AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ

ನೌಕೆ ಯಶಸ್ವಿ ಉಡಾವಣೆ ಬಗ್ಗೆ ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದು ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ
ಇಸ್ರೋ ಮುಖ್ಯಸ್ಥ ಸೋಮನಾಥ್
TV9 Web
| Updated By: ಆಯೇಷಾ ಬಾನು|

Updated on: Sep 02, 2023 | 2:03 PM

Share

ಬೆಂಗಳೂರು, ಸೆ.02: ಭಾರತದ ಮೊಟ್ಟ ಮೊದಲ ಸೂರ್ಯಯಾನದ ಮೊದಲ ಹೆಜ್ಜೆ ಇಂದು ಯಶಸ್ವಿಯಾಗಿದೆ. ಆದಿತ್ಯ ಎಲ್​1 ಉಪಗ್ರಹ ಹೊತ್ತ PSLV-C57 ರಾಕೆಟ್​ ಬೆಳಗ್ಗೆ 11 ಗಂಟೆ 50 ನಿಮಿಷಕ್ಕೆ ಆಕಾಶಕ್ಕೆ ಜಿಗಿದಿದ್ದು, ಭೂಕಕ್ಷೆಗೆ ಯಶಸ್ವಿಯಾಗಿ ಸೇರಿದೆ. ಇನ್ನು ನೌಕೆ ಯಶಸ್ವಿ ಉಡಾವಣೆ ಬಗ್ಗೆ ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದು ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ ಎಲ್​​​​-1​​​​ ನೌಕೆ ಉಡಾವಣೆ ಯಶಸ್ವಿಯಾಗಿದೆ. ಈ ಬಗ್ಗೆ ಮಾತನಾಡಿದ ಇಸ್ರೋ ಮುಖ್ಯಸ್ಥ ಸೋಮನಾಥ್ ಅವರು, ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ವಿಜ್ಞಾನಿಗಳು, ಇಂಜಿನಿಯರ್​ಗಳು, ಸಿಬ್ಬಂದಿ ವರ್ಗ ಸೇರಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಇನ್ನು ಆದಿತ್ಯ L-1​​​​ ನೌಕೆ ಯಶಸ್ವಿ ಉಡಾವಣೆ ಹಿನ್ನೆಲೆ ವಿಜ್ಞಾನಿಗಳ ಸಂಭ್ರಮಾಚರಣೆ ಜೋರಾಗಿದೆ.

ಇದನ್ನೂ ಓದಿ: ಆದಿತ್ಯ L1 ಉಡಾವಣೆ ಯಶಸ್ವಿ; ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ ಇಸ್ರೋ

ಇಸ್ರೋಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ವಿಜ್ಞಾನಿಗಳು, ಇಂಜಿನಿಯರ್​ಗಳು ಎಲ್ಲರಿಗೂ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭೂಮಿಯಿಂದ ಯಶಸ್ವಿಯಾಗಿ ಪ್ರಯಾಣ ಆರಂಭಿಸಿರುವ ಆದಿತ್ಯ ಎಲ್​ 1 ನೌಕೆ ಇನ್ನು ನಾಲ್ಕು ತಿಂಗಳುಗಳ ಬಳಿಕ ತನ್ನ ನಿಗದಿತ ಕಕ್ಷೆಗೆ ತಲುಪಲಿದೆ. ಸೂರ್ಯ ನಿಂದ 148.5 ಮಿಲಿಯನ್ ಕಿಲೋ ಮೀಟರ್​ ಮತ್ತು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್​ ದೂರದಲ್ಲಿರುವ L1 ಪಾಯಿಂಟ್ ತಲುಪಲು ಈ ನೌಕೆಗೆ ಇನ್ನು ನಾಲ್ಕು ತಿಂಗಳುಗಳ ಕಾಲ ಬೇಕು. ಅಂದ್ರೆ ಇಂದು ಸೆಪ್ಟಂಬರ್ 2 2023ರಂದು ಹಾರಿಬಿಟ್ಟಿರುವ ಆದಿತ್ಯ ನೌಕೆ 2024ರ ಜನವರಿ 12ರಂದು ಎಲ್​ 1 ಕಕ್ಷೆಗೆ ತಲುಪಲಿದೆ. ಭೂಕಕ್ಷೆಗೆ ಸೇರಿಸಿದ ಬಳಿಕ ಕ್ರೂಸ್​ ಫೇಸ್​ನ ವೇಗವನ್ನು ಹೆಚ್ಚಿಸಲಾಗುತ್ತೆ. ಬಳಿಕ ಅದನ್ನು ಹಾಲೋ ಆರ್ಬಿಟ್​ಗೆ ಸೇರಿಸಲಾಗುತ್ತದೆ. ಭೂಮಿ ಮತ್ತು ಚಂದ್ರನ ಪ್ರಭಾವಲಯಕ್ಕೆ ಸಿಲುಕುವ ನೌಕೆ ಹಾಲೋ ಆಕಾರದಲ್ಲಿ ಇದು ತಿರುಗುವ ಕಾರಣದಿಂದ ಇದನ್ನು ಹಾಲೋ ಆರ್ಬಿಟ್ ಎಂದು ಕರೆಯಲಾಗುತ್ತದೆ. ಬಳಿಕ ಅಲ್ಲಿಂದ ಬೂಸ್ಟ್​ ಮಾಡುವ ಮೂಲಕ L1 ಕಡೆಗೆ ಪಾಯಿಂಟ್​ಗೆ ಸೇರಿಸಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?