AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಲಾಕ್​ಡೌನ್ ಪರಿಶೀಲನೆ ವೇಳೆ ಅಂಗಡಿ ಮಾಲೀಕನ ಕೆನ್ನೆಗೆ ಹೊಡೆದ ಎಡಿಎಂ, ವಿಡಿಯೊ ವೈರಲ್

Viral Video: ಅಂಗಡಿಯ ಶಟರ್ ಮುಚ್ಚಿತ್ತು. ಪೊಲೀಸರು ಬಂದು ಅದನ್ನು ಮೇಲೆತ್ತಿದ್ದಾರೆ. ಎಡಿಎಂ ನನ್ನ ಕೆನ್ನೆಗೆ ಬಾರಿಸಿದ್ದಾರೆ. ಪೊಲೀಸ್ ಲಾಠಿಯಿಂದ ಹೊಡೆದಿದ್ದಾರೆ ಎಂದು ಅಂಗಡಿ ಮಾಲೀಕ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ

ಮಧ್ಯಪ್ರದೇಶ: ಲಾಕ್​ಡೌನ್ ಪರಿಶೀಲನೆ ವೇಳೆ ಅಂಗಡಿ ಮಾಲೀಕನ ಕೆನ್ನೆಗೆ ಹೊಡೆದ ಎಡಿಎಂ, ವಿಡಿಯೊ ವೈರಲ್
ಅಂಗಡಿ ಮಾಲೀಕನ ಕೆನ್ನೆಗೆ ಬಾರಿಸಿದ ಎಡಿಎಂ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 24, 2021 | 6:58 PM

Share

ಶಾಜಾಪುರ್: ಮಧ್ಯಪ್ರದೇಶದ ಶಾಜಾಪುರ್​ನಲ್ಲಿ ಕೊವಿಡ್ ಮಾರ್ಗಸೂಚಿ ಪರಿಶೀಲನೆಯ ವೇಳೆ ಹೆಚ್ಚುವರಿ ಜಿಲ್ಲಾ ಮೆಜಿಸ್ಟ್ರೇಟರ್ ಅಂಗಡಿ ಮಾಲೀಕರೊಬ್ಬರ ಕೆನ್ನೆಗೆ ಬಾರಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಅಂಗಡಿಯ ಶಟರ್ ಮುಚ್ಚಿತ್ತು. ಪೊಲೀಸರು ಬಂದು ಅದನ್ನು ಮೇಲೆತ್ತಿದ್ದಾರೆ. ಎಡಿಎಂ ನನ್ನ ಕೆನ್ನೆಗೆ ಬಾರಿಸಿದ್ದಾರೆ. ಪೊಲೀಸ್ ಲಾಠಿಯಿಂದ ಹೊಡೆದಿದ್ದಾರೆ ಎಂದು ಅಂಗಡಿ ಮಾಲೀಕ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಲಾಕ್​ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸೂರಜ್​ಪುರ್ ಜಿಲ್ಲಾಧಿಕಾರಿ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿತ್ತು.ಈವಿಡಿಯೊ ವೈರಲ್ ಆದ ಬೆನ್ನಲ್ಲೇ ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಭಾನುವಾರ ಆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದರು.

ಸುಮಾರು 3 ನಿಮಿಷಗಳ ಅವಧಿಯ ವಿಡಿಯೊದಲ್ಲಿ, ಜಿಲ್ಲೆಯಲ್ಲಿ ಲಾಕ್‌ಡೌನ್ ಮಾನದಂಡಗಳನ್ನು ಜಾರಿಗೊಳಿಸುವಾಗ ಜಿಲ್ಲಾಧಿಕಾರಿ ಒಬ್ಬ ವ್ಯಕ್ತಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂತು. ಆ ವ್ಯಕ್ತಿಯನ್ನು ಹೊಡೆಯಲು ತನ್ನ ಜೊತೆಯಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುತ್ತಿರುವುದು ವಿಡಿಯೊದಲ್ಲಿತ್ತು.

ರಣಬೀರ್ ಶರ್ಮಾ ಅವರನ್ನು ಸೆಕ್ರಟರಿಯೇಟ್ ಗೆ ವರ್ಗಾಯಿಸಲಾಗಿದ್ದು ಅವರ ಸ್ಥಾನಕ್ಕೆ ರಾಯಪುರ ಜಿಲಾ ಪಂಚಾಯತ್ ಸಿಇಒ ಗೌರವ್ ಕುಮಾರ್ ಸಿಂಗ್ ನೇಮಕ ಮಾಡಿದ್ದಾರೆ ಎಂದು ಭಾನುವಾರ ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ.

ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ ಐಎಎಸ್ ಅಸೋಸಿಯೇಷನ್ “ಇದು ಸ್ವೀಕಾರಾರ್ಹವಲ್ಲ ಮತ್ತು ಸೇವೆ ಮತ್ತು ನಾಗರಿಕತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಸರ್ಕಾರಿ ನೌಕರರು ಇನ್ನೊಬ್ಬರ ಮೇಲೆ ಹೊಂದಿರಬೇಕು ಮತ್ತು ಎಲ್ಲಾ ಸಮಯದಲ್ಲೂ ಸಮಾಜಕ್ಕೆ ಉತ್ತಮವಾದುದವನ್ನು ನೀಡಬೇಕು. ಈ ಕಷ್ಟದ ಸಮಯದಲ್ಲಿ ಇದು ಹೆಚ್ಚು ಇರಬೇಕು ಎಂದಿದೆ.

ಇದನ್ನೂ ಓದಿ: ಔಷಧ ತರಲೆಂದು ಅಂಗಡಿಗೆ ಹೋಗುತ್ತಿದ್ದ ವ್ಯಕ್ತಿಗೆ ಕಪಾಳ ಮೋಕ್ಷ; ಜಿಲ್ಲಾಧಿಕಾರಿ ವರ್ಗಾಯಿಸುವಂತೆ ಛತ್ತೀಸ್​ಗಡ್​ ಸಿಎಂ ಆದೇಶ

ಹೇಗಿದ್ದಾರೆ ನೋಡಿ ಕರ್ನಾಟಕದ ಶಿಲ್ಪಾ ಶೆಟ್ಟಿ ಮಕ್ಕಳು; ವೈರಲ್​ ಆಯ್ತು ಕ್ಯೂಟ್​ ವಿಡಿಯೋ

Published On - 6:56 pm, Mon, 24 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!