AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ABVIMAS: 2 ತಿಂಗಳ ಬಳಿಕ ಹಿಮಾಚಲದಲ್ಲಿ ಬೆಂಗಳೂರು ಪರ್ವತಾರೋಹಿ ಶವ ಪತ್ತೆ

ಬೆಂಗಳೂರಿನ ಖಾಸಗಿ ಭದ್ರತಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಪರ್ವತಾರೋಹಿ ವೇದವ್ಯಾಸ್, ಜೂನ್‌ನಲ್ಲಿ 6,264-ಮೀಟರ್ CB-13 ಗೆ ಪಾದಯಾತ್ರೆಗೆ ತೆರಳಿದ್ದ ಐದು ಸದಸ್ಯರ ಟ್ರೆಕ್ಕಿಂಗ್ ತಂಡದ ಭಾಗವಾಗಿದ್ದರು.

ABVIMAS: 2 ತಿಂಗಳ ಬಳಿಕ ಹಿಮಾಚಲದಲ್ಲಿ ಬೆಂಗಳೂರು ಪರ್ವತಾರೋಹಿ ಶವ ಪತ್ತೆ
After 2 months, dead body of Bangalore mountaineer was found in HimachalImage Credit source: HT
ಅಕ್ಷಯ್​ ಪಲ್ಲಮಜಲು​​
|

Updated on:Aug 25, 2022 | 9:33 AM

Share

ಮನಾಲಿ:  ಅಟಲ್ ಬಿಹಾರಿ ವಾಜಪೇಯಿ ಇನ್‌ಸ್ಟಿಟ್ಯೂಟ್ ಆಫ್ ಮೌಂಟೇನಿಯರಿಂಗ್ ಮತ್ತು ಅಲೈಡ್ ಸ್ಪೋರ್ಟ್ಸ್ (ABVIMAS), ಮನಾಲಿ ಮತ್ತು ಲಾಹೌಲ್ ಮತ್ತು ಸ್ಪಿತಿ ಪೊಲೀಸರ ಜಂಟಿ ತಂಡವು 6,264 ಮೀಟರ್ ಪಾದಯಾತ್ರೆಯಲ್ಲಿದ್ದಾಗ ಆಳವಾದ ಬಿರುಕಿನಲ್ಲಿ ಬಿದ್ದ ಎರಡು ತಿಂಗಳ ನಂತರ ಬೆಂಗಳೂರಿನ ಪಾದಯಾತ್ರಿಕನ ಮೃತದೇಹವನ್ನು ಹೊರತೆಗೆಯಲಾಗಿದೆ.

ಬೆಂಗಳೂರಿನ ಖಾಸಗಿ ಸೆಕ್ಯುರಿಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೃತ ಪರ್ವತಾರೋಹಿ ವೇದವ್ಯಾಸ್ ಅವರು ಐವರು ಸದಸ್ಯರ ಟ್ರೆಕ್ಕಿಂಗ್ ತಂಡದ ಭಾಗವಾಗಿದ್ದರು. ತಂಡವು ಟ್ರೆಕ್ಕಿಂಗ್ ಕೈಗೊಳ್ಳುವ ಮೊದಲು ಭಾರತೀಯ ಪರ್ವತಾರೋಹಣ ಫೆಡರೇಶನ್‌ನಿಂದ ಅನುಮತಿಯನ್ನು ಕೋರಿತ್ತು, ಆದರೆ ಮುಂಚಿತವಾಗಿ ಸ್ಥಳೀಯ ಆಡಳಿತಕ್ಕೆ ತಿಳಿಸಲು ಸಾಧ್ಯವಾಗಿರಲಿಲ್ಲ.

ಜೂನ್ 16 ರಂದು 5,300 ಮೀಟರ್ ಎತ್ತರದ ಹಿಮನದಿಯನ್ನು ದಾಟುವಾಗ ಅವರು ಸಂದಿನ ಒಳಗೆ ಬಿದ್ದಿದ್ದಾರೆ. ಆರಂಭದಲ್ಲಿ, ಅವರ ಜೊತೆಗಿದ್ದ ಉಳಿದ ಪರ್ವತಾರೋಹಿಗಳು ವೇದವ್ಯಾಸ್ ಅವರನ್ನು ರಕ್ಷಿಸಲು ಪ್ರಯತ್ನಿಸಿದ್ದರೆ, ಆದರೆ ಅವರನ್ನು ಆ ಕಂದಕದಿಂದ ಮೇಲೆ ತರಲು ಸಾಧ್ಯವಾಗಿರಲಿಲ್ಲ, ನಂತರ ಅವರು ಸ್ಥಳೀಯ ಆಡಳಿತ ಮತ್ತು ಸೇನೆಗೆ ಮಾಹಿತಿ ನೀಡಿದ್ದಾರೆ.

ಲಹೌಲ್ ಮತ್ತು ಸ್ಪಿತಿ ಆಡಳಿತದಿಂದ ಕಳುಹಿಸಲಾದ ತುರ್ತು ತಂಡ ಮತ್ತು ಭಾರತೀಯ ಸೇನೆಯ ಡೋಗ್ರಾ ಸ್ಕೌಟ್ಸ್‌ನ ಏಳು ಸದಸ್ಯರ ತಂಡವು ಅವರನ್ನು ರಕ್ಷಿಸಲು ಆಗಿರಲಿಲ್ಲ ಏಕೆಂದರೆ ಪ್ರತಿಕೂಲ ಹವಾಮಾನವು ಕಾರ್ಯಾಚರಣೆಗೆ ಅಡ್ಡಿಯಾಗಿತ್ತು.

ಲಾಹೌಲ್ ಮತ್ತು ಸ್ಪಿತಿ ಪೊಲೀಸ್ ಅಧೀಕ್ಷಕ (ಎಸ್‌ಪಿ) ಮಾನವ್ ವರ್ಮಾ ಅವರು ಆಗಸ್ಟ್ 17 ರಂದು ಮತ್ತೊಮ್ಮೆ ಶೋಧ ಮತ್ತು ರಕ್ಷಣಾ ತಂಡವನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ. ಎಬಿವಿಮಾಸ್ ಇನ್ಸ್‌ಪೆಕ್ಟರ್ ಜಿತೇಂದರ್ ನೇತೃತ್ವದ ತಂಡ ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಎರಡು ಗಂಟೆಗಳ ಕಾರ್ಯಾಚರಣೆಯ ನಂತರ ದೇಹವನ್ನು ಹೊರತೆಗೆದಿದೆ ಎಂದು ವರ್ಮಾ ಹೇಳಿದರು.

ಮೃತರ ಪಾರ್ಥಿವ ಶರೀರವನ್ನು ಎಂಟು ಗಂಟೆ ಮತ್ತು 17 ಕಿಮೀ ಇಳಿದ ನಂತರ ಹತ್ತಿರದ ರಸ್ತೆಗೆ ತರಲಾಗಿದೆ. ದೇಹವನ್ನು ಕುಲುವಿನಲ್ಲಿ ಇರಿಸಲಾಗಿದೆ ಮತ್ತು ಅವರ ಕುಟುಂಬ ಸದಸ್ಯರಿಗೆ ತಿಳಿಸಲಾಗಿದೆ ಎಂದು ಎಸ್ಪಿ ಹೇಳಿದರು.

Published On - 9:33 am, Thu, 25 August 22

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ