿರುಕೋಯಿಲೂರ್ ಅಧೀನಂ ಸೇರಿದ್ದಾರೆ.

ಪವಿತ್ರ ರಾಜದಂಡ ಸೆಂಗೋಲ್ ಬ್ರಿಟಿಷರಿಂದ ಭಾರತಕ್ಕೆ ಅಧಿಕಾರ ಹಸ್ತಾಂತರದ ಸಂಕೇತವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ಐತಿಹಾಸಿಕ ‘ಸೆಂಗೋಲ್’ ಸ್ಥಾಪಿಸಲು ಸಂಸತ್ ಭವನ ಅತ್ಯಂತ ಸೂಕ್ತ ಮತ್ತು ಪವಿತ್ರ ಸ್ಥಳವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ಐತಿಹಾಸಿಕ ನಾಡು ಬಾಗಲಕೋಟೆ ಜಿಲ್ಲೆಗೆ ವ್ಯಾಪಿಸಿದ ಸೆಂಗೋಲ್​ ನಂಟು: ವಿರುಪಾಕ್ಷ ದೇವಾಲಯದಲ್ಲಿ ರಾಜದಂಡ ಕಲಾಕೃತಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ರಾಷ್ಟ್ರೀಯ ಚಿಹ್ನೆಯಾಗಿ ಸೆಂಗೋಲ್ ಅನ್ನು ಅಳವಡಿಸಿಕೊಳ್ಳುವ ನಿರ್ಧಾರವನ್ನು ಪ್ರಧಾನಿ ಮೋದಿ ತೆಗೆದುಕೊಂಡರು. ನ್ಯಾಯದ ಸಂಕೇತವಾದ ‘ಸೆಂಗೋಲ್’ ಪ್ರತಿಷ್ಠಾಪನೆ ಕುರಿತು ಶುಕ್ರವಾರ ಮಾತನಾಡಿದ ತಿರುವವಡುತುರೈ ಆಧೀನಂನ ಅಂಬಲವನ ದೇಸಿಗ ಪರಮಾಚಾರ್ಯ ಸ್ವಾಮಿಗಳು, ಸೆಂಗೋಲ್‌ಗೆ ಮಹತ್ವ ನೀಡುತ್ತಿರುವುದು ತಮಿಳುನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sat, 27 May 23

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!