AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ

ನೌಕೆ ಯಶಸ್ವಿ ಉಡಾವಣೆ ಬಗ್ಗೆ ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದು ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ
ಇಸ್ರೋ ಮುಖ್ಯಸ್ಥ ಸೋಮನಾಥ್
TV9 Web
| Edited By: |

Updated on: Sep 02, 2023 | 2:03 PM

Share

ಬೆಂಗಳೂರು, ಸೆ.02: ಭಾರತದ ಮೊಟ್ಟ ಮೊದಲ ಸೂರ್ಯಯಾನದ ಮೊದಲ ಹೆಜ್ಜೆ ಇಂದು ಯಶಸ್ವಿಯಾಗಿದೆ. ಆದಿತ್ಯ ಎಲ್​1 ಉಪಗ್ರಹ ಹೊತ್ತ PSLV-C57 ರಾಕೆಟ್​ ಬೆಳಗ್ಗೆ 11 ಗಂಟೆ 50 ನಿಮಿಷಕ್ಕೆ ಆಕಾಶಕ್ಕೆ ಜಿಗಿದಿದ್ದು, ಭೂಕಕ್ಷೆಗೆ ಯಶಸ್ವಿಯಾಗಿ ಸೇರಿದೆ. ಇನ್ನು ನೌಕೆ ಯಶಸ್ವಿ ಉಡಾವಣೆ ಬಗ್ಗೆ ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದು ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ ಎಲ್​​​​-1​​​​ ನೌಕೆ ಉಡಾವಣೆ ಯಶಸ್ವಿಯಾಗಿದೆ. ಈ ಬಗ್ಗೆ ಮಾತನಾಡಿದ ಇಸ್ರೋ ಮುಖ್ಯಸ್ಥ ಸೋಮನಾಥ್ ಅವರು, ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ವಿಜ್ಞಾನಿಗಳು, ಇಂಜಿನಿಯರ್​ಗಳು, ಸಿಬ್ಬಂದಿ ವರ್ಗ ಸೇರಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಇನ್ನು ಆದಿತ್ಯ L-1​​​​ ನೌಕೆ ಯಶಸ್ವಿ ಉಡಾವಣೆ ಹಿನ್ನೆಲೆ ವಿಜ್ಞಾನಿಗಳ ಸಂಭ್ರಮಾಚರಣೆ ಜೋರಾಗಿದೆ.

ಇದನ್ನೂ ಓದಿ: ಆದಿತ್ಯ L1 ಉಡಾವಣೆ ಯಶಸ್ವಿ; ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ ಇಸ್ರೋ

ಇಸ್ರೋಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ವಿಜ್ಞಾನಿಗಳು, ಇಂಜಿನಿಯರ್​ಗಳು ಎಲ್ಲರಿಗೂ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭೂಮಿಯಿಂದ ಯಶಸ್ವಿಯಾಗಿ ಪ್ರಯಾಣ ಆರಂಭಿಸಿರುವ ಆದಿತ್ಯ ಎಲ್​ 1 ನೌಕೆ ಇನ್ನು ನಾಲ್ಕು ತಿಂಗಳುಗಳ ಬಳಿಕ ತನ್ನ ನಿಗದಿತ ಕಕ್ಷೆಗೆ ತಲುಪಲಿದೆ. ಸೂರ್ಯ ನಿಂದ 148.5 ಮಿಲಿಯನ್ ಕಿಲೋ ಮೀಟರ್​ ಮತ್ತು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್​ ದೂರದಲ್ಲಿರುವ L1 ಪಾಯಿಂಟ್ ತಲುಪಲು ಈ ನೌಕೆಗೆ ಇನ್ನು ನಾಲ್ಕು ತಿಂಗಳುಗಳ ಕಾಲ ಬೇಕು. ಅಂದ್ರೆ ಇಂದು ಸೆಪ್ಟಂಬರ್ 2 2023ರಂದು ಹಾರಿಬಿಟ್ಟಿರುವ ಆದಿತ್ಯ ನೌಕೆ 2024ರ ಜನವರಿ 12ರಂದು ಎಲ್​ 1 ಕಕ್ಷೆಗೆ ತಲುಪಲಿದೆ. ಭೂಕಕ್ಷೆಗೆ ಸೇರಿಸಿದ ಬಳಿಕ ಕ್ರೂಸ್​ ಫೇಸ್​ನ ವೇಗವನ್ನು ಹೆಚ್ಚಿಸಲಾಗುತ್ತೆ. ಬಳಿಕ ಅದನ್ನು ಹಾಲೋ ಆರ್ಬಿಟ್​ಗೆ ಸೇರಿಸಲಾಗುತ್ತದೆ. ಭೂಮಿ ಮತ್ತು ಚಂದ್ರನ ಪ್ರಭಾವಲಯಕ್ಕೆ ಸಿಲುಕುವ ನೌಕೆ ಹಾಲೋ ಆಕಾರದಲ್ಲಿ ಇದು ತಿರುಗುವ ಕಾರಣದಿಂದ ಇದನ್ನು ಹಾಲೋ ಆರ್ಬಿಟ್ ಎಂದು ಕರೆಯಲಾಗುತ್ತದೆ. ಬಳಿಕ ಅಲ್ಲಿಂದ ಬೂಸ್ಟ್​ ಮಾಡುವ ಮೂಲಕ L1 ಕಡೆಗೆ ಪಾಯಿಂಟ್​ಗೆ ಸೇರಿಸಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ