AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sengol: ಪ್ರಧಾನಿ ನರೇಂದ್ರ ಮೋದಿಗೆ ‘ಸೆಂಗೋಲ್’ ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ

ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಐತಿಹಾಸಿಕ ಮತ್ತು ಪವಿತ್ರವಾದ ಸೆಂಗೋಲ್ ಸ್ಥಾಪಿಸಲಿದ್ದಾರೆ.

Sengol: ಪ್ರಧಾನಿ ನರೇಂದ್ರ ಮೋದಿಗೆ 'ಸೆಂಗೋಲ್' ಹಸ್ತಾಂತರಿಸಿದ ಅಧೀನಂ ಪೀಠಾಧಿಪತಿ
ಮೋದಿಗೆ ಸೆಂಗೋಲ್ ಹಸ್ತಾಂತರ
ರಶ್ಮಿ ಕಲ್ಲಕಟ್ಟ
|

Updated on:May 27, 2023 | 8:47 PM

Share

ಹೊಸ ಸಂಸತ್ ಭವನದ ಉದ್ಘಾಟನೆಯ ಮುನ್ನಾದಿನ (ಶನಿವಾರ )ಅಧೀನಂ ಪೀಠಾಧಿಪತಿ ಪವಿತ್ರ ರಾಜದಂಡ ಸೆಂಗೋಲ್ (Sengol) ಅನ್ನು ಪ್ರಧಾನಿ ನರೇಂದ್ರ ಮೋದಿ (Narendera Modi) ಅವರಿಗೆ ಹಸ್ತಾಂತರಿಸಿದರು. ಅಧೀನರು ಪ್ರಧಾನಿ ಮೋದಿಗೆ ವಿಶೇಷ ಉಡುಗೊರೆಯನ್ನೂ ನೀಡಿದ್ದಾರೆ. ಇಂದು ರಾಷ್ಟ್ರ ರಾಜಧಾನಿಗೆ ತಲುಪಿದ ಅಧೀನರನ್ನು ಪ್ರಧಾನಿ ಮೋದಿ ಅವರ ನಿವಾಸದಲ್ಲಿ ಭೇಟಿ ಮಾಡಿದ್ದು, ಅಧೀನರ ಆಶೀರ್ವಾದ ಪಡೆದರು. ಇದಕ್ಕೂ ಮುನ್ನ ಧರ್ಮಪುರಂ ಮತ್ತು ತಿರುವವಾಡುತುರೈನ ಅಧೀನರು ದೆಹಲಿಗೆ ಆಗಮಿಸಿದ್ದಾರೆ.

ಭಾನುವಾರ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ ಭವನದಲ್ಲಿ ಐತಿಹಾಸಿಕ ಮತ್ತು ಪವಿತ್ರವಾದ ಸೆಂಗೋಲ್ ಸ್ಥಾಪಿಸಲಿದ್ದಾರೆ. ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು 21 ಅಧೀನರು ಈ ಹಿಂದೆ ಚೆನ್ನೈನಿಂದ ದೆಹಲಿಗೆ ತೆರಳಿದ್ದರು.

ಸಮಾರಂಭದಲ್ಲಿ ಪಾಲ್ಗೊಳ್ಳಲು ಚೆನ್ನೈನಿಂದ ದೆಹಲಿಗೆ ತೆರಳಿದ ಅಧೀನಂಗಳಲ್ಲಿ ಧರ್ಮಪುರಂ ಅಧೀನಂ, ಪಳನಿ ಅಧೀನಂ, ವಿರುಧಾಚಲಂ ಅಧೀನಂ ಮತ್ತು ತಿರುಕೋಯಿಲೂರ್ ಅಧೀನಂ ಸೇರಿದ್ದಾರೆ.

ಪವಿತ್ರ ರಾಜದಂಡ ಸೆಂಗೋಲ್ ಬ್ರಿಟಿಷರಿಂದ ಭಾರತಕ್ಕೆ ಅಧಿಕಾರ ಹಸ್ತಾಂತರದ ಸಂಕೇತವಾಗಿದೆ ಎಂದು ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ. ಐತಿಹಾಸಿಕ ‘ಸೆಂಗೋಲ್’ ಸ್ಥಾಪಿಸಲು ಸಂಸತ್ ಭವನ ಅತ್ಯಂತ ಸೂಕ್ತ ಮತ್ತು ಪವಿತ್ರ ಸ್ಥಳವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:  ಐತಿಹಾಸಿಕ ನಾಡು ಬಾಗಲಕೋಟೆ ಜಿಲ್ಲೆಗೆ ವ್ಯಾಪಿಸಿದ ಸೆಂಗೋಲ್​ ನಂಟು: ವಿರುಪಾಕ್ಷ ದೇವಾಲಯದಲ್ಲಿ ರಾಜದಂಡ ಕಲಾಕೃತಿ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ರಾಷ್ಟ್ರೀಯ ಚಿಹ್ನೆಯಾಗಿ ಸೆಂಗೋಲ್ ಅನ್ನು ಅಳವಡಿಸಿಕೊಳ್ಳುವ ನಿರ್ಧಾರವನ್ನು ಪ್ರಧಾನಿ ಮೋದಿ ತೆಗೆದುಕೊಂಡರು. ನ್ಯಾಯದ ಸಂಕೇತವಾದ ‘ಸೆಂಗೋಲ್’ ಪ್ರತಿಷ್ಠಾಪನೆ ಕುರಿತು ಶುಕ್ರವಾರ ಮಾತನಾಡಿದ ತಿರುವವಡುತುರೈ ಆಧೀನಂನ ಅಂಬಲವನ ದೇಸಿಗ ಪರಮಾಚಾರ್ಯ ಸ್ವಾಮಿಗಳು, ಸೆಂಗೋಲ್‌ಗೆ ಮಹತ್ವ ನೀಡುತ್ತಿರುವುದು ತಮಿಳುನಾಡಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:43 pm, Sat, 27 May 23

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ