AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Caste Census ಬಿಹಾರದಲ್ಲಿ ಜಾತಿ ಜನಗಣತಿಗೆ ಸಿಎಂ ನಿತೀಶ್ ಕುಮಾರ್ ನಿರ್ಧಾರ

ದೇಶದಾದ್ಯಂತ ಜಾತಿಜನಗಣತಿ ನಡೆಸುವುದಿಲ್ಲ ಎಂದು ಕೇಂದ್ರ ಸ್ಪಷ್ಟ ಪಡಿಸಿದೆ. ಹಾಗಾಗಿ ನಾವು ರಾಜ್ಯದಲ್ಲಿ ನಾವೇ ಜಾತಿಗಣತಿ ಮಾಡಲು ನಿರ್ಧರಿಸಿದ್ದೇವೆ, ಅದರ ಬಗ್ಗೆ ಸಂಪೂರ್ಣ ಒಮ್ಮತವಿದೆ.

Caste Census ಬಿಹಾರದಲ್ಲಿ ಜಾತಿ ಜನಗಣತಿಗೆ ಸಿಎಂ ನಿತೀಶ್ ಕುಮಾರ್ ನಿರ್ಧಾರ
ನಿತೀಶ್ ಕುಮಾರ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jun 01, 2022 | 10:07 PM

Share

ದೇಶದಲ್ಲಿ ಜಾತಿ ಜನಗಣತಿ (caste census) ಪ್ರಕ್ರಿಯೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ ನಂತರ ಸರ್ವ ಪಕ್ಷ ಸಭೆ ಕರೆದ ಬಿಹಾರದ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ತಮ್ಮ ರಾಜ್ಯದಲ್ಲಿ ಜಾತಿ ಜನಗಣತಿ ನಡೆಸುವುದಾಗಿ ಬುಧವಾರ ಹೇಳಿದ್ದಾರೆ. ಸರ್ವಪಕ್ಷ ಸಭೆ ನಂತರ ಮಾತನಾಡಿದ ನಿತೀಶ್ ಕುಮಾರ್, ಎಲ್ಲ 9 ಪಕ್ಷಗಳು ಜಾತಿ ಜನಗಣತಿ ನಡೆಸಬಹುದು ಎಂದು ಒಪ್ಪಿವೆ. ಇದಕ್ಕೆ ಸಚಿವ ಸಂಪುಟದಿಂದ ಶೀಘ್ರದಲ್ಲೇ ಒಪ್ಪಿಗೆ ನೀಡಿ, ಅಗತ್ಯ ನಿಧಿ ಅನುದಾನ ನೀಡಲಾಗುವುದು. ಈ ಬಗ್ಗೆ ಪ್ರಕಟಣೆ ಹೊರಡಿಸಿ ಪ್ರಕ್ರಿಯೆ ಪೂರ್ತಿಗೊಳಿಸಲು ಡೆಡ್ ಲೈನ್ ನೀಡಲಾಗುವುದು ಎಂದಿದ್ದಾರೆ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ದೇಶದಾದ್ಯಂತ ಜಾತಿಜನಗಮತಿ ನಡೆಸಬೇಕು ಎಂದು ಕಳೆದ ವರ್ಷ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದವು. ದೇಶದಾದ್ಯಂತ ಜಾತಿಜನಗಣತಿ ನಡೆಸುವುದಿಲ್ಲ ಎಂದು ಕೇಂದ್ರ ಸ್ಪಷ್ಟ ಪಡಿಸಿದೆ. ಹಾಗಾಗಿ ನಾವು ರಾಜ್ಯದಲ್ಲಿ ನಾವೇ ಜಾತಿಗಣತಿ ಮಾಡಲು ನಿರ್ಧರಿಸಿದ್ದೇವೆ, ಅದರ ಬಗ್ಗೆ ಸಂಪೂರ್ಣ ಒಮ್ಮತವಿದೆ ಎಂದು ಅವರು ಹೇಳಿದ್ದಾರೆ.  ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಾರಣ ಎರಡೂವರೆ ತಿಂಗಳು ಸರ್ವಪಕ್ಷ ಸಭೆ ವಿಳಂಬವಾಗಿದೆ ಎಂದು ಸಿಎಂ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಡಾ. ಸಂಜಯ್ ಜೈಸ್ವಾಲ್ ಮತ್ತು ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ಸಭೆಯಲ್ಲಿ ಭಾಗವಹಿಸಿದ್ದರು. ಆರ್‌ಜೆಡಿಯನ್ನು ಪ್ರತಿಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಮತ್ತು ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ ಪ್ರತಿನಿಧಿಸಿದ್ದರು. ಎಐಎಂಐಎಂ ಬಿಹಾರ ಮುಖ್ಯಸ್ಥ ಅಖ್ತರುಲ್ ಇಮಾನ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

“ನಾವು ಜಾತಿ ಗಣತಿಗೆ ಬಹಳ ಹಿಂದಿನಿಂದಲೂ ಬೇಡಿಕೆ ಇಟ್ಟಿದ್ದೇವೆ. ರಾಷ್ಟ್ರವ್ಯಾಪಿ ಜನಗಣತಿ ಸೂಕ್ತವಾಗಿರುತ್ತಿತ್ತು. ಆದರೆ ಬಿಹಾರ ತನ್ನದೇ ಆದ ಜಾತಿ ಗಣತಿಯನ್ನು ನಡೆಸುತ್ತಿದೆ ಎಂದು ನಮಗೆ ತೃಪ್ತಿ ಇದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ
Image
Anil Hegde: ಬಿಹಾರ ರಾಜ್ಯಸಭಾ ಉಪಚುನಾವಣೆ; ಜೆಡಿಯುದಿಂದ ಮಂಗಳೂರು ಮೂಲದ ಅನಿಲ್ ಹೆಗ್ಡೆ ಕಣಕ್ಕೆ
Image
ಪ್ರತಿಯೊಬ್ಬರ ಅಭಿಪ್ರಾಯ ಮುಖ್ಯವಲ್ಲ ಎಂದಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್​​ಗೆ ಪ್ರಶಾಂತ್ ಕಿಶೋರ್​​ ಟ್ವೀಟ್​​ ತಿರುಗೇಟು
Image
ಜಾತಿ ಆಧಾರಿತ ಜನಗಣತಿ ನ್ಯಾಯಸಮ್ಮತ ಬೇಡಿಕೆ: ಎನ್‌ಸಿಬಿಸಿ ಮುಖ್ಯಸ್ಥ

ಕರ್ನಾಟಕ ಮತ್ತು ತೆಲಂಗಾಣ ನಂತರ ಬಿಹಾರ ತನ್ನದೇ ಆದ ಜಾತಿ ಗಣತಿಯನ್ನು ನಡೆಸುವ ಮೂರನೇ ರಾಜ್ಯವಾಗಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!