AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

200 ವರ್ಷಗಳ ಬಳಿಕ ಮಹಾರಾಷ್ಟ್ರದ ಕುಟುಂಬದಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ಸ್ವಾಗತ ಹೇಗಿತ್ತು ಗೊತ್ತಾ?

ಕಾಲ ಬದಲಾಗಿದ್ದರೂ ಕೆಲವು ಕುಟುಂಬದಲ್ಲಿ ಹೆಣ್ಣಿನ ಬಗ್ಗೆ ಇರುವ ಮನಸ್ಥಿತಿ ಬದಲಾಗಿಲ್ಲ. ಹೆಣ್ಣು ಮಗು ಜನಿಸಿದರೆ ಬೇಸರಿಸಿಕೊಳ್ಳುವವರು ಇಂದಿಗೂ ಇದ್ದಾರೆ. ಆದರೆ, ಮಹಾರಾಷ್ಟ್ರದ ಬೀಡ್ ಜಿಲ್ಲೆಯ ದಹಿಫಳೆ ಕುಟುಂಬ ಹೆಣ್ಣು ಮಗು ಹುಟ್ಟಿದ್ದಕ್ಕೆ ಊರಿಗೆ ಊರೇ ಬೆರಗಾಗುವಂತೆ ಸಂಭ್ರಮಾಚರಿಸಿದೆ. ಈ ಕುಟುಂಬದಲ್ಲಿ ಬರೋಬ್ಬರಿ 200 ವರ್ಷಗಳ ಬಳಿಕ ಹೆಣ್ಣು ಮಗು ಹುಟ್ಟಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ನವಜಾತ ಶಿಶು ಮತ್ತು ತಾಯಿಯನ್ನು ಅಲಂಕೃತ ರಥದಲ್ಲಿ ಕುಳ್ಳಿರಿಸಿ, ಸಾಂಪ್ರದಾಯಿಕ ವಾದ್ಯಮೇಳ ಮತ್ತು ನೃತ್ಯದೊಂದಿಗೆ ಮೆರವಣಿಗೆ ಮಾಡಿ ಮನೆಗೆ ಕರೆತಂದಿದ್ದಾರೆ.

200 ವರ್ಷಗಳ ಬಳಿಕ ಮಹಾರಾಷ್ಟ್ರದ ಕುಟುಂಬದಲ್ಲಿ ಹುಟ್ಟಿದ ಹೆಣ್ಣು ಮಗುವಿಗೆ ಸ್ವಾಗತ ಹೇಗಿತ್ತು ಗೊತ್ತಾ?
ಮಹಾರಾಷ್ಟ್ರದಲ್ಲಿ ಹೆಣ್ಣು ಮಗುವಿಗೆ ಮೆರವಣಿಗೆImage Credit source: x
ಸುಷ್ಮಾ ಚಕ್ರೆ
|

Updated on:Sep 02, 2026 | 10:47 PM

Share

ಮುಂಬೈ, ಸೆಪ್ಟೆಂಬರ್ 2: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕುಟುಂಬವೊಂದರಲ್ಲಿ ಬರೋಬ್ಬರಿ 5 ತಲೆಮಾರುಗಳು ಅಂದರೆ ಸುಮಾರು 200 ವರ್ಷಗಳ ನಂತರ ಹೆಣ್ಣು ಮಗುವೊಂದು ಜನಿಸಿದ್ದು, ಮಗುವನ್ನು ರಥದ ಮೆರವಣಿಗೆ, ವಾದ್ಯಮೇಳ, ನೃತ್ಯದೊಂದಿಗೆ ಅದ್ಧೂರಿಯಾಗಿ ಮನೆಗೆ ಬರಮಾಡಿಕೊಳ್ಳಲಾಗಿದೆ. “ಸಾಮಾನ್ಯವಾಗಿ ಜನರು ಗಂಡು ಮಗುವನ್ನು ಬಯಸುತ್ತಾರೆ, ಆದರೆ ಹೆಣ್ಣು ಮಗು ಹುಟ್ಟಿದಾಗ ಸಿಗುವ ಆನಂದ ಮತ್ತು ಅನುಭವವೇ ಬೇರೆ. ಹೆಣ್ಣುಮಕ್ಕಳು ತಂದೆಯೊಂದಿಗೆ ಹೆಚ್ಚು ಪ್ರೀತಿ-ಸಾಮೀಪ್ಯ ಹೊಂದಿರುತ್ತಾರೆ. ನಾವು ನಮ್ಮ ಮಗಳನ್ನು ಹೂವಿನಂತೆ ಅತ್ಯಂತ ಪ್ರೀತಿಯಿಂದ ಸಾಕಿ ಬೆಳೆಸುತ್ತೇವೆ” ಎಂದು ಆ ಮಗುವಿನ ತಂದೆ ಹೇಳಿದ್ದಾರೆ.

ಮಗುವಿಗೆ ‘ಗಾರ್ಗಿ’ ಎಂದು ನಾಮಕರಣ ಮಾಡಲಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ತಕ್ಷಣವೇ ಈ ಅದ್ಧೂರಿ ಸ್ವಾಗತ ನೀಡಲಾಗಿದೆ. ದಹಿಫಳೆ ಕುಟುಂಬದ ಹಿರಿಯರ ಪ್ರಕಾರ, ಕಳೆದ 200 ವರ್ಷಗಳಿಂದ ಅವರ ವಂಶದಲ್ಲಿ ಹೆಣ್ಣು ಮಗುವೇ ಜನಿಸಿರಲಿಲ್ಲ. ಹೀಗಾಗಿ ಮಗುವಿನ ಆಗಮನದ ಸುದ್ದಿ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಯಲ್ಲಿದ್ದಾಗಲೇ ವಿಶೇಷ ಸ್ವಾಗತ ಕೋರಲು ಯೋಜಿಸಲಾಗಿತ್ತು.

ಇದನ್ನೂ ಓದಿ: ಖಾರ ತಿಂದ ಮಗು ಅಸ್ವಸ್ಥ: ಎಫ್‌ಡಿಎ ಅಧಿಕಾರಿಗೆ ಬಲವಂತವಾಗಿ ಎಕ್ಸ್‌ಪೈರಿ ಬಿಸ್ಕತ್ತು ತಿನ್ನಿಸಲು ಯತ್ನಿಸಿದ ಜನ

ಮಗುವಿನ ತಾತ ಲಿಂಬಾಜಿ ದಹಿಫಳೆ ಮಾತನಾಡಿ, “ನಮ್ಮ ಕುಟುಂಬದಲ್ಲಿ ಹೆಣ್ಣು ಮಗು ಇಲ್ಲ ಎಂಬ ದೊಡ್ಡ ಕೊರಗಿತ್ತು. ಇಂದು ಗಾರ್ಗಿಯ ಜನನದಿಂದ ಆ ಕೊರಗು ನೀಗಿದೆ. ಲಕ್ಷ್ಮಿಯಂತಿರುವ ಮೊಮ್ಮಗಳನ್ನು ರಥದಲ್ಲಿ, ಸಂಗೀತ-ವಾದ್ಯಗಳೊಂದಿಗೆ ಮನೆಗೆ ಕರೆತಂದಿರುವುದು ನನ್ನ ಜೀವನದ ಅತ್ಯಂತ ಸಂತೋಷದ ಕ್ಷಣ” ಎಂದು ಭಾವುಕರಾಗಿ ನುಡಿದಿದ್ದಾರೆ.

ಮೆರವಣಿಗೆಯುದ್ದಕ್ಕೂ ರಸ್ತೆಗಳಲ್ಲಿ ಕುಟುಂಬಸ್ಥರು ಭಜನೆ ಮತ್ತು ವಾದ್ಯಗಳ ನಾದಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು. 5 ತಲೆಮಾರುಗಳ ನಂತರ ಹೆಣ್ಣು ಮಗು ಜನಿಸಿರುವುದರಿಂದ ಕುಟುಂಬದ ಸಂತಸ ಇಮ್ಮಡಿಗೊಂಡಿದ್ದು, ಮಗುವಿನ ಆಗಮನವನ್ನು ಸ್ಮರಣೀಯವಾಗಿಸಲು ಈ ರೀತಿ ಅದ್ಧೂರಿ ಸ್ವಾಗತ ಕೋರಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Wed, 2 September 26

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ