AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನ್ ಮಿಷನ್: ಇಂದು ಮೊದಲ ಕಕ್ಷೆ ಬದಲಿಸಲಿದೆ ಆದಿತ್ಯ ಎಲ್​1

ಇಸ್ರೋ(Isro)ದ ಸನ್ ಮಿಷನ್ ಆದಿತ್ಯ ಎಲ್​1 ತನ್ನ ಮೊದಲ ಕಕ್ಷೆಯನ್ನು ಬದಲಾಯಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಬೆಳಗ್ಗೆ 11.45ರ ಸುಮಾರಿಗೆ ಮೊದಲ ಪಿಎಸ್​ಎಲ್​ವಿ ವಾಹನದಿಂದ ಬೇರ್ಪಟ್ಟು ಚಂದ್ರನೆಡೆಗೆ ಚಲಿಸಿದೆ. ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ ಚಂದ್ರಯಾನ 3 ಅನ್ನು ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಸಿದ ಒಂದು ವಾರ ಬಳಿಕ ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್​1 ಮಿಷನ್ ಉಡಾವಣೆ ಮಾಡಿದೆ.

ಸನ್ ಮಿಷನ್: ಇಂದು ಮೊದಲ ಕಕ್ಷೆ ಬದಲಿಸಲಿದೆ ಆದಿತ್ಯ ಎಲ್​1
ಆದಿತ್ಯ ಎಲ್​1
ನಯನಾ ರಾಜೀವ್
|

Updated on:Sep 03, 2023 | 10:11 AM

Share

ಇಸ್ರೋ(Isro)ದ ಸನ್ ಮಿಷನ್ ಆದಿತ್ಯ ಎಲ್​1 ತನ್ನ ಮೊದಲ ಕಕ್ಷೆಯನ್ನು ಬದಲಾಯಿಸಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಭಾನುವಾರ ಬೆಳಗ್ಗೆ 11.45ರ ಸುಮಾರಿಗೆ ಮೊದಲ ಪಿಎಸ್​ಎಲ್​ವಿ ವಾಹನದಿಂದ ಬೇರ್ಪಟ್ಟು ಚಂದ್ರನೆಡೆಗೆ ಚಲಿಸಿದೆ. ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ ಚಂದ್ರಯಾನ 3 ಅನ್ನು ಚಂದ್ರನ ಮೇಲೆ ಯಶಸ್ವಿಯಾಗಿ ಇಳಿಸಿದ ಒಂದು ವಾರ ಬಳಿಕ ಸೂರ್ಯನ ಅಧ್ಯಯನಕ್ಕಾಗಿ ಆದಿತ್ಯ ಎಲ್​1 ಮಿಷನ್ ಉಡಾವಣೆ ಮಾಡಿದೆ.

ಬಾಹ್ಯಾಕಾಶ ನೌಕೆಯು ಸುಮಾರು 125 ದಿನಗಳ ಕಾಲ ಪ್ರಯಾಣಿಸುವ ನಿರೀಕ್ಷೆಯಿದೆ, ಇದು ಸೂರ್ಯನಿಗೆ ಹತ್ತಿರವಿರುವ ಲಾಗ್ರಾಂಜಿಯನ್ ಪಾಯಿಂಟ್ L1 ಸುತ್ತ ಹಾಲೋ ಕಕ್ಷೆಯನ್ನು ತಲುಪುತ್ತದೆ. ಆದಿತ್ಯ L-1 ಭೂಮಿಯ ಸುತ್ತ 16 ದಿನಗಳ ಕಾಲ ಸುತ್ತುತ್ತದೆ ಮತ್ತು ತನ್ನ ವೇಗವನ್ನು ನಿರಂತರವಾಗಿ ಹೆಚ್ಚಿಸುತ್ತದೆ. ಈ ಅವಧಿಯಲ್ಲಿ ಉಪಗ್ರಹದ ಕಕ್ಷೆಯನ್ನು 5 ಬಾರಿ ಬದಲಾಯಿಸಲಾಗುತ್ತದೆ.

ಆದಿತ್ಯ ಎಲ್​1 ಸೂರ್ಯನ ಮೇಲೆ ಇಳಿಯುವುದೂ ಇಲ್ಲ, ಸೂರ್ಯನ ಸಮೀಪಕ್ಕೆ ತೆರಳುವುದೂ ಇಲ್ಲ ಬದಲಾಗಿ ಸೂರ್ಯನಿಂದ ಸುಮಾರು 1.5 ಮಿಲಿಯನ್ ಕಿ.ಮೀ ದೂರ ಉಳಿದುಕೊಂಡು ಸೂರ್ಯನ ಹೊರಗಿನ ವಾತಾವರಣವನ್ನು ಅಧ್ಯಯನ ಮಾಡಲಿದೆ.

ಮತ್ತಷ್ಟು ಓದಿ: Aditya L1 Mission: ಇಸ್ರೋ ಮಹತ್ವದ ಹೆಜ್ಜೆ, ಇಂದು ಆದಿತ್ಯ ಎಲ್​​1 ಉಡಾವಣೆ; ಸಮಯ, ಸ್ಥಳ, ಮಹತ್ವ ಇಲ್ಲಿದೆ

ಎಲ್​1 ಎನ್ನುವುದು ಖಗೋಳದಲ್ಲಿರುವ ಒಂದು ಪ್ರದೇಶವಾಗಿದ್ದು, ಈ ಪ್ರದೇಶದಲ್ಲಿ ಸೂರ್ಯ ಹಾಗೂ ಭೂಮಿಯಂತಹ ಆಕಾಶಕಾಯಗಳ ಗುರುತ್ವಾಕರ್ಷಣೆಯ ಬಲಗಳು ಸಮತೋಲನದಲ್ಲಿರುತ್ತವೆ.

ಆದಿತ್ಯ ಎಲ್​1 ಉಡಾವಣೆಯಾದ ದಿನದಿಂದ 126 ದಿನಗಳಲ್ಲಿ ಸೂರ್ಯನ ಸುತ್ತ ಕಕ್ಷೆಯಲ್ಲಿರುವ ತನ್ನ ಎಲ್​1 ಬಿಂದುವನ್ನು ತಲುಪುವ ನಿರೀಕ್ಷೆ ಇದೆ. ಆದರೆ ಇಸ್ರೋ ಈ ಬಗ್ಗೆ ದಿನಾಂಕವನ್ನು ಇನ್ನೂ ಸ್ಪಷ್ಟಗೊಳಿಸಿಲ್ಲ.

ಭಾರತದ ಚೊಚ್ಚಲ ಸೋಲಾರ್ ಮಿಷನ್‌ನ ಅಂದಾಜು ಬಜೆಟ್ 400 ಕೋಟಿ ರೂಪಾಯಿ ವ್ಯಯಿಸಲಾಗಿದೆ. ಇಸ್ರೋದ ಈ ಯೋಜನೆ ಯಶಸ್ವಿಯಾದರೆ ಸೌರ ಕಕ್ಷೆಯಲ್ಲಿ ಉಪಗ್ರಹ ಇಳಿಸಿದ ಏಷ್ಯಾದ ಮೊದಲ ದೇಶ ಎಂಬ ಕೀರ್ತಿಗೆ ಭಾರತ ಪಾತ್ರವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:11 am, Sun, 3 September 23

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ