AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2020-21ರಲ್ಲಿ 5 ಪ್ರಾದೇಶಿಕ ಪಕ್ಷಗಳು ಚುನಾವಣಾ ಬಾಂಡ್‌ಗಳ ಮೂಲಕ ₹250.60 ಕೋಟಿ ರೂ ದೇಣಿಗೆ ಪಡೆದಿವೆ: ಎಡಿಆರ್

31 ಪಕ್ಷಗಳ ಪೈಕಿ 29 ಪಕ್ಷಗಳ ಒಟ್ಟು ಆದಾಯವು 2019-20ರ ಹಣಕಾಸು ವರ್ಷದಲ್ಲಿ 800.26 ಕೋಟಿ ರೂ. ಆಗಿತ್ತು. 2020-21ರ ಹಣಕಾಸು ವರ್ಷದಲ್ಲಿ ಇದು  520.492 ಕೋಟಿ ರೂ.ಗೆ ಇಳಿಕೆಯಾಗಿದೆ. ಅಂದರೆ ಶೇ.34.96ರಷ್ಟು ಕುಸಿತವಾಗಿದೆ.

2020-21ರಲ್ಲಿ 5 ಪ್ರಾದೇಶಿಕ ಪಕ್ಷಗಳು ಚುನಾವಣಾ ಬಾಂಡ್‌ಗಳ ಮೂಲಕ ₹250.60 ಕೋಟಿ ರೂ ದೇಣಿಗೆ ಪಡೆದಿವೆ: ಎಡಿಆರ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: May 27, 2022 | 8:59 PM

Share

ಚುನಾವಣಾ ಹಕ್ಕುಗಳ ಗುಂಪು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (Association for Democratic Reforms- ADR) ಪ್ರಕಾರ, 2020-21ರಲ್ಲಿ ಚುನಾವಣಾ ಬಾಂಡ್‌ಗಳ (electoral bonds)ಮೂಲಕ ಐದು ಪ್ರಾದೇಶಿಕ ಪಕ್ಷಗಳು (regional parties) 250.60 ಕೋಟಿ ರೂಪಾಯಿ ಮೊತ್ತದ ದೇಣಿಗೆ ಪಡೆದಿವೆ ಎಂದು ಘೋಷಿಸಿವೆ.  ಎಡಿಆರ್‌ನ ಇತ್ತೀಚಿನ ವರದಿಯ ಪ್ರಕಾರ, 2020-21ರ ಹಣಕಾಸು ವರ್ಷದಲ್ಲಿ 31 ಪ್ರಾದೇಶಿಕ ಪಕ್ಷಗಳ ಒಟ್ಟು ಆದಾಯ 529.416 ಕೋಟಿ ರೂ.ಗಳಾಗಿದ್ದು, ಅವುಗಳ ಒಟ್ಟು ಘೋಷಿತ ವೆಚ್ಚ 414.028 ಕೋಟಿ ಆಗಿದೆ. ಡಿಎಂಕೆ (218.49 ಕೋಟಿ ರೂ.), ಟಿಡಿಪಿ (54.769 ಕೋಟಿ ರೂ.), ಎಐಎಡಿಎಂಕೆ (ರೂ. 42.37 ಕೋಟಿ), ಜೆಡಿಯು (ರೂ. 24.35 ಕೋಟಿ) ಮತ್ತು ಟಿಆರ್‌ಎಸ್ (ರೂ. 22.35 ಕೋಟಿ)- ಈ ಐದು ಪಕ್ಷಗಳು ಆ ವರ್ಷ ಅತಿ ಹೆಚ್ಚು ಖರ್ಚು ಮಾಡಿದ ಪಕ್ಷಗಳಾಗಿವೆ. ಪ್ರಮುಖ ಐದು ಪಕ್ಷಗಳ ಒಟ್ಟು ಆದಾಯ 434.255 ಕೋಟಿ ರೂ.ಗಳಾಗಿದ್ದು, ಒಟ್ಟಾರೆಯಾಗಿ ರಾಜಕೀಯ ಪಕ್ಷಗಳ ಒಟ್ಟು ಆದಾಯದ ಶೇ.82.03 ರಷ್ಟಿದೆ ಎಂದು ವರದಿ ತಿಳಿಸಿದೆ. ಸ್ವಯಂಪ್ರೇರಿತ ಕೊಡುಗೆಗಳ ಅಡಿಯಲ್ಲಿ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಯಿಂದ ತಮ್ಮ ಆದಾಯದ 250.60 ಕೋಟಿ ಅಥವಾ 47.34 ಪ್ರತಿಶತವನ್ನು ಸಂಗ್ರಹಿಸಿವೆ. ಆದರೆ , 2020-21 ಆರ್ಥಿಕ ವರ್ಷದಲ್ಲಿ ಇತರ ದೇಣಿಗೆಗಳು ಮತ್ತು ಕೊಡುಗೆಗಳು 126.265 ಕೋಟಿ ಅಥವಾ ಶೇಕಡಾ 23.85 ರಷ್ಟಿದೆ ಎಂದು ಅದು ಹೇಳಿದೆ. 31 ಪ್ರಾದೇಶಿಕ ಪಕ್ಷಗಳ ಪೈಕಿ ಕೇವಲ ಐದು ಮಾತ್ರ ಚುನಾವಣಾ ಬಾಂಡ್‌ಗಳ ಮೂಲಕ ದೇಣಿಗೆಯನ್ನು ಘೋಷಿಸಿವೆ. 2020-21ರ ಹಣಕಾಸು ವರ್ಷದಲ್ಲಿ 31 ಪ್ರಾದೇಶಿಕ ಪಕ್ಷಗಳ ಒಟ್ಟು ಆದಾಯದಲ್ಲಿ ರೂ 84.64 ಕೋಟಿ ಅಥವಾ ಶೇ 15.99 ಬಡ್ಡಿ ಆದಾಯವಾಗಿದೆ ಎಂದು ವರದಿ ತಿಳಿಸಿದೆ.

31 ಪಕ್ಷಗಳ ಪೈಕಿ 29 ಪಕ್ಷಗಳ ಒಟ್ಟು ಆದಾಯವು 2019-20ರ ಹಣಕಾಸು ವರ್ಷದಲ್ಲಿ 800.26 ಕೋಟಿ ರೂ. ಆಗಿತ್ತು. 2020-21ರ ಹಣಕಾಸು ವರ್ಷದಲ್ಲಿ ಇದು  520.492 ಕೋಟಿ ರೂ.ಗೆ ಇಳಿಕೆಯಾಗಿದೆ. ಅಂದರೆ ಶೇ.34.96ರಷ್ಟು ಕುಸಿತವಾಗಿದೆ. 2020-21 ಆರ್ಥಿಕ ವರ್ಷಕ್ಕೆ 17 ಪ್ರಾದೇಶಿಕ ಪಕ್ಷಗಳು ತಮ್ಮ ಆದಾಯದ ಒಂದು ಭಾಗವನ್ನು ಖರ್ಚು ಮಾಡದೆ ಉಳಿಸಿವೆ ಎಂದು ಘೋಷಿಸಿವೆ ಎಂದು ಎಡಿಆರ್ ಹೇಳಿದೆ.

ರಾಷ್ಟ್ರೀಯ ಪಕ್ಷಗಳಲ್ಲಿ, 2020-21ರ ಬಿಜೆಪಿಯ ಆಡಿಟ್ ವರದಿಯು ಈ ವರದಿಯನ್ನು ಸಿದ್ಧಪಡಿಸುವ ಸಮಯದಲ್ಲಿ ಇಸಿಐ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿಲ್ಲ ಎಂದು ಎಡಿಆರ್ ಹೇಳಿದೆ.

ಇದನ್ನೂ ಓದಿ
Image
NAS 2021 ಗಣಿತದಿಂದ ಸಮಾಜ ವಿಜ್ಞಾನದವರೆಗಿನ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ ಶೇ 9ರಷ್ಟು ಕುಸಿತ
Image
Aryan Khan Drug Case ಆರ್ಯನ್​​ ಖಾನ್​​ ಡ್ರಗ್ಸ್​​​ ಪ್ರಕರಣ: ಬಂಧನದಿಂದ ಎನ್​​ಸಿಬಿ ಕ್ಲೀನ್ ಚಿಟ್​​ವರೆಗೆ ಏನೇನಾಯ್ತು?
Image
OP Chautala: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಹರಿಯಾಣದ ಮಾಜಿ ಸಿಎಂ ಓಂ ಪ್ರಕಾಶ್ ಚೌತಾಲಾಗೆ 4 ವರ್ಷ ಜೈಲು ಶಿಕ್ಷೆ
Image
Aryan Khan: ಮುಂಬೈ ಡ್ರಗ್ಸ್​ ಪ್ರಕರಣ; ಶಾರುಖ್ ಖಾನ್ ಮಗ ಆರ್ಯನ್ ಖಾನ್​ಗೆ ಎನ್​ಸಿಬಿಯಿಂದ ಕ್ಲೀನ್ ಚಿಟ್

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?