ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಗುಡ್​ ನ್ಯೂಸ್; 60 ದಿನ ಮೊದಲು ಟಿಕೆಟ್​ ಬುಕಿಂಗ್​ಗೆ ಅವಕಾಶ

ಭಾರತೀಯ ರೈಲ್ವೆ ಇಲಾಖೆ ತನ್ನ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಇನ್ನುಮುಂದೆ 120 ದಿನಗಳ ಬದಲು 60 ದಿನಗಳ ಮೊದಲು ಪ್ರಯಾಣಿಕರು ಟಿಕೆಟ್ ಬುಕಿಂಗ್ ಮಾಡಬಹುದು. ನವೆಂಬರ್ 1ರಿಂದ ರೈಲು ಟಿಕೆಟ್​ ಬುಕಿಂಗ್​​ಗೆ ಈ ಹೊಸ ನಿಯಮ ಅನ್ವಯವಾಗಲಿದೆ. IRCTC ಬುಕಿಂಗ್ ಪ್ರಕಾರ, ರೈಲ್ವೆ ಟಿಕೆಟ್‌ಗಳ ಮುಂಗಡ ಕಾಯ್ದಿರಿಸುವಿಕೆಯ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಇಳಿಸಲಾಗಿದೆ ಎಂದು ಘೋಷಿಸಿದೆ.

ಪ್ರಯಾಣಿಕರಿಗೆ ರೈಲ್ವೆ ಇಲಾಖೆಯಿಂದ ಗುಡ್​ ನ್ಯೂಸ್; 60 ದಿನ ಮೊದಲು ಟಿಕೆಟ್​ ಬುಕಿಂಗ್​ಗೆ ಅವಕಾಶ
ರೈಲ್ವೆ ಇಲಾಖೆ
Follow us
|

Updated on: Oct 17, 2024 | 4:00 PM

ನವದೆಹಲಿ: ರೈಲ್ವೆ ಟಿಕೆಟ್‌ಗಳ ಮುಂಗಡ ಕಾಯ್ದಿರಿಸುವಿಕೆಯ ಅವಧಿಯನ್ನು 120 ದಿನಗಳಿಂದ 60 ದಿನಗಳಿಗೆ ಇಳಿಸಲಾಗಿದೆ. ನವೆಂಬರ್ 1ರಿಂದಲೇ ಈ ನಿಯಮ ಜಾರಿಗೆ ಬರಲಿದೆ. ಹಾಗೇ, ಟಿಕೆಟ್ ರಹಿತ ಪ್ರಯಾಣಕ್ಕೆ ರೈಲ್ವೆ ಇಲಾಖೆ ಕಡಿವಾಣ ಹಾಕಿದೆ. ರೈಲ್ವೆ ಸಚಿವಾಲಯವು 17 ವಲಯಗಳ ಜನರಲ್ ಮ್ಯಾನೇಜರ್‌ಗಳಿಗೆ ಪತ್ರ ಬರೆದು ಅಕ್ಟೋಬರ್ 1-15 ಮತ್ತು ಅಕ್ಟೋಬರ್ 25- ನವೆಂಬರ್ 10ರ ನಡುವೆ ವಿಶೇಷ ಡ್ರೈವ್‌ನ ಪ್ರಾರಂಭವನ್ನು ನಿರ್ದೇಶಿಸುತ್ತದೆ. 1989ರ ರೈಲ್ವೇ ಕಾಯಿದೆಯ ಪ್ರಕಾರ ಸೂಕ್ತ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.

“ಘಜಿಯಾಬಾದ್ ಮತ್ತು ಕಾನ್ಪುರ ನಡುವಿನ ನಮ್ಮ ಇತ್ತೀಚಿನ ದಿಢೀರ್ ತಪಾಸಣೆಯಲ್ಲಿ ಯಾವುದೇ ಟಿಕೆಟ್ ಇಲ್ಲದೆ ವಿವಿಧ ಎಕ್ಸ್‌ಪ್ರೆಸ್ ಮತ್ತು ರೈಲುಗಳ ಎಸಿ ಕೋಚ್‌ಗಳಲ್ಲಿ ನೂರಾರು ಪೊಲೀಸರು ಪ್ರಯಾಣಿಸುತ್ತಿದ್ದುದನ್ನು ನಾವು ಕಂಡುಕೊಂಡಿದ್ದೇವೆ. ನಾವು ಅವರಿಗೆ ದಂಡವನ್ನು ವಿಧಿಸಿದಾಗ ಆರಂಭದಲ್ಲಿ ಅವರು ಪಾವತಿಸಲು ನಿರಾಕರಿಸಿದರು, ನಮಗೆ ಬೆದರಿಕೆ ಹಾಕಿದರು” ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Uttarakhand: ರೈಲು ಹಳಿ ತಪ್ಪಿಸುವ ಮತ್ತೊಂದು ಯತ್ನ, ರೈಲ್ವೆ ಹಳಿಯಲ್ಲಿ ಸಿಲಿಂಡರ್ ಪತ್ತೆ

ನಾರ್ತ್ ಸೆಂಟ್ರಲ್ ರೈಲ್ವೆ ವಲಯದ ಟಿಕೆಟ್ ಚೆಕ್ ಮಾಡುವ ಅಧಿಕಾರಿಗಳು ಪೊಲೀಸರು ಮತ್ತು ಇತರ ಅನಧಿಕೃತ ಪ್ರಯಾಣಿಕರ ಮೇಲೆ ಕೇಂದ್ರೀಕರಿಸುವುದಾಗಿ ಹೇಳಿದ್ದಾರೆ. ಏಕೆಂದರೆ ಅವರು ಟಿಕೆಟ್ ಹೊಂದಿರುವ ಪ್ರಯಾಣಿಕರಿಗೆ ತೊಂದರೆ ಉಂಟುಮಾಡುತ್ತಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಬಿಜೆಪಿಯಲ್ಲಿದ್ದಾಗ ಒಳ್ಳೆಯವನಾಗಿದ್ದವನು ಕಾಂಗ್ರೆಸ್ ಸೇರಿ ಕೆಟ್ಟನೇ? ಶಾಸಕ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಸಿದ್ದರಾಮಯ್ಯ ಸರ್ಕಾರವೇ ರಾಜ್ಯದ ಮಾನ ಹರಾಜು ಹಾಕುತ್ತಿದೆ: ಕುಮಾರಸ್ವಾಮಿ
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಚನ್ನಪಟ್ಟಣದಿದ ಡಿಕೆ ಸುರೇಶ್, ಸುಳಿವು ನೀಡಿದ ಶಾಸಕ ತನ್ವೀರ್ ಸೇಠ್
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಚನ್ನಪಟ್ಟಣ; ಕುಮಾರಸ್ವಾಮಿ ನಮ್ಮ ವರಿಷ್ಠರೊಂದಿಗೆ ಚರ್ಚಿಸಲಿದ್ದಾರೆ:ಬೊಮ್ಮಾಯಿ
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಮಳೆಗಾಲದಲ್ಲೂ ಇಷ್ಟು ಜೋರು ಮಳೆಯಾಗಿರಲಿಲ್ಲ ಎನ್ನುತ್ತಾರೆ ಸ್ಥಳೀಯರು!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ಉತ್ತಮ ಮಳೆ, ತುಂಬಿದ ಕೆಆರ್​​ಎಸ್; ಮಂಡ್ಯ ರೈತನ ಸಂತೋಷಕ್ಕೆ ಪಾರವೇ ಇಲ್ಲ!
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ನಡು ರಸ್ತೆಯಲ್ಲಿ ತಲ್ವಾರ್​ನಿಂದ ಕೇಕ್​ ಕತ್ತರಿಸಿ ಹುಟ್ಟು ಹಬ್ಬ ಆಚರಣೆ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ಕಾವೇರಿ ತೀರ್ಥೋದ್ಭವ: ಆ ದಿವ್ಯ ಕ್ಷಣ ಹೇಗಿತ್ತು ನೋಡಿ
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ರಣರೋಚಕ ಫೈನಲ್​ನಲ್ಲಿ ಗೆದ್ದು ಬೀಗಿದ ಸದರ್ನ್ ಸೂಪರ್ ಸ್ಟಾರ್ಸ್
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’
ಜಗದೀಶ್​ಗೆ ಸೀರೆ ಕೊಡೋಕೆ ಮುಂದಾದ ಮನೆ ಮಂದಿ; ‘ಹೆಂಗಸಾಗೋಕೂ ಯೋಗ್ಯತೆ ಇಲ್ಲ’