AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಪೋಲಿಯೊ ಮುಕ್ತ ದೇಶ ಎಂದು ಘೋಷಣೆಯಾಗಿ 8 ವರ್ಷಗಳ ನಂತರ ಕೊಲ್ಕತ್ತಾದಲ್ಲಿ ಪೋಲಿಯೊ ವೈರಸ್ ಪತ್ತೆ

ಪೋಲಿಯೋ ವೈರಸ್ ಪತ್ತೆಯಾದ ನಂತರ ಮೆತಿಯಾಬುರುಜ್ ಪ್ರದೇಶದಲ್ಲಿ ಎಲ್ಲಿಯೂ ಸಾರ್ವಜನಿಕ ಮಲವಿಸರ್ಜನೆ ಮಾಡಬಾರದು ಎಂದು ಆರೋಗ್ಯ ಇಲಾಖೆ ಹೇಳಿದೆ. ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಮೇಲೆ ವಿಶೇಷ ನಿಗಾ ಇರಿಸುವಂತೆ...

ಭಾರತ ಪೋಲಿಯೊ ಮುಕ್ತ ದೇಶ ಎಂದು ಘೋಷಣೆಯಾಗಿ 8 ವರ್ಷಗಳ ನಂತರ ಕೊಲ್ಕತ್ತಾದಲ್ಲಿ ಪೋಲಿಯೊ ವೈರಸ್ ಪತ್ತೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 15, 2022 | 3:44 PM

Share

2011ರಲ್ಲಿ ಹೌರಾದಲ್ಲಿ ಕೊನೆಯ ಬಾರಿಗೆ ಮಗುವಿನ ದೇಹದಲ್ಲಿ ಪೋಲಿಯೊ ವೈರಸ್ (Polio virus) ಪತ್ತೆಯಾಗಿತ್ತು. ಇದಾದ ಬಳಿಕ 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ (World Health Organization) ಭಾರತವನ್ನು ಪೋಲಿಯೊ ಮುಕ್ತ ದೇಶ ಎಂದು ಘೋಷಿಸಿತ್ತು. ಆದರೆ ಎಂಟು ವರ್ಷಗಳ ನಂತರ ಕೋಲ್ಕತ್ತಾದಲ್ಲಿ (Kolkata) ಪೋಲಿಯೊ ವೈರಸ್ ಪತ್ತೆಯಾಗಿದೆ. ಆರೋಗ್ಯ ಇಲಾಖೆಯ ಮೂಲಗಳ ಪ್ರಕಾರ ಮೆತಿಯಾಬುರುಜ್ ಪ್ರದೇಶದಲ್ಲಿ ಕೊಳಚೆ ನೀರಿನಲ್ಲಿ ಪೋಲಿಯೊ ರೋಗಾಣುಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಮೆತಿಯಾಬುರುಜ್ ಪ್ರದೇಶದಲ್ಲಿ ಕಣ್ಗಾವಲು ಹೆಚ್ಚಿಸಿದೆ. ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್ಚರಿಕೆ ನೀಡಲಾಗಿದೆ. 10 ವರ್ಷಗಳ ನಂತರ ಕೋಲ್ಕತ್ತಾದಲ್ಲಿ ಪೋಲಿಯೊ ವೈರಸ್ ಪತ್ತೆಯಾಗಿದ್ದು ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ. ಯುನಿಸೆಫ್ ಜೊತೆಗಿನ ಜಂಟಿ ಕಾರ್ಯದಲ್ಲಿ ಮೆತಿಯಾಬುರುಜ್ ಪ್ರದೇಶದಲ್ಲಿ ಪೋಲಿಯೊ ವೈರಸ್ ಪತ್ತೆಯಾಗಿದೆ. ಇಂತಹ ಸಮೀಕ್ಷೆಗಳನ್ನು ಕೋಲ್ಕತ್ತಾದ ವಿವಿಧ ಕೊಳೆಗೇರಿ ಪ್ರದೇಶಗಳಲ್ಲಿ ಆಗಾಗ್ಗೆ ನಡೆಸಲಾಗುತ್ತದೆ.

ಪೋಲಿಯೊ ವೈರಸ್ ಪತ್ತೆಯಾದ ನಂತರ ಮೆತಿಯಾಬುರುಜ್ ಪ್ರದೇಶದಲ್ಲಿ ಎಲ್ಲಿಯೂ ಸಾರ್ವಜನಿಕ ಮಲವಿಸರ್ಜನೆ ಮಾಡಬಾರದು ಎಂದು ಆರೋಗ್ಯ ಇಲಾಖೆ ಹೇಳಿದೆ. ರೋಗನಿರೋಧಕ ಶಕ್ತಿ ಕಡಿಮೆ ಇರುವ ಮಕ್ಕಳ ಮೇಲೆ ವಿಶೇಷ ನಿಗಾ ಇರಿಸುವಂತೆ ಸರ್ಕಾರಿ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ನಿರ್ದೇಶನ ನೀಡಲಾಗಿದೆ. ಅಂತಹ ಮಕ್ಕಳ ಮಲ ಮಾದರಿಗಳನ್ನು ಪರೀಕ್ಷಿಸಲು ಸಹ ಅವರನ್ನು ಕೇಳಲಾಗಿದೆ. ಅದರ ಜತೆಗೆ ಲಸಿಕೆಗೆ ಒತ್ತು ನೀಡಲಾಗಿದೆ.

2011ರಲ್ಲಿ ಹೌರಾದ 12 ವರ್ಷದ ಬಾಲಕಿಗೆ ಪೋಲಿಯೊ ಇರುವುದು ಪತ್ತೆಯಾಗಿತ್ತು. ಮಾರ್ಚ್ 27, 2014 ರಂದು ಭಾರತವನ್ನು ಪೋಲಿಯೊ ಮುಕ್ತ ದೇಶವೆಂದು ಗುರುತಿಸಲಾಯಿತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 3:43 pm, Wed, 15 June 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!