AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಆಯೋಗದ ಸದಸ್ಯರ ಆಯ್ಕೆಗೆ ಸ್ವತಂತ್ರ ಕೊಲಿಜಿಯಂ ನೇಮಿಸುವಂತೆ ಸುಪ್ರೀಂಕೋರ್ಟ್​ಗೆ ಮೊರೆ

ಸಂವಿಧಾನದ ಮೂಲ ಸ್ವರೂಪವೇ ಪ್ರಜಾಪ್ರಭುತ್ವ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವುದಕ್ಕಾಗಿ ತನ್ಮೂಲಕ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡುವುದಕ್ಕಾಗಿ ಇಂತಹ ಸ್ವತಂತ್ರ ಚುನಾವಣಾ ಆಯೋಗದ ಜರೂರತ್ತು ಬಹಳಷ್ಟಿದೆ. ಅದನ್ನು ರಾಜಕೀಯ ಮತ್ತು ಕಾರ್ಯಾಂಗದಿಂದ ಬೇರ್ಪಡಿಸಬೇಕಿದೆ ಎಂದು ADR ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.

ಚುನಾವಣಾ ಆಯೋಗದ ಸದಸ್ಯರ ಆಯ್ಕೆಗೆ ಸ್ವತಂತ್ರ ಕೊಲಿಜಿಯಂ ನೇಮಿಸುವಂತೆ ಸುಪ್ರೀಂಕೋರ್ಟ್​ಗೆ ಮೊರೆ
ಚುನಾವಣಾ ಆಯೋಗದ ಸದಸ್ಯರ ಆಯ್ಕೆಗೆ ಸ್ವತಂತ್ರ ಕೊಲಿಜಿಯಂ ನೇಮಿಸುವಂತೆ ಸುಪ್ರೀಂಕೋರ್ಟ್​ಗೆ ಮೊರೆ
Follow us
ಸಾಧು ಶ್ರೀನಾಥ್​
| Updated By: Skanda

Updated on: May 18, 2021 | 9:57 AM

ನವದೆಹಲಿ: ಭಾರತದಲ್ಲಿ ಚುನಾವಣಾ ಆಯೋಗವನ್ನು ರಾಜಕೀಯ ಮತ್ತು ಕಾರ್ಯಾಂಗದಿಂದ ಮುಕ್ತಗೊಳಿಸಿ, ಸ್ವತಂತ್ರ ಸಂಸ್ಥೆಯನ್ನಾಗಿಸುವ ಮಾತು ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಚುನಾವಣಾ ಆಯೋಗದ ಸದಸ್ಯರ ನೇಮಕಕ್ಕೆ ಸ್ವತಂತ್ರ ಆಯ್ಕೆ ಮಂಡಳಿಯನ್ನು ನೇಮಿಸುವಂತೆ ಕೋರಿ ಅಸೋಸಿಯಷನ್​ ಫಾರ್​ ಡೆಮಾಕ್ರಟಿಕ್ ರಿಫಾರ್ಮ್ಸ್ (Association for Democratic Reforms -ADR)​ ಸುಪ್ರೀಂಕೋರ್ಟ್​ನಲ್ಲಿ ಇದೀಗ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್​ ಖ್ಯಾತ ವಕೀಲ ಪ್ರಶಾಂತ್​ ಭೂಷಣ್​ ಅವರ ಮೂಲಕ ಈ ಅರ್ಜಿ ಸಲ್ಲಿಸಿದೆ.

ADR ಸಲ್ಲಿಸಿರುವ ಈ ಮನವಿಯಲ್ಲಿ ಪ್ರಸ್ತುತ ಚುನಾವಣಾ ಆಯೋಗದ ಸದ್ಯಸರ ನೇಮಕಾತಿ ಕಾರ್ಯವನ್ನು ಕಾರ್ಯಾಂಗವೇ ನಿಭಾಯಿಸುತ್ತಿದೆ. ಸಂವಿಧಾನದ Article 324(2) ಅನುಸಾರ ಕಾರ್ಯಾಂಗ ಇದನ್ನು ನೆರವೇರಿಸುತ್ತಿದೆ. ಆದರೆ ಜನರಿಗೆ ಇದನ್ನು ಪ್ರಶ್ನಿಸುವುದು ಅಸಾಧ್ಯವಾಗಿದೆ. ಹಾಗಾಗಿ ಚುನಾವಣಾ ಆಯೋಗಕ್ಕೆ ಸದಸ್ಯರನ್ನು ನೇಮಿಸುವ ಪ್ರಕ್ರಿಯೆಯನ್ನು ಸ್ವತಂತ್ರ ಆಯ್ಕೆ ಮಂಡಳಿಗೆ ಒಪ್ಪಿಸಬೇಕು ಎಂದು ವಾದ ಮಂಡಿಸಿದೆ. ವಾಸ್ತವವಾಗಿ ಚುನಾವಣಾ ಆಯೋಗ ಸ್ವತಂತ್ರ ಸಂಸ್ಥೆಯಾಗಿದೆ. ಆದರೆ ಕಾರ್ಯಾಂಗವೇ ತನಗೆ ಇಷ್ಟವಾದವರನ್ನು ತನ್ನ ಮರ್ಜಿಯಲ್ಲಿ ನೇಮಿಸುವುದರಿಂದ ಅದು ಮತ್ತೊಂದು ಕಾರ್ಯಾಂಗ ಸಂಸ್ಥೆಯಾಗಿ ಕಾರ್ಯನಿರ್ವವಿಹಿಸುತ್ತಿದೆ ಅಷ್ಟೇ. ಹಾಗಾಗಿ ಇದನ್ನು ಬದಲಾಯಿಸುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಸಂವಿಧಾನದ ಮೂಲ ಸ್ವರೂಪವೇ ಪ್ರಜಾಪ್ರಭುತ್ವ. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವುದಕ್ಕಾಗಿ ತನ್ಮೂಲಕ ಆರೋಗ್ಯಕರ ಪ್ರಜಾಪ್ರಭುತ್ವವನ್ನು ಕಾಪಾಡುವುದಕ್ಕಾಗಿ ಇಂತಹ ಸ್ವತಂತ್ರ ಚುನಾವಣಾ ಆಯೋಗದ ಜರೂರತ್ತು ಬಹಳಷ್ಟಿದೆ. ಅದನ್ನು ರಾಜಕೀಯ ಮತ್ತು ಕಾರ್ಯಾಂಗದಿಂದ ಬೇರ್ಪಡಿಸಬೇಕಿದೆ ಎಂದು ADR ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.

(ADR Moves Supreme Court though Advocate Prashant Bhushan Seeking Independent Collegium For Appointment Of Election Commission Members)

ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ಸಿದ್ದೇಶ್ವರ ಬಂಡಾಯ ಬಿಜೆಪಿ ನಾಯಕರ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ!
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ರಸ್ತೆ ಬದಿ ನಿಂತಿದ್ದ ಆಟೋಗೆ ಅಪ್ಪಳಿಸಿದ ಲಾರಿ ಚಕ್ರಗಳು: ಭಯಾನಕ ದೃಶ್ಯ ಸೆರೆ
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ವಸತಿ ಯೋಜನೆ ಮೀಸಲಾತಿ, ಸದನದಲ್ಲಿ ಪ್ರಶ್ನೆ ಕೇಳಲಿ, ಉತ್ತರಿಸುವೆ: ಶಿವಕುಮಾರ್
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜಂಗಲ್​​ರಾಜ್​ಗೆ ಬಿಹಾರ ಜನತೆ ಅಂತ್ಯ ಹಾಡಿದ್ದಾರೆ: ಮೋದಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಜನ ನನಗೆ ಬಟ್ಟೆ ಕೊಡುತ್ತಾರೆ, ಪಾಪದ ಹಣದ ಬಟ್ಟೆ ಯಾರಿಗೆ ಬೇಕು? ಕುಮಾರಸ್ವಾಮಿ
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಉಡುಪಿ ಜನ ಶಾಂತಿಪ್ರಿಯರು, ಅದನ್ನು ಕದಡುವ ಪ್ರಯತ್ನ ಬೇಡ: ಹೆಬ್ಬಾಳ್ಕರ್
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!
ಜಾತಿಗಣತಿಕ್ಕಿಂತ ಮೊದಲು ಸರ್ಕಾರ ಮರಗಣತಿ ಮಾಡಿಸುವುದೊಳಿತು!