AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditya L1 Mission: ಮೊದಲ ಕಕ್ಷೆಯನ್ನು ಪೂರ್ಣಗೊಳಿಸಿ ಸೂರ್ಯನತ್ತ ಮತ್ತೊಂದು ಹೆಜ್ಜೆ ಇಟ್ಟ ಆದಿತ್ಯ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷಿ ಬಾಹ್ಯಾಕಾಶ ನೌಕೆ ಆದಿತ್ಯ ಎಲ್​ 1 ಭಾನುವಾರ ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತನ್ನ ಮೊದಲ ಸೌರ ಅನ್ವೇಷಣೆಯನ್ನು ಪೂರ್ಣಗೊಳಿಸಲು ಮತ್ತೊಂದು ಹೆಜ್ಜೆಯನ್ನು ಮುಂದಿರಿಸಿದೆ. ಪಿಎಸ್‌ಎಲ್‌ವಿ-ಸಿ57 ಉಡಾವಣಾ ವಾಹನದ ಮೂಲಕ ಆದಿತ್ಯ-ಎಲ್1 ಉಡಾವಣೆ ಶನಿವಾರ ಇಸ್ರೋದಿಂದ ಯಶಸ್ವಿಯಾಗಿ ನೆರವೇರಿತು.

Aditya L1 Mission: ಮೊದಲ ಕಕ್ಷೆಯನ್ನು ಪೂರ್ಣಗೊಳಿಸಿ ಸೂರ್ಯನತ್ತ ಮತ್ತೊಂದು ಹೆಜ್ಜೆ ಇಟ್ಟ ಆದಿತ್ಯ
ಆದಿತ್ಯ ಎಲ್​1
ನಯನಾ ರಾಜೀವ್
|

Updated on: Sep 03, 2023 | 1:01 PM

Share

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಮಹತ್ವಾಕಾಂಕ್ಷಿ ಬಾಹ್ಯಾಕಾಶ ನೌಕೆ ಆದಿತ್ಯ ಎಲ್​ 1 ಭಾನುವಾರ ಮೊದಲ ಕಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮೂಲಕ ತನ್ನ ಮೊದಲ ಸೌರ ಅನ್ವೇಷಣೆಯನ್ನು ಪೂರ್ಣಗೊಳಿಸಲು ಮತ್ತೊಂದು ಹೆಜ್ಜೆಯನ್ನು ಮುಂದಿರಿಸಿದೆ. ಪಿಎಸ್‌ಎಲ್‌ವಿ-ಸಿ57 ಉಡಾವಣಾ ವಾಹನದ ಮೂಲಕ ಆದಿತ್ಯ-ಎಲ್1 ಉಡಾವಣೆ ಶನಿವಾರ ಇಸ್ರೋದಿಂದ ಯಶಸ್ವಿಯಾಗಿ ನೆರವೇರಿತು.

ಆದಿತ್ಯ ಎಲ್​ 1 ಉಪಗ್ರಹ ಆರೋಗ್ಯಕರವಾಗಿ ಕಾರ್ಯನಿರ್ವಹಿಸುತ್ತಿದೆ ಹೊಸ ಕಕ್ಷೆಯು 245 ಕಿಮೀ x 22459 ಕಿಮೀ ತಲುಪಿದೆ. ಸೆಪ್ಟೆಂಬರ್ 5ರಂದು ಮತ್ತೊಂದು ಹೆಜ್ಜೆ ಇಡಲಿದೆ. ವಾಹನವು ಈಗಾಗಲೇ ಉಪಗ್ರಹವನ್ನು ನಿಖರವಾಗಿ ಅದರ ಉದ್ದೇಶಿತ ಕಕ್ಷೆಗೆ ಇರಿಸಿದೆ. ಅಲ್ಲಿಂದ ಅದು 125-ದಿನಗಳ ಪ್ರಯಾಣದಲ್ಲಿ ತನ್ನ ಗಮ್ಯಸ್ಥಾನವಾದ ಸೂರ್ಯ-ಭೂಮಿಯ L1 ಪಾಯಿಂಟ್‌ನ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸುತ್ತದೆ.

ಬಾಹ್ಯಾಕಾಶ ನೌಕೆಯನ್ನು ಅಂತಿಮವಾಗಿ ಸೂರ್ಯ-ಭೂಮಿಯ ವ್ಯವಸ್ಥೆಯ ಲ್ಯಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುತ್ತದೆ. ಇನ್ನು ಆದಿತ್ಯ ಎಲ್​1 ನೌಕೆಯು ಅಂಡಾಕಾರದ ಕಕ್ಷೆಯಲ್ಲಿ ಸೂರ್ಯನತ್ತ ಸಾಗುತ್ತದೆ, ಅಂತಿಮವಾಗಿ ಅದನ್ನು ಸೂರ್ಯ-ಭೂ ಮಂಡಲದ ಲಗ್ರಾಂಜ್ ಬಿಂದು 1ಸುತ್ತಲಿನ ಕಕ್ಷೆಗೆ ಸೇರಿಸಲಾಗುತ್ತದೆ.

ಮತ್ತಷ್ಟು ಓದಿ: ಸನ್ ಮಿಷನ್: ಇಂದು ಮೊದಲ ಕಕ್ಷೆ ಬದಲಿಸಲಿದೆ ಆದಿತ್ಯ ಎಲ್​1

ಈ ಲಗ್ರಾಂಜ್ ಬಿಂದು 1 ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ ದೂರದಲ್ಲಿದೆ. ಅಲ್ಲಿಗೆ ತಲುಪಲು ಎಲ್​1 125 ದಿನಗಳನ್ನು ತೆಗೆದುಕೊಳ್ಳುತ್ತದೆ. ಸೌರ ಯೋಜನೆಯ ಉದ್ದೇಶವೇನು?

ಆದಿತ್ಯ ಎಲ್​1 ಯೋಜನೆಯ ಮುಖ್ಯ ಉದ್ದೇಶವೆಂದರೆ ಕೊರೊನಾ(ಸೂರ್ಯನ ವಾತಾವರಣದ ಅತ್ಯಂತ ಹೊರಗಿನ ಭಾಗ) ಬಿಸಿಯಾಗುವ ಪ್ರಕ್ರಿಯೆ ಹಾಗೂ ಸೌರ ಗಾಳಿಯ ಹೆಚ್ಚಳವನ್ನು ಅರ್ಥ ಮಾಡಿಕೊಳ್ಳುವುದು, ಕೊರೊನಾ ಮಾಸ್ ಇಜೆಕ್ಷನ್, ಜ್ವಾಲೆಗಳು ಹಾಗೂ ಭೂಮಿಯ ಸಮೀಪದ ಹವಾಮಾನವನ್ನು ಅರ್ಥಮಾಡಿಕೊಳ್ಳುವುದು ಮುಖ್ಯ ಉದ್ದೇಶವಾಗಿದೆ.

ಇಸ್ರೋ ಟ್ವೀಟ್

ಆದಿತ್ಯ ಎಲ್​1ನಲ್ಲಿ 7 ಸಲಕರಣೆಗಳಿವೆ, ಅವುಗಳ ಪೈಕಿ ನಾಲ್ಕು ಸಲಕರಣೆಗಳು ಸೂರ್ಯನಿಂದ ಬರುವ ಬೆಳಕಿನ ಮೇಲೆ ನಿಗಾ ಇಟ್ಟರೆ , ಇತರೆ ಮೂರು ಸಲಕರಣೆಗಳು ಪ್ಲಾಸ್ಮಾ ಹಾಗೂ ಕಾಂತೀಯ ಕ್ಷೇತ್ರಗಳ ಕುರಿತು ಅಧ್ಯಯನ ಮಾಡಲಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ