AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ

ನೌಕೆ ಯಶಸ್ವಿ ಉಡಾವಣೆ ಬಗ್ಗೆ ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದು ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಆದಿತ್ಯ ಎಲ್​1 ಯಶಸ್ವಿ ಉಡಾವಣೆ: ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ, ಪ್ರಧಾನಿ ಮೋದಿ ಅಭಿನಂದನೆ
ಇಸ್ರೋ ಮುಖ್ಯಸ್ಥ ಸೋಮನಾಥ್
TV9 Web
| Edited By: |

Updated on: Sep 02, 2023 | 2:03 PM

Share

ಬೆಂಗಳೂರು, ಸೆ.02: ಭಾರತದ ಮೊಟ್ಟ ಮೊದಲ ಸೂರ್ಯಯಾನದ ಮೊದಲ ಹೆಜ್ಜೆ ಇಂದು ಯಶಸ್ವಿಯಾಗಿದೆ. ಆದಿತ್ಯ ಎಲ್​1 ಉಪಗ್ರಹ ಹೊತ್ತ PSLV-C57 ರಾಕೆಟ್​ ಬೆಳಗ್ಗೆ 11 ಗಂಟೆ 50 ನಿಮಿಷಕ್ಕೆ ಆಕಾಶಕ್ಕೆ ಜಿಗಿದಿದ್ದು, ಭೂಕಕ್ಷೆಗೆ ಯಶಸ್ವಿಯಾಗಿ ಸೇರಿದೆ. ಇನ್ನು ನೌಕೆ ಯಶಸ್ವಿ ಉಡಾವಣೆ ಬಗ್ಗೆ ಇಸ್ರೋ ಮುಖ್ಯಸ್ಥ ಸೋಮನಾಥ್ ಮಾಹಿತಿ ನೀಡಿದ್ದು ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದ್ದಾರೆ. ಮತ್ತೊಂದೆಡೆ ಪ್ರಧಾನಿ ನರೇಂದ್ರ ಮೋದಿಯವರು ಕೂಡ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಇಸ್ರೋದ ಮಹತ್ವಾಕಾಂಕ್ಷಿ ಆದಿತ್ಯ ಎಲ್​​​​-1​​​​ ನೌಕೆ ಉಡಾವಣೆ ಯಶಸ್ವಿಯಾಗಿದೆ. ಈ ಬಗ್ಗೆ ಮಾತನಾಡಿದ ಇಸ್ರೋ ಮುಖ್ಯಸ್ಥ ಸೋಮನಾಥ್ ಅವರು, ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ವಿಜ್ಞಾನಿಗಳು, ಇಂಜಿನಿಯರ್​ಗಳು, ಸಿಬ್ಬಂದಿ ವರ್ಗ ಸೇರಿ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು. ಇನ್ನು ಆದಿತ್ಯ L-1​​​​ ನೌಕೆ ಯಶಸ್ವಿ ಉಡಾವಣೆ ಹಿನ್ನೆಲೆ ವಿಜ್ಞಾನಿಗಳ ಸಂಭ್ರಮಾಚರಣೆ ಜೋರಾಗಿದೆ.

ಇದನ್ನೂ ಓದಿ: ಆದಿತ್ಯ L1 ಉಡಾವಣೆ ಯಶಸ್ವಿ; ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದ ಇಸ್ರೋ

ಇಸ್ರೋಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ

ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಆದಿತ್ಯ ಎಲ್​​​​-1​​​​ ನೌಕೆ ಯಶಸ್ವಿ ಉಡಾವಣೆಗೆ ಶ್ರಮಿಸಿದ ವಿಜ್ಞಾನಿಗಳು, ಇಂಜಿನಿಯರ್​ಗಳು ಎಲ್ಲರಿಗೂ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಭೂಮಿಯಿಂದ ಯಶಸ್ವಿಯಾಗಿ ಪ್ರಯಾಣ ಆರಂಭಿಸಿರುವ ಆದಿತ್ಯ ಎಲ್​ 1 ನೌಕೆ ಇನ್ನು ನಾಲ್ಕು ತಿಂಗಳುಗಳ ಬಳಿಕ ತನ್ನ ನಿಗದಿತ ಕಕ್ಷೆಗೆ ತಲುಪಲಿದೆ. ಸೂರ್ಯ ನಿಂದ 148.5 ಮಿಲಿಯನ್ ಕಿಲೋ ಮೀಟರ್​ ಮತ್ತು ಭೂಮಿಯಿಂದ 15 ಲಕ್ಷ ಕಿಲೋ ಮೀಟರ್​ ದೂರದಲ್ಲಿರುವ L1 ಪಾಯಿಂಟ್ ತಲುಪಲು ಈ ನೌಕೆಗೆ ಇನ್ನು ನಾಲ್ಕು ತಿಂಗಳುಗಳ ಕಾಲ ಬೇಕು. ಅಂದ್ರೆ ಇಂದು ಸೆಪ್ಟಂಬರ್ 2 2023ರಂದು ಹಾರಿಬಿಟ್ಟಿರುವ ಆದಿತ್ಯ ನೌಕೆ 2024ರ ಜನವರಿ 12ರಂದು ಎಲ್​ 1 ಕಕ್ಷೆಗೆ ತಲುಪಲಿದೆ. ಭೂಕಕ್ಷೆಗೆ ಸೇರಿಸಿದ ಬಳಿಕ ಕ್ರೂಸ್​ ಫೇಸ್​ನ ವೇಗವನ್ನು ಹೆಚ್ಚಿಸಲಾಗುತ್ತೆ. ಬಳಿಕ ಅದನ್ನು ಹಾಲೋ ಆರ್ಬಿಟ್​ಗೆ ಸೇರಿಸಲಾಗುತ್ತದೆ. ಭೂಮಿ ಮತ್ತು ಚಂದ್ರನ ಪ್ರಭಾವಲಯಕ್ಕೆ ಸಿಲುಕುವ ನೌಕೆ ಹಾಲೋ ಆಕಾರದಲ್ಲಿ ಇದು ತಿರುಗುವ ಕಾರಣದಿಂದ ಇದನ್ನು ಹಾಲೋ ಆರ್ಬಿಟ್ ಎಂದು ಕರೆಯಲಾಗುತ್ತದೆ. ಬಳಿಕ ಅಲ್ಲಿಂದ ಬೂಸ್ಟ್​ ಮಾಡುವ ಮೂಲಕ L1 ಕಡೆಗೆ ಪಾಯಿಂಟ್​ಗೆ ಸೇರಿಸಲಾಗುತ್ತದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
KSRTC ಬಸ್ ಬ್ರೇಕ್ ಫೇಲ್; ಆಟೋ, ಹಣ್ಣಿನ ಅಂಗಡಿಗೆ ಡಿಕ್ಕಿ!
KSRTC ಬಸ್ ಬ್ರೇಕ್ ಫೇಲ್; ಆಟೋ, ಹಣ್ಣಿನ ಅಂಗಡಿಗೆ ಡಿಕ್ಕಿ!
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಶಾಸಕರ ಫೋಟೋಶೂಟ್ ಬಗ್ಗೆ ಭಾರೀ ಚರ್ಚೆ: ಕಾಶಪ್ಪನವರ್ ಏನಂದ್ರು ನೋಡಿ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಈಗ ಬೆಂಗಳೂರಿನ ರಸ್ತೆಗಳ ಡಾಂಬರೀಕರಣ ಮಾಡಲು ಸಾಧ್ಯವಿಲ್ಲ
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಸಿದ್ದರಾಮಯ್ಯ ಶಾಲು ಬಗ್ಗೆ ಸದನದಲ್ಲಿ ಸ್ವಾರಸ್ಯಕರ ಮಾತು
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಯುಗಾದಿ ದಿನವೂ, ಶಿವರಾತ್ರಿ ದಿನವೂ ಮಾಂಸ ತಿಂತೀನಿ, ನನ್ನಿಷ್ಟ: ಸಿದ್ದರಾಮಯ್ಯ
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಬಳಕೆಯ LPG ಸಿಲಿಂಡರ್ ಕೂಡ ಸಿಗ್ತಿಲ್ಲ: ಏಜೆನ್ಸಿಗಳ ಮುಂದೆ ಉದ್ದದ ಕ್ಯೂ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಸಿಎಂ, ಡಿಸಿಎಂ ಜೊತೆ ಸಚಿವರ ಜೊತೆ ಶಾಸಕರ ಫೋಟೋಶೂಟ್ ಹೇಗಿತ್ತು ನೋಡಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಬೆಂಗಳೂರಿಗರೇ ಪೆಟ್ರೋಲ್-ಡೀಸೆಲ್ ಸಮಸ್ಯೆ ಎದುರಿಸಲು ಸಿದ್ಧರಾಗಿ!
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಕಾಂಗ್ರೆಸ್​ನಲ್ಲಿ ಮುಸ್ಲಿಮರಿಗೆ ಅನ್ಯಾಯ ಮಾಡವ್ರೆ: ಸಾದಿಕ್ ಪೈಲ್ವಾನ್ ಕಿಡಿ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ
ಗದಗ: ಬಿರುಗಾಳಿ ಮಳೆಯ ಅಬ್ಬರಕ್ಕೆ ಹಾರಿಹೋದ ಮನೆ ಮೇಲಿನ ಶೀಟ್, ಮೂವರಿಗೆ ಗಾಯ