AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aditya L1 Mission: ಇಸ್ರೋ ಮಹತ್ವದ ಹೆಜ್ಜೆ, ಇಂದು ಆದಿತ್ಯ ಎಲ್​​1 ಉಡಾವಣೆ; ಸಮಯ, ಸ್ಥಳ, ಮಹತ್ವ ಇಲ್ಲಿದೆ

ಆದಿತ್ಯ ಎಲ್‌-1 ನೌಕೆ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ಅಂದ್ರೆ 15 ಲಕ್ಷ ಕಿಲೋ ಮೀಟರ್ ತೆರಳಲಿದೆ. ಈ ಮೂಲಕ ಅತಿಹೆಚ್ಚು ದೂರ ಪ್ರಯಾಣ ಮಾಡಲಿರುವ ಭಾರತದ ಮೊಟ್ಟ ಮೊದಲ ನೌಕೆ ಎಂಬ ಹೆಗ್ಗಳಿಕೆಯೂ ಆದಿತ್ಯ-ಎಲ್ 1 ಪಾತ್ರವಾಗಲಿದೆ.

Aditya L1 Mission: ಇಸ್ರೋ ಮಹತ್ವದ ಹೆಜ್ಜೆ, ಇಂದು ಆದಿತ್ಯ ಎಲ್​​1 ಉಡಾವಣೆ; ಸಮಯ, ಸ್ಥಳ, ಮಹತ್ವ ಇಲ್ಲಿದೆ
ಆದಿತ್ಯ ಎಲ್​ 1
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Sep 02, 2023 | 9:50 AM

Share

ಚಂದ್ರಯಾನ-3 (Chandrayaana-3) ಯಶಸ್ಸಿನ ಖುಷಿಯಲ್ಲಿ ದೇಶ ತೇಲಾಡುತ್ತಿದೆ. ಈ ಸಕ್ಸಸ್​​ ಬಳಿಕ ಭಾರತ ಮತ್ತೊಂದು ಸಾಧನೆ ಮಾಡಲು ಇಸ್ರೋ ಮುಂದಾಗಿದೆ. ಹೌದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ದೇಶದ ಜನತೆಗೆ ಮತ್ತೊಂದು ಸಿಹಿ ಸುದ್ದಿ ನೀಡಲು ಸಜ್ಜಾಗಿದೆ. ಚಂದ್ರಯಾನ ಸಕ್ಸಸ್ ಬೆನ್ನಲ್ಲೇ ಸೂರ್ಯಯಾನಕ್ಕೆ ಇಸ್ರೋ ತಯಾರಾಗಿದೆ. ಭಾಸ್ಕರನ ಅಧ್ಯಯನ ಮಾಡುವ ಉದ್ದೇಶದಿಂದ ಇಸ್ರೋ ಆದಿತ್ಯ ಎಲ್‌-1 (Aditya L1) ನೌಕೆಯನ್ನು ಇಂದು (ಸೆಪ್ಟೆಂಬರ್‌ 2) ರಂದು ಬೆಳಿಗ್ಗೆ 11.50ಕ್ಕೆ ಶ್ರೀಹರಿಕೋಟಾದ ಸತೀಶ್‌ ಧವನ್‌ ಉಡಾವಣಾ ಕೇಂದ್ರದಿಂದ ಉಡಾವಣೆ ಮಾಡಲಿದೆ. ಈ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಲು ಇಸ್ರೋ ಹೊರಟಿದೆ.

ಇನ್ನು ಈ ಉಡಾವಣೆಯನ್ನು ಸಾರ್ವಜನಿಕರು ಕೂಡ ನೇರವಾಗಿ ವೀಕ್ಷಣೆ ಮಾಡಬಹುದು. ಇಂದು ಬೆಳಿಗ್ಗೆ 11.50ಕ್ಕೆ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳುವ ಆದಿತ್ಯ ಎಲ್‌ -1 ಅನ್ನು ಲಾಂಚ್ ವೀವ್‌ ಗ್ಯಾಲರಿಯಿಂದ್ ನೇರವಾಗಿ ವಿಕ್ಷಿಸಲು ಇಸ್ರೋ ಸಾರ್ವಜನಿಕರಿಗೆ ಅವಕಾಶ ನೀಡಿದೆ. ಇದಕ್ಕೆ ಇಸ್ರೋ ವೆಬ್ ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಅಷ್ಟಕ್ಕೂ ಏನಿದು ಆದಿತ್ಯ-ಎಲ್ 1 ಮಿಷನ್‌ ಏನು ? ಇಷ್ಟು ಏಕೆ ಕುತೂಹಲ

ಆದಿತ್ಯ ಎಲ್‌-1 ನೌಕೆ ಭೂಮಿಯಿಂದ 1.5 ಮಿಲಿಯನ್ ಕಿಲೋಮೀಟರ್ ಅಂದ್ರೆ 15 ಲಕ್ಷ ಕಿಲೋ ಮೀಟರ್ ತೆರಳಲಿದೆ. ಈ ಮೂಲಕ ಅತಿಹೆಚ್ಚು ದೂರ ಪ್ರಯಾಣ ಮಾಡಲಿರುವ ಭಾರತದ ಮೊಟ್ಟ ಮೊದಲ ನೌಕೆ ಎಂಬ ಹೆಗ್ಗಳಿಕೆಯೂ ಆದಿತ್ಯ-ಎಲ್ 1 ಪಾತ್ರವಾಗಲಿದೆ. ಈ ಎಲ್‌-1 ಪಾಯಿಂಟ್‌ ಪ್ರದೇಶದಲ್ಲಿ ಭೂಮಿ ಕಕ್ಷೆಗಳ ಗುರುತ್ವಾಕರ್ಷಣೆ ಬಲ ಇರುವುದಿಲ್ಲ. ಭೂಕಕ್ಷೆಯನ್ನು ದಾಟಿದ ಬಳಿಕ ಇದನ್ನು ಎಲ್‌-1ನ ಹೊರಗಿರುವ ದೊಡ್ಡ ಹಾಲೋ ಆರ್ಬಿಟ್‌ಗೆ ನೌಕೆಯನ್ನು ಸೇರಿಸಲಾಗುತ್ತದೆ. ‌ಆದಿತ್ಯ-ಎಲ್‌1 ಯೋಜನೆಯ ಅವಧಿ ಭರ್ತಿ ನಾಲ್ಕು ತಿಂಗಳು ಇರಲಿದೆ. ಅಂದರೇ 120 ರಿಂದ 125 ದಿನಗಳು. ಇದು ಜನೆವರಿ ಮೊದಲ ವಾರದಲ್ಲಿ ನಿರೀಕ್ಷಿತ ಕಕ್ಷೆ ಅಂದರೇ ಎಲ್-1 ಗೆ ಸೇರುವ ಸಾಧ್ಯತೆ ಇದೆ.

ಇದನ್ನೂ ಓದಿ: ಆದಿತ್ಯ L1 ಮಿಷನ್‌ನ ವೆಚ್ಚ ಎಷ್ಟು? ಗುರಿಗಳೇನು ಎಂಬುದನ್ನು ಸರಳ ಪದಗಳಲ್ಲಿ ಅರ್ಥಮಾಡಿಕೊಳ್ಳಿ

ಸೂರ್ಯನ ಅಧ್ಯಯನ ಹಿಂದ‌ನ ಉದ್ದೇಶ

ಸೂರ್ಯನ ಮೇಲಿನ ವಾತಾವರಣ ಅಧ್ಯಯನವೇ ಇದರ ಪ್ರಮುಖ ಗುರಿಯಾಗಿದೆ. ಕೊರೊನಾ ಅಂದರೇ ಸೂರ್ಯನ ಮೇಲ್ಮೈ ಭಾಗ ಹಾಗೂ ಕ್ರೋಸ್ಮೋಸ್ಪಿಯರ್ ಅಂದರೇ ಸೂರ್ಯನ ಮದ್ಯಭಾಗ ಮತ್ತು ಪೋಟೋಸ್ಪಿಯರ್ ಸೂರ್ಯನ ಕೇಳಭಾಗ ಪ್ರದೇಶವನ್ನು ಅಧ್ಯಯನ ಮಾಡಲು ಇಸ್ರೋ ಸಜ್ಜಾಗಿದೆ.

ಸೂರ್ಯನ ಕೊರೊನಾ ಭಾಗ ಸಾಕಷ್ಟು ವಿಸ್ಮಯಗಳಿಂದ ಕೂಡಿದ್ದು ಇದರ ಇಂಚಿಂಚು ಮಾಹಿತಿಯನ್ನು ಜಗತ್ತಿಗೆ ತಿಳಿಸಲು ಇಸ್ರೋ ಮುಂದಾಗಿದೆ. ಸೂರ್ಯನ ಕೊರೊನಾ ಬಿಸಿಯಾಗುವ ಬಗ್ಗೆ, ಸೌರ ಮಾರುತ ಹೇಗೆ ಎದ್ದೇಳಲಿದೆ ಎನ್ನುವ ಬಗ್ಗೆ ನೌಕೆ ಅಧ್ಯಯನ ಮಾಡಲಿದೆ. ಹಾಗೆ ಸೂರ್ಯನ ವಾತಾವರಣದ ಅಮೂಲಾಗ್ರ ಅಧ್ಯಯನವನ್ನೂ ಮಾಡಲಿದೆ. ಸೌರ ಮಂಡಲದಲ್ಲಿ ಸೌರ ಗಾಳಿ ಹಂಚಿಕೆಯಾಗುವ ಬಗ್ಗೆ, ತಾಪಮಾನ ಏರುವ ಬಗ್ಗೆ ನೌಕೆ ತಿಳಿದುಕೊಳ್ಳಲಿದೆ. ಒಟ್ಟಾರೆಯಾಗಿ ಇಡೀ ಯೋಜನೆಯ ಮೂಲ ಉದ್ದೇಶ ಸೂರ್ಯನ ಬಗ್ಗೆ ಇನ್ನಷ್ಟು ಆಳವಾಗಿ ತಿಳಿದುಕೊಳ್ಳುವುದಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:43 am, Sat, 2 September 23

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್