AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2021 Live: ಭಾರತದ ಪ್ರಾದೇಶಿಕ ಸಮಗ್ರತೆ, ಜನರ ರಕ್ಷಣೆಗೆ ನಮ್ಮ ಸೇನೆ ಸದಾ ಬದ್ಧ -ರಕ್ಷಣಾ ಸಚಿವ ರಾಜನಾಥ್​ ಸಿಂಗ್​

Aero India 2021 Live updates ಭಾರತವು ಮೇಡ್​ ಇನ್​ ಇಂಡಿಯಾದಿಂದ ಮೇಡ್​ ಫಾರ್​ ದಿ ವರ್ಲ್ಡ್​ನತ್ತ ಪ್ರಗತಿಯಲ್ಲಿದೆ. ಹಾಗೇ ಕರ್ನಾಟಕವು ಕೈಗಾರಿಕೆಗಳಿಗೆ ಆಕರ್ಷಕ ತಾಣ. ರಾಜ್ಯವು ಸೂಫಿ ಸಂತರು, ಸಮಾಜ ಸುಧಾರಕ ಬಸವಣ್ಣ, ಆಧುನಿಕ ರತ್ನ ಸರ್​.ಎಂ. ವಿಶ್ವೇಶ್ವರಯ್ಯನವರಿಂದ ಪ್ರೇರಿತವಾಗಿದೆ ಎಂದು ರಾಜನಾಥ್​ ಸಿಂಗ್​ ಹೇಳಿದರು.

Aero India 2021 Live: ಭಾರತದ ಪ್ರಾದೇಶಿಕ ಸಮಗ್ರತೆ, ಜನರ ರಕ್ಷಣೆಗೆ ನಮ್ಮ ಸೇನೆ ಸದಾ ಬದ್ಧ -ರಕ್ಷಣಾ ಸಚಿವ ರಾಜನಾಥ್​ ಸಿಂಗ್​
ರಾಜನಾಥ್ ಸಿಂಗ್​
Lakshmi Hegde
| Edited By: ಸಾಧು ಶ್ರೀನಾಥ್​|

Updated on:Feb 03, 2021 | 1:12 PM

Share

Aero India 2021 Live:  ಬೆಂಗಳೂರು- ಇಲ್ಲಿನ ಯಲಹಂಕ ವಾಯುನೆಲೆಯಲ್ಲಿ 13ನೇ ಆವೃತ್ತಿ ಏರ್​ ಶೋ (Bangalore Air Show 2021) ಉದ್ಘಾಟನೆ ಮಾಡಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್ (Rajnath Singh)​ ಬಳಿಕ ಮಾತನಾಡಿ, ಪೂರ್ವ ಲಡಾಖ್​ನ ಎಲ್​​ಎಸಿಯಲ್ಲಿ ಚೀನಾ ಸೇನೆಗೆ ಭಾರತ ಸಮರ್ಥ ಪ್ರತಿಕ್ರಿಯೆ ನೀಡಿದೆ. ಹೀಗಾಗಿ ಅಲ್ಲಿನ ಸಂಘರ್ಷ ಪರಿಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.

ಭಾರತವು ಸದಾ ಎಚ್ಚರವಾಗಿರುತ್ತದೆ.. ಹಾಗೇ ನಮ್ಮ ಪ್ರಾದೇಶಿಕತೆಯ ಸಮಗ್ರತೆ, ಜನರ ರಕ್ಷಣೆಗೆ ಯಾವಾಗಲೂ ಬದ್ಧವಾಗಿರುತ್ತದೆ. ಶತ್ರುಗಳಿಂದ ಎದುರಾಗುವ ದುಷ್ಕೃತ್ಯಗಳನ್ನು ಖಂಡಿತ ಹಿಮ್ಮೆಟ್ಟುತ್ತೇವೆ ಎಂದು ರಾಜನಾಥ್​ ಸಿಂಗ್​ ತಿಳಿಸಿದರು.

ಭಾರತವು ಮೇಡ್​ ಇನ್​ ಇಂಡಿಯಾದಿಂದ ಮೇಡ್​ ಫಾರ್​ ದಿ ವರ್ಲ್ಡ್​ನತ್ತ ಪ್ರಗತಿಯಲ್ಲಿದೆ. ಹಾಗೇ ಕರ್ನಾಟಕವು ಕೈಗಾರಿಕೆಗಳಿಗೆ ಆಕರ್ಷಕ ತಾಣ. ರಾಜ್ಯವು ಸೂಫಿ ಸಂತರು, ಸಮಾಜ ಸುಧಾರಕ ಬಸವಣ್ಣ, ಆಧುನಿಕ ರತ್ನ ಸರ್​.ಎಂ. ವಿಶ್ವೇಶ್ವರಯ್ಯನವರಿಂದ ಪ್ರೇರಿತವಾಗಿದೆ. ಏರೋ ಇಂಡಿಯಾ ಸೆಮಿನಾರ್​ಗಳು ಆಧುನಿಕ ರೂಪದಲ್ಲಿ ನಡೆಯಲಿದ್ದು, ಇದನ್ನು ವಿಶ್ವದಾದ್ಯಂತ ಪ್ರಸಾರ ಮಾಡಲಾಗುವುದು. ಇಲ್ಲಿಗೆ ಹೆಸರಾಂತ ತಜ್ಞರನ್ನು ಆಹ್ವಾನಿಸಲಾಗಿದ್ದು, ಅವರೆಲ್ಲೂ ಆಯಾ ವಿಷಯಗಳ ಬಗ್ಗೆ ಮಾತನಾಡಲಿದ್ದಾರೆ ಎಂದು ಹೇಳಿದರು.

Aero India 2021: ಆಗಸದಲ್ಲಿ ಆತ್ಮನಿರ್ಭರ ಪರಿಕಲ್ಪನೆ ಮೂಡಿಸಿದ ಏರ್​ಕ್ರಾಫ್ಟ್!

Published On - 12:37 pm, Wed, 3 February 21

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ