AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಲಾಕ್​ಡೌನ್ ಘೋಷಣೆಯಾದ ಕೂಡಲೇ ಮದ್ಯದಂಗಡಿ ಮುಂದೆ ಜನವೋ ಜನ

Delhi Lockdown: ಚುಚ್ಚುಮದ್ದಿನಿಂದ ಯಾವುದೇ ಪ್ರಯೋಜನವಿಲ್ಲ, ಮದ್ಯ ಸೇವನೆ ಮಾಡುವವರೆಲ್ಲರೂ ಕೊರೊನಾವೈರಸ್​ನಿಂದ ಸುರಕ್ಷಿತವಾಗಿರುತ್ತಾರೆ. ಔಷಧಿಯಿಂದ ಮದ್ಯವೇ ಲೇಸು ಎಂದು ಮದ್ಯದಂಗಡಿಗೆ ಮದ್ಯ ಖರೀದಿ ಮಾಡಲು ಬಂದ ಮಹಿಳೆಯೊಬ್ಬರು ಹೇಳುತ್ತಿರುವ ವಿಡಿಯೊವನ್ನು ಎಎನ್ಐ ಟ್ವೀಟ್ ಮಾಡಿದೆ.

ದೆಹಲಿಯಲ್ಲಿ ಲಾಕ್​ಡೌನ್ ಘೋಷಣೆಯಾದ ಕೂಡಲೇ ಮದ್ಯದಂಗಡಿ ಮುಂದೆ ಜನವೋ ಜನ
ದೆಹಲಿಯ ಮದ್ಯದಂಗಡಿಯ ಮುಂದೆ ಸೇರಿರುವ ಜನ
Follow us
ರಶ್ಮಿ ಕಲ್ಲಕಟ್ಟ
|

Updated on: Apr 19, 2021 | 4:15 PM

ದೆಹಲಿ: ದೆಹಲಿಯಲ್ಲಿ ಕೊವಿಡ್ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೋಮವಾರ 6 ದಿನಗಳ ಲಾಕ್​ಡೌನ್ ಘೋಷಿಸಿದ ಕೂಡಲೇ ಮದ್ಯದಂಗಡಿಯಲ್ಲಿ ಜನರು ಸಾಲುಗಟ್ಟಿ ನಿಂತ ದೃಶ್ಯ ಎಲ್ಲೆಡೆ ಕಂಡು ಬಂದಿದೆ. ದೆಹಲಿಯಲ್ಲಿ ಇಂದು ರಾತ್ರಿ 10 ಗಂಟೆಯಿಂದ ಮುಂದಿನ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಲಾಕ್​ಡೌನ್ ಘೋಷಿಸಲಾಗಿದೆ. ರಾಷ್ಟ್ರ ರಾಜಧಾನಿಯ ಗೋಲ್ ಮಾರ್ಕೆಟ್ ಮತ್ತು ಖಾನ್ ಮಾರ್ಕೆಟ್ ಪ್ರದೇಶಗಳಲ್ಲಿ ಜನರು ಮದ್ಯದಂಗಡಿಯ ಮುಂದೆ ಸಾಲು ನಿಂತಿರುವ ಚಿತ್ರವನ್ನು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಚುಚ್ಚುಮದ್ದಿನಿಂದ ಯಾವುದೇ ಪ್ರಯೋಜನವಿಲ್ಲ, ಮದ್ಯ ಸೇವನೆ ಮಾಡುವವರೆಲ್ಲರೂ ಕೊರೊನಾವೈರಸ್​ನಿಂದ ಸುರಕ್ಷಿತವಾಗಿರುತ್ತಾರೆ. ಔಷಧಿಯಿಂದ ಮದ್ಯವೇ ಲೇಸು ಎಂದು ಮದ್ಯದಂಗಡಿಗೆ ಮದ್ಯ ಖರೀದಿ ಮಾಡಲು ಬಂದ ಮಹಿಳೆಯೊಬ್ಬರು ಹೇಳುತ್ತಿರುವ ವಿಡಿಯೊವನ್ನು ಎಎನ್ಐ ಟ್ವೀಟ್ ಮಾಡಿದೆ.

ಲಾಕ್​ಡೌನ್ ಘೋಷಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್, ಖಾಸಗಿ ಸಂಸ್ಥೆಗಳು ವರ್ಕ್ ಫ್ರಮ್ ಹೋಮ್ ವ್ಯವಸ್ಥೆ ಅನುಸರಿಸಲಿದ್ದು ಕೇಂದ್ರ ಸರ್ಕಾರ, ಸಾರ್ವಜನಿಕ ಸೇವಾ ಸಂಸ್ಥೆಗಳು ಎಂದಿನಂತೆ ಕಾರ್ಯವೆಸಗಲಿವೆ. ಈ ರೀತಿಯ ಸಂಸ್ಥೆಗಳಲ್ಲಿ ಕೆಲಸ ಮಾಡುವವರು ಗುರುತಿನ ಚೀಟಿ ಬಳಸುವುದು ಕಡ್ಡಾಯ  ಎಂದಿದ್ದಾರೆ.

ಎಲ್ಲ ಖಾಸಗಿ ಆರೋಗ್ಯ ಸಂಸ್ಥೆ, ಆಸ್ಪತ್ರೆ, ವೈದ್ಯರ ಸೇವೆ, ನರ್ಸಿಂಗ್, ಅರೆ ವೈದ್ಯಕೀಯ ಸಂಸ್ಥೆಗಳು ಕಾರ್ಯವೆಸಗಲಿವೆ. ಗರ್ಭಿಣಿಯುರು, ರೋಗಿಗಳು, ಕೊವಿಡ್ ಪರೀಕ್ಷೆಗಾಗಿ ಹೋಗುವವರು, ಲಸಿಕೆ ಪಡೆಯಲು ಹೋಗುವವರು, ವಿಮಾನ ನಿಲ್ದಾಣಕ್ಕೆ ಹೋಗುವವವರು ಅಥವಾ ಬರುವವರು, ರೈಲು ಮತ್ತು ಬಸ್ ನಿಲ್ದಾಣಗಳಿಗೆ ಹೋಗುವುದಕ್ಕೆ ಅನುಮತಿ ಇದೆ. ಪ್ರಯಾಣಿಕರು ಪ್ರಯಾಣದ ಟಿಕೆಟ್ ತೋರಿಸಬೇಕು, ರೋಗಿಗಳಾಗಿದ್ದರೆ ವೈದ್ಯರ ಸಲಹೆ ಚೀಟಿ, ಕೆಲಸದ ಕಾರ್ಮಿಕರಾಗಿದ್ದರೆ ಸಂಸ್ಥೆಯ ಗುರುತಿನ ಚೀಟಿ ತೋರಿಸಬೇಕು. ವಿದ್ಯಾರ್ಥಿಗಳು ಪರೀಕ್ಷೆ ಗುರುತಿನ ಚೀಟಿ ತೋರಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು, ಶಿಕ್ಷಕರಿಗೆ, ಪರೀಕ್ಷೆಯ ಕರ್ತವ್ಯದಲ್ಲಿರುವ ಇತರ ಸಿಬ್ಬಂದಿಗಳಿಗೆ ನಿರ್ಬಂಧಗಳಿರುವುದಿಲ್ಲ. ಅಂತರ್ ರಾಜ್ಯ, ರಾಜ್ಯದೊಳಗಿನ ಸಾರಿಗೆ ಸಂಪರ್ಕ, ಅಗತ್ಯ ವಸ್ತುಗಳ ಪೂರೈಕೆ ಅಬಾಧಿತವಾಗಿರಲಿದೆ. ಇದಕ್ಕಾಗಿ ಪ್ರತ್ಯೇಕ ಅನುಮತಿ, ಇ- ಪಾಸ್ ಅಗತ್ಯವಿರುವುದಿಲ್ಲ

ಆಹಾರ, ಆಹಾರೋತ್ಪನ್ನ, ದವಸ ಧಾನ್ಯ, ತರಕಾರಿ, ಹಣ್ಣು, ಹಾಲು, ಮೀನು, ಮಾಂಸ, ಪಶು ಆಹಾರ, ಫಾರ್ಮಸಿ, ವೈದ್ಯಕೀಯ ಕೇಂದ್ರಗಳು, ಪತ್ರಿಕೆ, ಬ್ಯಾಂಕ್, ಎಟಿಎಂ, ಸ್ಟಾಕ್ ಎಕ್ಸ್​ಚೇಂಜ್, ಟೆಲಿ ಕಮ್ಯುನಿಕೇಷನ್, ಇಂಟರ್ನೆಟ್, ಬ್ರಾಡ್ ಕಾಸ್ಟಿಂಗ್​ ಮತ್ತು ಕೇಬಲ್ ಸರ್ವೀಸ್, ಐಟಿ ಮತ್ತು ಐಟಿ ಸಂಬಂಧಿತ ಸೇವೆಗಳು ಇರಲಿವೆ.

ದೆಹಲಿಯಲ್ಲಿ ಭಾನುವಾರ 25,462 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು ಪಾಸಿಟಿವಿಟಿ ದರ 29.74 ಆಗಿದೆ. ಕಳೆದ 24ಗಂಟೆಗಳಲ್ಲಿ ಕೊವಿಡ್ ನಿಂದ 161 ಮಂದಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ 6 ದಿನಗಳ ಲಾಕ್​ಡೌನ್; ಇಂದು ರಾತ್ರಿಯಿಂದಲೇ ಕಠಿಣ ನಿಯಮ ಜಾರಿ: ಅರವಿಂದ ಕೇಜ್ರಿವಾಲ್

(After 6 day Lockdown announcement in Delhi long queues were seen outside liquor shops)

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು