AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Awas Yojana: ಪಿಎಂ ಆವಾಸ್​ ಯೋಜನೆಯಿಂದ 3 ಕೋಟಿ ಸ್ಲಂ ನಿವಾಸಿಗಳು ಲಕ್ಷಾಧೀಶರಾಗಿದ್ದಾರೆ: ಪ್ರಧಾನಿ ಮೋದಿ

Pradhan Mantri Awas Yojana - Urban: ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಶೇ.80ರಷ್ಟು ಮನೆಗಳಿಗೆ ಮಹಿಳೆಯರೇ ಮಾಲೀಕರಾಗಿದ್ದಾರೆ. ಅದರಲ್ಲಿ ಒಂದಷ್ಟು ಮಹಿಳೆಯರು ಜಂಟಿ ಮಾಲೀಕರಾಗಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

PM Awas Yojana: ಪಿಎಂ ಆವಾಸ್​ ಯೋಜನೆಯಿಂದ 3 ಕೋಟಿ ಸ್ಲಂ ನಿವಾಸಿಗಳು ಲಕ್ಷಾಧೀಶರಾಗಿದ್ದಾರೆ: ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on:Oct 05, 2021 | 3:48 PM

Share

ಲಖನೌ: 2014ರಿಂದ ಇಲ್ಲಿಯವರೆಗೆ ನಮ್ಮ ಸರ್ಕಾರ ಪಿಎಂ ಆವಾಸ್​ ಯೋಜನೆ (PM Awas Yojana)ಯಡಿ ಉತ್ತರ ಪ್ರದೇಶದಲ್ಲಿ  1.13 ಕೋಟಿಗೂ ಅಧಿಕ ಮನೆಗಳನ್ನು ನಿರ್ಮಾಣ ಮಾಡಲು ಅನುಮೋದನೆ ನೀಡಿದೆ. ಅದರಲ್ಲಿ 50 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಕಟ್ಟಿ, ಬಡವರಿಗೆ ಹಂಚಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದರು. ಇಂದು ಉತ್ತರ ಪ್ರದೇಶದ ಲಖನೌನದಲ್ಲಿ ಆಜಾದಿ @75: ನವನಗರ ಭಾರತ-ನಗರ ಭೂಪ್ರದೇಶಗಳ ಪರಿವರ್ತನೆ (‘Azadi@75 -New Urban India: Transforming Urban Landscape)ಎಂಬ ಸಮ್ಮೇಳನ ಮತ್ತು ಎಕ್ಸ್​ಪೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸುಮಾರು 75000 ಫಲಾನುಭವಿಗಳಿಗೆ ಪಿಎಂ ಆವಾಸ್​ ಯೋಜನೆಯಡಿ ಮನೆಗಳ ಕೀ ವಿತರಿಸಿ ಬಳಿಕ ಮಾತನಾಡಿದರು.  ಇದೇ ವೇಳೆ ನರೇಂದ್ರ ಮೋದಿ ವಿವಿಧ 75 ನಗರಾಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ವಸತಿ ಯೋಜನೆ ಫಲಾನುಭವಿಗಳ ಜತೆ ಸಂವಾದವನ್ನೂ ನಡೆಸಿದ್ದಾರೆ.  

ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಶೇ.80ರಷ್ಟು ಮನೆಗಳಿಗೆ ಮಹಿಳೆಯರೇ ಮಾಲೀಕರಾಗಿದ್ದಾರೆ. ಅದರಲ್ಲಿ ಒಂದಷ್ಟು ಮಹಿಳೆಯರು ಜಂಟಿ ಮಾಲೀಕರಾಗಿದ್ದಾರೆ. ಅಂದರೆ ಶೇ.80ರಷ್ಟು ಮನೆಗಳನ್ನು ಆಯಾ ಕುಟುಂಬದ ಮಹಿಳೆಯರ ಹೆಸರಿಗೇ ಮಾಡಲಾಗಿದೆ ಎಂದು ತಿಳಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ದೇಶದಲ್ಲಿ ಕೆಲವು ಗಣ್ಯರು, ಪ್ರಧಾನಮಂತ್ರಿ ನರೇಂದ್ರ ಮೋದಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸುತ್ತಿದ್ದಾರೆ. ಆ ಪ್ರಶ್ನೆಗೆ ಇದೇ ಮೊದಲ ಬಾರಿಗೆ ನಾನು ಉತ್ತರಿಸುತ್ತಿದ್ದೇನೆ. ಹಗಲು-ರಾತ್ರಿಯೆನ್ನದೆ ಇಡೀ ದಿನ ನನ್ನ ವಿರುದ್ಧ ಆಕ್ಷೇಪ, ಆರೋಪ ಎತ್ತುತ್ತ, ತಮ್ಮ ಶಕ್ತಿ ವ್ಯಯಿಸುತ್ತಿರುವ ವಿರೋಧ ಪಕ್ಷಗಳು, ನನ್ನ ಈ ಭಾಷಣ ಕೇಳಿದ ಬಳಿಕವೂ ಅದನ್ನು ವಿರೋಧಿಸುತ್ತಾರೆ ಎಂದು ಹೇಳಿದರು.

ದೇಶದಲ್ಲಿ ಕೊಳೆಗೇರಿ ಪ್ರದೇಶದಲ್ಲಿ ವಾಸಿಸುತ್ತಿದ್ದ ಸುಮಾರು 3 ಕೋಟಿ ಜನರು ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಲಕ್ಷಾಧಿಪತಿಗಳಾಗಿದ್ದಾರೆ.  ಲಕ್ಷ ರೂ.ಬೆಲೆಬಾಳುವ ಮನೆ ಹೊಂದಿದ ಮೇಲೆ ಅವರೂ ಲಕ್ಷಾಧೀಶ್ವರರೇ ಆಗಿದ್ದಾರೆ. ಮನೆಯೇ ಇಲ್ಲದೆ ಬದುಕುತ್ತಿದ್ದವರು ಪಿಎಂ ಆವಾಸ್​ ಯೋಜನೆಯಡಿ ಮನೆ ಪಡೆದು, ತಮ್ಮತಮ್ಮ ಮನೆಯಲ್ಲಿ ದೀಪಾವಳಿ, ದಸರಾ, ಈದ್​ ಹಬ್ಬ ಆಚರಿಸುತ್ತಿದ್ದಾರೆ. ಇದು ನನಗೆ ಅತ್ಯಂತ ಖುಷಿ ಕೊಟ್ಟ ವಿಚಾರ ಎಂದು ಹೇಳಿರುವ ಪ್ರಧಾನಿ ಮೋದಿ, ಪ್ರಧಾನಮಂತ್ರಿ ಆವಾಸ್​ ಯೋಜನೆಯಡಿ ಕೇಂದ್ರ ಸರ್ಕಾರ ಬಡಜನರ ಅಕೌಂಟ್​ಗೆ ಹಣ ಹಾಕಲು ಇಲ್ಲಿಯವರೆಗೆ 1 ಲಕ್ಷ ಕೋಟಿ ರೂ.ವಿನಿಯೋಗಿಸಿದೆ ಎಂದೂ  ತಿಳಿಸಿದರು.

ಇದನ್ನೂ ಓದಿ: ಲಖನೌನಲ್ಲಿ ಆಜಾದಿ@75ರಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ; ವಸತಿ ಫಲಾನುಭವಿಗಳೊಂದಿಗೆ ಸಂವಾದ

ಉತ್ತರ ಪ್ರದೇಶ ಸರ್ಕಾರ ಆರ್​ಎಸ್​ಎಸ್​ ಹಿಡಿತದಲ್ಲಿದೆ; ಕಾಂಗ್ರೆಸ್ ಸರಿಯಾಗಿದ್ದಿದ್ದರೆ ದೇಶ ಹೀಗಿರುತ್ತಿರಲಿಲ್ಲ: ಹೆಚ್​ಡಿ ಕುಮಾರಸ್ವಾಮಿ

Published On - 3:45 pm, Tue, 5 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ