AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದಿನಿಂದ ದೇಶದಲ್ಲಿ ಕೊವಿಡ್ 19 ಲಸಿಕೆ ಬೂಸ್ಟರ್ ಡೋಸ್ ನೀಡಿಕೆ ಅಭಿಯಾನ; ಮತ್ತೆ ನೋಂದಣಿ ಬೇಕಾ? ಯಾವ ಲಸಿಕೆ? ಇಲ್ಲಿದೆ ಮಾಹಿತಿ

ಈ ಹೊಸಹಂತದ ಲಸಿಕೆ ಅಭಿಯಾನದ ಬಗ್ಗೆ ಕೆಲವೊಂದು ಪ್ರಶ್ನೆಗಳು ಏಳುತ್ತವೆ. ಯಾವ ಲಸಿಕೆ ನೀಡಲಾಗುತ್ತದೆ? ಇದೀಗ ಮೂರನೇ ಡೋಸ್​ ಲಸಿಕೆ ಪಡೆಯುವವರು ಮತ್ತೊಮ್ಮೆ ನೋಂದಣಿ ಮಾಡಿಸಿಕೊಳ್ಳಬೇಕಾ? ಎಂಬಿತ್ಯಾದಿ ಪ್ರಶ್ನೆಗಳು ಎದ್ದಿವೆ.

ಇಂದಿನಿಂದ ದೇಶದಲ್ಲಿ ಕೊವಿಡ್ 19 ಲಸಿಕೆ ಬೂಸ್ಟರ್ ಡೋಸ್ ನೀಡಿಕೆ ಅಭಿಯಾನ; ಮತ್ತೆ ನೋಂದಣಿ ಬೇಕಾ? ಯಾವ ಲಸಿಕೆ? ಇಲ್ಲಿದೆ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jan 10, 2022 | 8:21 AM

Share

ದೇಶದಲ್ಲಿ ಮತ್ತೊಮ್ಮೆ ಕೊರೊನಾ ವ್ಯಾಪಕವಾಗಿ ಹರಡುತ್ತಿದೆ. ದಿನವೊಂದಕ್ಕೆ ಲಕ್ಷಕ್ಕೂ ಅಧಿಕ ಸೋಂಕಿನ ಕೇಸ್​ಗಳು ಪತ್ತೆಯಾಗುತ್ತಿವೆ. ಈ ಮಧ್ಯೆ ಭಾರತದಲ್ಲಿ ಇಂದಿನಿಂದ ಹೊಸ ಹಂತದ ಕೊರೊನಾ ಲಸಿಕೆ ಅಭಿಯಾನ ಶುರುವಾಗಲಿದೆ. ಆರೋಗ್ಯ ಕಾರ್ಯಕರ್ತರು ಸೇರಿ, ಕೊರೊನಾ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರು ಮತ್ತು 60 ವರ್ಷ ಮೇಲ್ಪಟ್ಟು ಇತರ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಮೂರನೇ ಡೋಸ್ (ಬೂಸ್ಟರ್ ಡೋಸ್​) ಹಾಕುವ ಕಾರ್ಯ ಇಂದಿನಿಂದ ಶುರುವಾಗಲಿದೆ. ರಾಷ್ಟ್ರರಾಜಧಾನಿ ದೆಹಲಿ ಸೇರಿ ಎಲ್ಲ ಕಡೆಗಳಲ್ಲೂ ಈ ಹಂತದ ಲಸಿಕೆ ಅಭಿಯಾನಕ್ಕೆ, ಲಸಿಕಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ. ಇಷ್ಟೆಲ್ಲದರ ಮಧ್ಯೆ ಈ ಹೊಸಹಂತದ ಲಸಿಕೆ ಅಭಿಯಾನದ ಬಗ್ಗೆ ಕೆಲವೊಂದು ಪ್ರಶ್ನೆಗಳು ಏಳುತ್ತವೆ. ಯಾವ ಲಸಿಕೆ ನೀಡಲಾಗುತ್ತದೆ? ಇದೀಗ ಮೂರನೇ ಡೋಸ್​ ಲಸಿಕೆ ಪಡೆಯುವವರು ಮತ್ತೊಮ್ಮೆ ನೋಂದಣಿ ಮಾಡಿಸಿಕೊಳ್ಳಬೇಕಾ? ಎರಡನೇ ಡೋಸ್​ ತೆಗೆದುಕೊಂಡು ಎಷ್ಟು ಕಾಲದ ನಂತರ ಈ ಮೂರನೇ ಡೋಸ್​ ತೆಗೆದುಕೊಳ್ಳಬಹುದು? ಎಂಬಿತ್ಯಾದಿ ಪ್ರಶ್ನೆಗಳಿವೆ. 

ಮೂರನೇ ಡೋಸ್​ಗೇ ಯಾವ ಲಸಿಕೆ? ಬೂಸ್ಟರ್​ ಡೋಸ್​​ಗೆ ಲಸಿಕೆ ಬದಲಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಅಂದರೆ ಮೂರನೇ ಡೋಸ್​ ಪಡೆಯುವ ವ್ಯಕ್ತಿ ಈ ಹಿಂದೆ ಎರಡು ಡೋಸ್​ಗಳನ್ನು ಯಾವ ಲಸಿಕೆ ಪಡೆದಿದ್ದಾರೋ ಅದೇ ಲಸಿಕೆಯನ್ನೇ ಮೂರನೇ ಡೋಸ್​ ಆಗಿ ನೀಡಲಾಗುತ್ತದೆ. ಅಂದರೆ ಹಿಂದಿನ ಎರಡು ಡೋಸ್​ ಕೊವಿಶೀಲ್ಡ್​ ಪಡೆದಿದ್ದರೆ ಮೂರನೇ ಡೋಸ್​ ಕೂಡ ಕೊವಿಶೀಲ್ಡ್ ಇರುತ್ತದೆ, ಹಿಂದೆ ಎರಡು ಡೋಸ್​ ಕೊವ್ಯಾಕ್ಸಿನ್​ ಪಡೆದಿದ್ದರೆ ಮೂರನೇ ಡೋಸ್ ಕೂಡ ಕೊವ್ಯಾಕ್ಸಿನ್​ ಇರುತ್ತದೆ.

ಮತ್ತೆ ನೋಂದಣಿ ಅಗತ್ಯವಿಲ್ಲ ಈಗಾಗಲೇ ಎರಡು ಡೋಸ್ ಪಡೆದಿರುವ, ಆಯ್ದ ವರ್ಗಗಳ ಜನರಿಗೆ ಮಾತ್ರ ಕೊರೊನಾ ಲಸಿಕೆ ಮೂರನೇ ಡೋಸ್ ನೀಡಲಾಗುತ್ತಿದ್ದು, ಈ ಮೂರನೇ ಡೋಸ್ ಪಡೆಯುವವರು ಮತ್ತೊಮ್ಮೆ ನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಅವರು ಕೊವಿನ್ ಆ್ಯಪ್​ ಮೂಲಕ ಅಪಾಯಿಂಟ್​ಮೆಂಟ್​ ತೆಗೆದುಕೊಳ್ಳಬಹುದು. ಯಾಕೆಂದರೆ ಮೂರನೇ ಡೋಸ್​ ಪಡೆಯುವವರಿಗಾಗಿಯೇ ಕೊವಿನ್​ ಆ್ಯಪ್​​ನಲ್ಲಿ ಹೀಗಿದ್ದೊಂದು ಫೀಚರ್​​ನ್ನು ಅಳವಡಿಸಲಾಗಿದೆ. ಹಾಗಂತ ಈ ಅಪಾಯಿಂಟ್​ಮೆಂಟ್​ ಕಡ್ಡಾಯವಲ್ಲ. ನೀವು ನೇರವಾಗಿಯೂ ಲಸಿಕಾ ಕೇಂದ್ರಗಳಿಗೆ ಹೋಗಿ ಲಸಿಕೆ ಪಡೆಯಬಹುದು. ಅಲ್ಲಿಯೂ ಕೂಡ ನೀವು ಮರು ನೋಂದಣಿ ಮಾಡಿಕೊಳ್ಳುವ ಅಗತ್ಯ ಇರುವುದಿಲ್ಲ. ಇನ್ನು ಹೀಗೆ ಮೂರನೇ ಡೋಸ್ ಲಸಿಕೆ ಪಡೆಯುವವರು ಎರಡನೇ ಡೋಸ್​ ಪಡೆದು 9 ತಿಂಗಳು ಆಗಿರಬೇಕು.

60ವರ್ಷ ಮೇಲ್ಪಟ್ಟವರಿಗೆ ಸರ್ಟಿಫಿಕೇಟ್​ ಬೇಕಾ? 60 ವರ್ಷ ಮೇಲ್ಪಟ್ಟು, ಇತರ ರೋಗಗಳಿಂದ ಬಳಲುತ್ತಿರುವವರು ಯಾವುದೇ ವೈದ್ಯರಿಂದ ಆರೋಗ್ಯಕ್ಕೆ ಸಂಬಂಧಪಟ್ಟ ಸರ್ಟಿಫಿಕೇಟ್​​ನ್ನು ಕೊಡಬೇಕಾಗಿಲ್ಲ. ಆದರೆ ಲಸಿಕೆ ಪಡೆಯುವುದಕ್ಕೂ ಮೊದಲು ತಾವು ಚಿಕಿತ್ಸೆ ಪಡೆಯುತ್ತಿರುವ ವೈದ್ಯರೊಂದಿಗೆ ಒಮ್ಮೆ ಸಮಾಲೋಚನೆ ನಡೆಸಬೇಕು ಎಂದು ಆರೋಗ್ಯ ಇಲಾಖೆ ಈಗಾಗಲೇ ಹೇಳಿಕೆ ನೀಡಿದೆ.

ಆರೋಗ್ಯ ಕಾರ್ಯಕರ್ತರ ಕುಟುಂಬಕ್ಕೆ ಇಲ್ಲ ಲಸಿಕೆ ಈ ಹಂತದಲ್ಲಿ ಸದ್ಯ ಆರೋಗ್ಯ ಕಾರ್ಯಕರ್ತರು, ಕೊವಿಡ್​ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿ ಇರುವವರಿಗೆ ಮಾತ್ರ ಮೂರನೇ ಡೋಸ್​ ನೀಡುವುದಾಗಿ ಕೊವಿಡ್ 19 ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಹೀಗಾಗಿ ಆರೋಗ್ಯ ಕಾರ್ಯಕರ್ತರು ಮತ್ತಿತರ ವರ್ಗದವರ ಕುಟುಂಬದವರಿಗೆ ಮೂರನೇ ಡೋಸ್​ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಯಾವೆಲ್ಲ ದಾಖಲೆಗಳು ಬೇಕು? ಮೂರನೇ ಡೋಸ್​ ಲಸಿಕೆ ಪಡೆದ ಬಳಿಕವೂ ನಿಮಗೆ ಒಂದು ಸರ್ಟಿಫಿಕೇಟ್​ ಸಿಗುತ್ತದೆ. ನೋಂದಣಿಯ ಅಗತ್ಯವೇನೂ ಇರುವುದಿಲ್ಲ. ಹಾಗಿದ್ದಾಗ್ಯೂ ನೀವು ಮೂರನೇ ಡೋಸ್​ ತೆಗೆದುಕೊಳ್ಳಲು ಕೇಂದ್ರಕ್ಕೆ ಹೋಗುವಾಗ ನಿಮ್ಮ ವೋಟರ್ ಐಡಿ, ಆಧಾರ್​ ಕಾರ್ಡ್​, ಪಾನ್​ ಕಾರ್ಡ್​, ಡ್ರೈವಿಂಗ್​ ಲೈಸೆನ್ಸ್​ ಇನ್ನೇನಾದರೂ ತೆಗೆದುಕೊಂಡು ಹೋಗಬೇಕು. ಅದರ ಆಧಾರದ ಮೇಲೆ ಮೂರನೇ ಡೋಸ್ ನೀಡಲಾಗುತ್ತದೆ.

ಇದನ್ನೂ ಓದಿ: ‘ಈ ನಟರಿಗೆ ಅಹಂಕಾರ ಜಾಸ್ತಿ’; ವಿಡಿಯೋ ಮೂಲಕ ಎಳೆ ಎಳೆಯಾಗಿ ವಿವರಿಸಿದ ಕಮಾಲ್​ ಆರ್.​ ಖಾನ್​

Published On - 8:11 am, Mon, 10 January 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ