AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಲಾಕ್​ಡೌನ್ ಪರಿಶೀಲನೆ ವೇಳೆ ಅಂಗಡಿ ಮಾಲೀಕನ ಕೆನ್ನೆಗೆ ಹೊಡೆದ ಎಡಿಎಂ, ವಿಡಿಯೊ ವೈರಲ್

Viral Video: ಅಂಗಡಿಯ ಶಟರ್ ಮುಚ್ಚಿತ್ತು. ಪೊಲೀಸರು ಬಂದು ಅದನ್ನು ಮೇಲೆತ್ತಿದ್ದಾರೆ. ಎಡಿಎಂ ನನ್ನ ಕೆನ್ನೆಗೆ ಬಾರಿಸಿದ್ದಾರೆ. ಪೊಲೀಸ್ ಲಾಠಿಯಿಂದ ಹೊಡೆದಿದ್ದಾರೆ ಎಂದು ಅಂಗಡಿ ಮಾಲೀಕ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ

ಮಧ್ಯಪ್ರದೇಶ: ಲಾಕ್​ಡೌನ್ ಪರಿಶೀಲನೆ ವೇಳೆ ಅಂಗಡಿ ಮಾಲೀಕನ ಕೆನ್ನೆಗೆ ಹೊಡೆದ ಎಡಿಎಂ, ವಿಡಿಯೊ ವೈರಲ್
ಅಂಗಡಿ ಮಾಲೀಕನ ಕೆನ್ನೆಗೆ ಬಾರಿಸಿದ ಎಡಿಎಂ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 24, 2021 | 6:58 PM

Share

ಶಾಜಾಪುರ್: ಮಧ್ಯಪ್ರದೇಶದ ಶಾಜಾಪುರ್​ನಲ್ಲಿ ಕೊವಿಡ್ ಮಾರ್ಗಸೂಚಿ ಪರಿಶೀಲನೆಯ ವೇಳೆ ಹೆಚ್ಚುವರಿ ಜಿಲ್ಲಾ ಮೆಜಿಸ್ಟ್ರೇಟರ್ ಅಂಗಡಿ ಮಾಲೀಕರೊಬ್ಬರ ಕೆನ್ನೆಗೆ ಬಾರಿಸುತ್ತಿರುವ ವಿಡಿಯೊ ವೈರಲ್ ಆಗಿದೆ. ಅಂಗಡಿಯ ಶಟರ್ ಮುಚ್ಚಿತ್ತು. ಪೊಲೀಸರು ಬಂದು ಅದನ್ನು ಮೇಲೆತ್ತಿದ್ದಾರೆ. ಎಡಿಎಂ ನನ್ನ ಕೆನ್ನೆಗೆ ಬಾರಿಸಿದ್ದಾರೆ. ಪೊಲೀಸ್ ಲಾಠಿಯಿಂದ ಹೊಡೆದಿದ್ದಾರೆ ಎಂದು ಅಂಗಡಿ ಮಾಲೀಕ ಹೇಳಿರುವುದಾಗಿ ಎಎನ್ಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಲಾಕ್​ಡೌನ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಸೂರಜ್​ಪುರ್ ಜಿಲ್ಲಾಧಿಕಾರಿ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿತ್ತು.ಈವಿಡಿಯೊ ವೈರಲ್ ಆದ ಬೆನ್ನಲ್ಲೇ ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಭಾನುವಾರ ಆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿದ್ದರು.

ಸುಮಾರು 3 ನಿಮಿಷಗಳ ಅವಧಿಯ ವಿಡಿಯೊದಲ್ಲಿ, ಜಿಲ್ಲೆಯಲ್ಲಿ ಲಾಕ್‌ಡೌನ್ ಮಾನದಂಡಗಳನ್ನು ಜಾರಿಗೊಳಿಸುವಾಗ ಜಿಲ್ಲಾಧಿಕಾರಿ ಒಬ್ಬ ವ್ಯಕ್ತಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂತು. ಆ ವ್ಯಕ್ತಿಯನ್ನು ಹೊಡೆಯಲು ತನ್ನ ಜೊತೆಯಲ್ಲಿರುವ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡುತ್ತಿರುವುದು ವಿಡಿಯೊದಲ್ಲಿತ್ತು.

ರಣಬೀರ್ ಶರ್ಮಾ ಅವರನ್ನು ಸೆಕ್ರಟರಿಯೇಟ್ ಗೆ ವರ್ಗಾಯಿಸಲಾಗಿದ್ದು ಅವರ ಸ್ಥಾನಕ್ಕೆ ರಾಯಪುರ ಜಿಲಾ ಪಂಚಾಯತ್ ಸಿಇಒ ಗೌರವ್ ಕುಮಾರ್ ಸಿಂಗ್ ನೇಮಕ ಮಾಡಿದ್ದಾರೆ ಎಂದು ಭಾನುವಾರ ಹೊರಡಿಸಲಾದ ಆದೇಶದಲ್ಲಿ ತಿಳಿಸಲಾಗಿದೆ.

ಈ ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿದ ಐಎಎಸ್ ಅಸೋಸಿಯೇಷನ್ “ಇದು ಸ್ವೀಕಾರಾರ್ಹವಲ್ಲ ಮತ್ತು ಸೇವೆ ಮತ್ತು ನಾಗರಿಕತೆಯ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿದೆ. ಸರ್ಕಾರಿ ನೌಕರರು ಇನ್ನೊಬ್ಬರ ಮೇಲೆ ಹೊಂದಿರಬೇಕು ಮತ್ತು ಎಲ್ಲಾ ಸಮಯದಲ್ಲೂ ಸಮಾಜಕ್ಕೆ ಉತ್ತಮವಾದುದವನ್ನು ನೀಡಬೇಕು. ಈ ಕಷ್ಟದ ಸಮಯದಲ್ಲಿ ಇದು ಹೆಚ್ಚು ಇರಬೇಕು ಎಂದಿದೆ.

ಇದನ್ನೂ ಓದಿ: ಔಷಧ ತರಲೆಂದು ಅಂಗಡಿಗೆ ಹೋಗುತ್ತಿದ್ದ ವ್ಯಕ್ತಿಗೆ ಕಪಾಳ ಮೋಕ್ಷ; ಜಿಲ್ಲಾಧಿಕಾರಿ ವರ್ಗಾಯಿಸುವಂತೆ ಛತ್ತೀಸ್​ಗಡ್​ ಸಿಎಂ ಆದೇಶ

ಹೇಗಿದ್ದಾರೆ ನೋಡಿ ಕರ್ನಾಟಕದ ಶಿಲ್ಪಾ ಶೆಟ್ಟಿ ಮಕ್ಕಳು; ವೈರಲ್​ ಆಯ್ತು ಕ್ಯೂಟ್​ ವಿಡಿಯೋ

Published On - 6:56 pm, Mon, 24 May 21

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ